ಬ್ರೇಕಿಂಗ್ ನ್ಯೂಸ್
29-06-21 05:36 pm Filmbeat : Bharath Kumar K ಸಿನಿಮಾ
ದಿವಂಗತ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ವಿಶೇಷವಾಗಿ ಗೌರವಿಸಿದೆ.
ಬೈಕ್ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ್ ಸ್ಮರಣಾರ್ಥವಾಗಿ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ತನ್ನ ಥಿಯೇಟರ್ ಬೋರ್ಡ್ ಮೇಲೆ ವಿಜಯ್ ಕುರಿತಾದ ಸಂದೇಶವೊಂದನ್ನು ಪ್ರಕಟಿಸಿದೆ.
24 ಗಂಟೆಗಳ ಕಾಲ ಈ ಸಂದೇಶವನ್ನು ಥಿಯೇಟರ್ ಬೋರ್ಡ್ನಲ್ಲಿ ಪ್ರದರ್ಶಿಸಲಾಗಿದೆ. ಈ ಬಗ್ಗೆ 'ನಾನು ಅವನಲ್ಲ ಅವಳು' ಸಿನಿಮಾದ ನಿರ್ದೇಶಕ ಲಿಂಗದೇವರು ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

''ಅಮೇರಿಕಾದ ಫ್ರಾಂಕ್ಲಿನ್ ಥಿಯೇಟರ್ನವರು ವಿಜಯ್ ನೆನಪಲ್ಲಿ ಇಂದು 'Always in our Heart , Sanchari Vijay, Gone Yet Not Forgotten' ಎಂಬ ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು'' ಎಂದು ಲಿಂಗದೇವರು ಪೋಸ್ಟ್ ಹಾಕಿದ್ದಾರೆ. ಜೂನ್ 15 ರಂದು ಸಂಚಾರಿ ನಿಧನ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೆದುಳಿನ ಬಲ ಭಾಗ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಕೊನೆಯುಸಿರೆಳೆದರು.
ಸಾವಿನ ಬಳಿಕವೂ ಸಾರ್ಥಕತೆ ಮೆರೆದ ನಟ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡಿದರು. ಕಣ್ಣು, ಕಿಡ್ನಿ, ಲಿವರ್, ಹಾರ್ಟ್ ವ್ಯಾಲ್ಸ್ ದಾನ ಮಾಡುವ ಮೂಲಕ ಏಳು ಜನರ ಬದುಕಲ್ಲಿ ಬೆಳಕಾದರು.
ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೇ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಲಭಿಸಿತ್ತು.
Kannada Copy of Filmbeat Kannada)
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm