ಬ್ರೇಕಿಂಗ್ ನ್ಯೂಸ್
15-06-21 10:40 am Filmbeat : Bharath Kumar K ಸಿನಿಮಾ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 10 ಗಂಟೆವರೆಗೂ ಸಂಚಾರಿ ವಿಜಯ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ನೇರವಾಗಿ ಹುಟ್ಟೂರು ಪಂಚನಹಳ್ಳಿ ಗ್ರಾಮಕ್ಕೆ ವಿಜಯ್ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಸಂಚಾರಿ ವಿಜಯ್ ಪಾರ್ಥಿವ ಶರೀರ ಸಾಗಿಸಲು ಯೋಜಿಸಲಾಗಿದೆ. ತುಮಕೂರು, ಶಿರಾ ಫ್ಲೈ ಓವರ್ಗೂ ಮುಂಚೆ ಎಡಗಡೆ ಹುಳಿಯಾರ್ ಮಾರ್ಗವಾಗಿ ಪಂಚನಹಳ್ಳಿ ಗ್ರಾಮಕ್ಕೆ ತಲುಪಲು ನಿರ್ಧರಿಸಲಾಗಿದೆ ಎಂದು ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ವಿ ದತ್ತಾ ಮಾಹಿತಿ ನೀಡಿದರು.
ಹುಟ್ಟೂರಿನಲ್ಲಿ ಸಂಚಾರಿ ವಿಜಯ್ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂಬ ಮಾಹಿತಿ ಹಿನ್ನೆಲೆ ಸಾವಿರಾರು ಜನರು ಅಲ್ಲಿ ಜಮಾಯಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹುಟ್ಟೂರಿನಲ್ಲಿ ಆಪ್ತ ಸ್ನೇಹಿತರೊಬ್ಬರ ತೋಟದಲ್ಲಿ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಅಂತ್ಯಕ್ರಿಯೆಗೆ ತಯಾರಿ ನಡೆಸಲಾಗಿದೆ. ಕೋವಿಡ್ ಲಾಕ್ಡೌನ್ ನಿಯಮದ ಹಿನ್ನೆಲೆ ಅಂತ್ಯಕ್ರಿಯೆ ವೇಳೆ 20 ಜನರಿಗೆ ಮಾತ್ರ ಅವಕಾಶ ಇದೆ. ಹೀಗಾಗಿ, ಜಿಲ್ಲಾಡಳಿತದ ಜೊತೆ ಮಾಜಿ ಶಾಸಕ ದತ್ತಾ ಸಂಪರ್ಕದಲ್ಲಿದ್ದಾರೆ.
ಅಂತ್ಯಕ್ರಿಯೆಗೂ ಮುನ್ನ ಪಂಚನಹಳ್ಳಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕವಷ್ಟೇ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು.

38ನೇ ವರ್ಷದಲ್ಲಿ ತಮ್ಮ ನಟನೆ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಕನ್ನಡ ಚಿತ್ರರಂಗಕ್ಕೆ ಹಮ್ಮೆಯ ವಿಚಾರವಾಗಿದ್ದ ಸಂಚಾರಿ ವಿಜಯ್ಗೆ ಸರ್ಕಾರಿ ಗೌರವ ಸಮೇತ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
(Kannada Copy of Filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm