ಬ್ರೇಕಿಂಗ್ ನ್ಯೂಸ್
15-06-21 10:40 am Filmbeat : Bharath Kumar K ಸಿನಿಮಾ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 10 ಗಂಟೆವರೆಗೂ ಸಂಚಾರಿ ವಿಜಯ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ನೇರವಾಗಿ ಹುಟ್ಟೂರು ಪಂಚನಹಳ್ಳಿ ಗ್ರಾಮಕ್ಕೆ ವಿಜಯ್ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಸಂಚಾರಿ ವಿಜಯ್ ಪಾರ್ಥಿವ ಶರೀರ ಸಾಗಿಸಲು ಯೋಜಿಸಲಾಗಿದೆ. ತುಮಕೂರು, ಶಿರಾ ಫ್ಲೈ ಓವರ್ಗೂ ಮುಂಚೆ ಎಡಗಡೆ ಹುಳಿಯಾರ್ ಮಾರ್ಗವಾಗಿ ಪಂಚನಹಳ್ಳಿ ಗ್ರಾಮಕ್ಕೆ ತಲುಪಲು ನಿರ್ಧರಿಸಲಾಗಿದೆ ಎಂದು ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ವಿ ದತ್ತಾ ಮಾಹಿತಿ ನೀಡಿದರು.
ಹುಟ್ಟೂರಿನಲ್ಲಿ ಸಂಚಾರಿ ವಿಜಯ್ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂಬ ಮಾಹಿತಿ ಹಿನ್ನೆಲೆ ಸಾವಿರಾರು ಜನರು ಅಲ್ಲಿ ಜಮಾಯಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹುಟ್ಟೂರಿನಲ್ಲಿ ಆಪ್ತ ಸ್ನೇಹಿತರೊಬ್ಬರ ತೋಟದಲ್ಲಿ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಅಂತ್ಯಕ್ರಿಯೆಗೆ ತಯಾರಿ ನಡೆಸಲಾಗಿದೆ. ಕೋವಿಡ್ ಲಾಕ್ಡೌನ್ ನಿಯಮದ ಹಿನ್ನೆಲೆ ಅಂತ್ಯಕ್ರಿಯೆ ವೇಳೆ 20 ಜನರಿಗೆ ಮಾತ್ರ ಅವಕಾಶ ಇದೆ. ಹೀಗಾಗಿ, ಜಿಲ್ಲಾಡಳಿತದ ಜೊತೆ ಮಾಜಿ ಶಾಸಕ ದತ್ತಾ ಸಂಪರ್ಕದಲ್ಲಿದ್ದಾರೆ.
ಅಂತ್ಯಕ್ರಿಯೆಗೂ ಮುನ್ನ ಪಂಚನಹಳ್ಳಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕವಷ್ಟೇ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು.

38ನೇ ವರ್ಷದಲ್ಲಿ ತಮ್ಮ ನಟನೆ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಕನ್ನಡ ಚಿತ್ರರಂಗಕ್ಕೆ ಹಮ್ಮೆಯ ವಿಚಾರವಾಗಿದ್ದ ಸಂಚಾರಿ ವಿಜಯ್ಗೆ ಸರ್ಕಾರಿ ಗೌರವ ಸಮೇತ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
(Kannada Copy of Filmbeat Kannada)
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm