ಬ್ರೇಕಿಂಗ್ ನ್ಯೂಸ್
29-06-21 05:36 pm Filmbeat : Bharath Kumar K ಸಿನಿಮಾ
ದಿವಂಗತ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ವಿಶೇಷವಾಗಿ ಗೌರವಿಸಿದೆ.
ಬೈಕ್ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ್ ಸ್ಮರಣಾರ್ಥವಾಗಿ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ತನ್ನ ಥಿಯೇಟರ್ ಬೋರ್ಡ್ ಮೇಲೆ ವಿಜಯ್ ಕುರಿತಾದ ಸಂದೇಶವೊಂದನ್ನು ಪ್ರಕಟಿಸಿದೆ.
24 ಗಂಟೆಗಳ ಕಾಲ ಈ ಸಂದೇಶವನ್ನು ಥಿಯೇಟರ್ ಬೋರ್ಡ್ನಲ್ಲಿ ಪ್ರದರ್ಶಿಸಲಾಗಿದೆ. ಈ ಬಗ್ಗೆ 'ನಾನು ಅವನಲ್ಲ ಅವಳು' ಸಿನಿಮಾದ ನಿರ್ದೇಶಕ ಲಿಂಗದೇವರು ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

''ಅಮೇರಿಕಾದ ಫ್ರಾಂಕ್ಲಿನ್ ಥಿಯೇಟರ್ನವರು ವಿಜಯ್ ನೆನಪಲ್ಲಿ ಇಂದು 'Always in our Heart , Sanchari Vijay, Gone Yet Not Forgotten' ಎಂಬ ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು'' ಎಂದು ಲಿಂಗದೇವರು ಪೋಸ್ಟ್ ಹಾಕಿದ್ದಾರೆ. ಜೂನ್ 15 ರಂದು ಸಂಚಾರಿ ನಿಧನ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೆದುಳಿನ ಬಲ ಭಾಗ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಕೊನೆಯುಸಿರೆಳೆದರು.
ಸಾವಿನ ಬಳಿಕವೂ ಸಾರ್ಥಕತೆ ಮೆರೆದ ನಟ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡಿದರು. ಕಣ್ಣು, ಕಿಡ್ನಿ, ಲಿವರ್, ಹಾರ್ಟ್ ವ್ಯಾಲ್ಸ್ ದಾನ ಮಾಡುವ ಮೂಲಕ ಏಳು ಜನರ ಬದುಕಲ್ಲಿ ಬೆಳಕಾದರು.
ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೇ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಲಭಿಸಿತ್ತು.
Kannada Copy of Filmbeat Kannada)
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm