ಬ್ರೇಕಿಂಗ್ ನ್ಯೂಸ್
29-06-21 11:05 am Filmbeat : Shruthi K ಸಿನಿಮಾ
ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿ ತಾಯಿಯಾದ ಸಂಭ್ರಮದಲ್ಲಿದ್ದಾರೆ. ನಯನಾ ಇಂದು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಅಮೆರಿಕದಲ್ಲಿ ನೆಲೆಸಿರುವ ನಯನಾ ಅಲ್ಲೇ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ.
ಸಂತಸದ ವಿಚಾರವನ್ನು ನಯನಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುದ್ದು ಮಗುವಿನ ಹಸ್ತದ ಫೋಟೋ ಶೇರ್ ಮಾಡಿ, ಗಂಡು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಟೆಂಪಲ್ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ನಯನಾ ಪತಿ ಚರಣ್ ಜೊತೆ ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ.
ಮದುವೆ ಬಳಿಕ ಸಿನಿಮಾರಂಗದಿಂದ ದೂರ ಇರುವ ನಯನ ಬಳಿಕ ಪತಿ ಜೊತೆ ಅಮೆರಿಕಗೆ ತೆರಳಿದರು. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಯನಾ ಸದಾ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಜನವರಿಯಲ್ಲಿ ತಾಯಿಯಾಗುತ್ತಿರುವ ಸಂತಸದ ವಿಚಾರವನ್ನು ನಯನಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಇತ್ತೀಚಿಗಷ್ಟೆ ಕೊರೊನಾ ವ್ಯಾಕ್ಸಿನ್ ಪಡೆದ ಫೋಟೋವನ್ನು ಅಪ್ ಡೇಟ್ ಮಾಡಿದ್ದರು. ಇದೀಗ ತಾಯಿಯಾದ ನಯನಾಗೆ ಅಭಿಮಾನಿಗಳು, ಸ್ನೇಹಿತರು ಹಿತೈಶಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ನಟಿ ನಯನಾ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನೆಮಾತಾಗಿದ್ದರು. 'ಪ್ಯಾಟಿ ಹುಡುಗೀರ ಹಳ್ಳಿ ಲೈಫ್' ರಿಯಾಲಿಟಿ ಶೋ ಮೂಲಕ ಕನ್ನಡಿಗರಿಗೆ ಪರಿಚಿತರಾದ ನಯನಾ ಬಳಿಕ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಮಿಂಚಿದ್ದರು. ವಿನಯ್ ರಾಜ್ ಕುಮಾರ್ ನಟನೆಯ ಸಿದ್ಧಾರ್ಥ ಸಿನಿಮಾ ಸೇರಿದಂತೆ ಇನ್ನು ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ.
2018ರಲ್ಲಿ ನಯನಾ, ಚರಣ ತೇಜ್ ಜೊತೆ ಹಸೆಮಣೆ ಏರಿದರು. ವಿವಾಹ ಬಳಿಕ ನಯನಾ ಸಿನಿಮಾರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಬಳಿಕ ಬಿಗ್ ಬಾಸ್ ರಿಯಾಲಿಟಿ ಶೋ ಎಂಟ್ರಿ ಕೊಟ್ಟಿದ್ದರು. ಕನ್ನಡ ಬಿಗ್ ಬಾಸ್ ಸೀಸನ್ 6ರಲ್ಲಿ ನಯನಾ ಸ್ಪರ್ಧಿಯಾಗಿ ಭಾಗಿಯಾಗಿದ್ದರು.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm