ಬ್ರೇಕಿಂಗ್ ನ್ಯೂಸ್
16-06-21 04:21 pm Source: Vijaya Karnataka ಸಿನಿಮಾ
ಬೆಂಗಳೂರು: ಅರ್ಧದಲ್ಲೇ ನಿಂತಿದ್ದ ಬಿಗ್ಬಾಸ್ ಮತ್ತೆ ಪ್ರಾರಂಭವಾಗಲಿದೆ. ಬಿಗ್ಬಾಸ್ ಪ್ರಸಾರವಾಗುವ ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅಧಿಕೃತವಾಗಿ ಮಾಹಿತಿಯನ್ನು ನೀಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಪರಮೇಶ್ವರ್ ಗುಂಡ್ಕಲ್ ಹೇಳಿದ್ದು ಹೀಗಿದೆ
ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.


ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು..
ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.
ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ.
(Kannada Copy of Vijayakarnataka)
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm