ಬ್ರೇಕಿಂಗ್ ನ್ಯೂಸ್
29-06-21 05:36 pm Filmbeat : Bharath Kumar K ಸಿನಿಮಾ
ದಿವಂಗತ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ವಿಶೇಷವಾಗಿ ಗೌರವಿಸಿದೆ.
ಬೈಕ್ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ್ ಸ್ಮರಣಾರ್ಥವಾಗಿ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ತನ್ನ ಥಿಯೇಟರ್ ಬೋರ್ಡ್ ಮೇಲೆ ವಿಜಯ್ ಕುರಿತಾದ ಸಂದೇಶವೊಂದನ್ನು ಪ್ರಕಟಿಸಿದೆ.
24 ಗಂಟೆಗಳ ಕಾಲ ಈ ಸಂದೇಶವನ್ನು ಥಿಯೇಟರ್ ಬೋರ್ಡ್ನಲ್ಲಿ ಪ್ರದರ್ಶಿಸಲಾಗಿದೆ. ಈ ಬಗ್ಗೆ 'ನಾನು ಅವನಲ್ಲ ಅವಳು' ಸಿನಿಮಾದ ನಿರ್ದೇಶಕ ಲಿಂಗದೇವರು ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
''ಅಮೇರಿಕಾದ ಫ್ರಾಂಕ್ಲಿನ್ ಥಿಯೇಟರ್ನವರು ವಿಜಯ್ ನೆನಪಲ್ಲಿ ಇಂದು 'Always in our Heart , Sanchari Vijay, Gone Yet Not Forgotten' ಎಂಬ ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು'' ಎಂದು ಲಿಂಗದೇವರು ಪೋಸ್ಟ್ ಹಾಕಿದ್ದಾರೆ. ಜೂನ್ 15 ರಂದು ಸಂಚಾರಿ ನಿಧನ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೆದುಳಿನ ಬಲ ಭಾಗ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಕೊನೆಯುಸಿರೆಳೆದರು.
ಸಾವಿನ ಬಳಿಕವೂ ಸಾರ್ಥಕತೆ ಮೆರೆದ ನಟ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡಿದರು. ಕಣ್ಣು, ಕಿಡ್ನಿ, ಲಿವರ್, ಹಾರ್ಟ್ ವ್ಯಾಲ್ಸ್ ದಾನ ಮಾಡುವ ಮೂಲಕ ಏಳು ಜನರ ಬದುಕಲ್ಲಿ ಬೆಳಕಾದರು.
ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೇ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಲಭಿಸಿತ್ತು.
Kannada Copy of Filmbeat Kannada)
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm