ಬ್ರೇಕಿಂಗ್ ನ್ಯೂಸ್
01-09-20 03:43 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಕಿಚ್ಚ ಸುದೀಪ್ ಅವರ ಈ ಬಾರಿಯ ಹುಟ್ಟುಹಬ್ಬ ಹಲವು ರೀತಿಯಲ್ಲಿ ವಿಶೇಷತೆಯನ್ನು ಹೊಂದಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆಯಾಗಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಿಚ್ಚ ಅವರ ಬೈಯೋಗ್ರಫಿಯನ್ನು ನಾಳೆ ಬೆಳಗ್ಗೆ 11:30 ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಸುದೀಪ್ ಅವರ ಬದುಕಿನ ಸಮಗ್ರ ಚಿತ್ರಣ ಇರುವ ಈ ಪುಸ್ತಕವನ್ನು ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಡಾ. ಶರಣು ಹುಲ್ಲೂರು ಬರೆದಿದ್ದಾರೆ. 'ಕಿಚ್ಚ' ಸುದೀಪ್ ಬಣ್ಣದ ಲೋಕಕ್ಕೆ ಬಂದು 25 ವರ್ಷ ತುಂಬಿದ ಈ ಸಂದರ್ಭದಲ್ಲಿ ಅವರ ಬಯೋಗ್ರಫಿ ಬಿಡುಗಡೆ ಆಗುತ್ತಿರುವುದು ವಿಶೇಷ. ಈವರೆಗೂ ಎಲ್ಲಿಯೂ ಕಾಣದೇ ಇರುವಂತಹ ಸುದೀಪ್ ಅವರ ಅನೇಕ ಫೋಟೋಗಳು, ಮಾಹಿತಿಗಳು ಈ ಪುಸ್ತಕದಲ್ಲಿ ಇದೆಯೆಂದು ಹೇಳಿದ್ದಾರೆ .

ಸುದೀಪ್ ಕುರಿತು ಅವರ ಕುಟುಂಬದವರು ಮಾತನಾಡಿದ್ದಾರೆ. ಸುದೀಪ್ ಅವರ ಬಾಲ್ಯದಿಂದ ಈವರೆಗಿನ ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದ್ದು, ಸಿನಿಮಾರಂಗದ ಅನೇಕ ಘಟನೆಗಳಿಗೆ ಈ ಪುಸ್ತಕ ಸಾಕ್ಷಿಯಾಗಲಿದೆ. 'ನನ್ನ ಪಾಲಿಗೆ ಇದೊಂದು ಸಂಭ್ರಮದ ಕ್ಷಣ. ಕನ್ನಡದ ನಟನೊಬ್ಬ ಹಾಲಿವುಡ್ವರೆಗೂ ತಲುಪಿದ್ದು ವಿಶೇಷ ಸಂಗತಿ. 'ಕಿಚ್ಚ' ಸುದೀಪ್ ಅವರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಪುಸ್ತಕ ಇದಾಗಿದ್ದು, ಅಪರೂಪದ ಅನೇಕ ಫೋಟೋಗಳನ್ನು ಬಳಸಲಾಗಿದೆ. ಈವರೆಗೂ ಆ ಫೋಟೋಗಳನ್ನು ಯಾರೂ ನೋಡಿರಲು ಸಾಧ್ಯವಿಲ್ಲ. ಅಲ್ಲದೇ, ಸುದೀಪ್ ಅವರ ತಂದೆ, ತಾಯಿ, ಅಕ್ಕಂದಿರು, ಪತ್ನಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಅವರ ಪುತ್ರಿ, ಅಪ್ಪನಿಗಾಗಿ ಪತ್ರ ಬರೆದಿದ್ದಾರೆ. ಕಿಚ್ಚನ ಬದುಕಿನ ಅನೇಕ ಆಸಕ್ತಿಕರ ಸಂಗತಿಗಳನ್ನು ಒಳಗೊಂಡಿರುವ ಪುಸ್ತಕ ಇದಾಗಿದೆ. ಸುದೀಪ್ ಅವರ ಕುರಿತಾಗಿ ಬರುತ್ತಿರುವ ಮೊದಲ ಪುಸ್ತಕ ಇದಾಗಿದೆ ಎನ್ನುವುದು ನನಗೆ ಹೆಮ್ಮೆ' ಎನ್ನುತ್ತಾರೆ ಲೇಖಕ ಶರಣು ಹುಲ್ಲೂರು.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm