ಬ್ರೇಕಿಂಗ್ ನ್ಯೂಸ್
16-06-21 04:21 pm Source: Vijaya Karnataka ಸಿನಿಮಾ
ಬೆಂಗಳೂರು: ಅರ್ಧದಲ್ಲೇ ನಿಂತಿದ್ದ ಬಿಗ್ಬಾಸ್ ಮತ್ತೆ ಪ್ರಾರಂಭವಾಗಲಿದೆ. ಬಿಗ್ಬಾಸ್ ಪ್ರಸಾರವಾಗುವ ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅಧಿಕೃತವಾಗಿ ಮಾಹಿತಿಯನ್ನು ನೀಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಪರಮೇಶ್ವರ್ ಗುಂಡ್ಕಲ್ ಹೇಳಿದ್ದು ಹೀಗಿದೆ
ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.


ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು..
ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.
ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ.
(Kannada Copy of Vijayakarnataka)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm