ಬ್ರೇಕಿಂಗ್ ನ್ಯೂಸ್
29-06-21 11:05 am Filmbeat : Shruthi K ಸಿನಿಮಾ
ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿ ತಾಯಿಯಾದ ಸಂಭ್ರಮದಲ್ಲಿದ್ದಾರೆ. ನಯನಾ ಇಂದು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಅಮೆರಿಕದಲ್ಲಿ ನೆಲೆಸಿರುವ ನಯನಾ ಅಲ್ಲೇ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ.
ಸಂತಸದ ವಿಚಾರವನ್ನು ನಯನಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುದ್ದು ಮಗುವಿನ ಹಸ್ತದ ಫೋಟೋ ಶೇರ್ ಮಾಡಿ, ಗಂಡು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಟೆಂಪಲ್ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ನಯನಾ ಪತಿ ಚರಣ್ ಜೊತೆ ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ.
ಮದುವೆ ಬಳಿಕ ಸಿನಿಮಾರಂಗದಿಂದ ದೂರ ಇರುವ ನಯನ ಬಳಿಕ ಪತಿ ಜೊತೆ ಅಮೆರಿಕಗೆ ತೆರಳಿದರು. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಯನಾ ಸದಾ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಜನವರಿಯಲ್ಲಿ ತಾಯಿಯಾಗುತ್ತಿರುವ ಸಂತಸದ ವಿಚಾರವನ್ನು ನಯನಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಇತ್ತೀಚಿಗಷ್ಟೆ ಕೊರೊನಾ ವ್ಯಾಕ್ಸಿನ್ ಪಡೆದ ಫೋಟೋವನ್ನು ಅಪ್ ಡೇಟ್ ಮಾಡಿದ್ದರು. ಇದೀಗ ತಾಯಿಯಾದ ನಯನಾಗೆ ಅಭಿಮಾನಿಗಳು, ಸ್ನೇಹಿತರು ಹಿತೈಶಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ನಟಿ ನಯನಾ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನೆಮಾತಾಗಿದ್ದರು. 'ಪ್ಯಾಟಿ ಹುಡುಗೀರ ಹಳ್ಳಿ ಲೈಫ್' ರಿಯಾಲಿಟಿ ಶೋ ಮೂಲಕ ಕನ್ನಡಿಗರಿಗೆ ಪರಿಚಿತರಾದ ನಯನಾ ಬಳಿಕ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಮಿಂಚಿದ್ದರು. ವಿನಯ್ ರಾಜ್ ಕುಮಾರ್ ನಟನೆಯ ಸಿದ್ಧಾರ್ಥ ಸಿನಿಮಾ ಸೇರಿದಂತೆ ಇನ್ನು ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ.
2018ರಲ್ಲಿ ನಯನಾ, ಚರಣ ತೇಜ್ ಜೊತೆ ಹಸೆಮಣೆ ಏರಿದರು. ವಿವಾಹ ಬಳಿಕ ನಯನಾ ಸಿನಿಮಾರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಬಳಿಕ ಬಿಗ್ ಬಾಸ್ ರಿಯಾಲಿಟಿ ಶೋ ಎಂಟ್ರಿ ಕೊಟ್ಟಿದ್ದರು. ಕನ್ನಡ ಬಿಗ್ ಬಾಸ್ ಸೀಸನ್ 6ರಲ್ಲಿ ನಯನಾ ಸ್ಪರ್ಧಿಯಾಗಿ ಭಾಗಿಯಾಗಿದ್ದರು.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm