ಬ್ರೇಕಿಂಗ್ ನ್ಯೂಸ್
01-09-20 03:43 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಕಿಚ್ಚ ಸುದೀಪ್ ಅವರ ಈ ಬಾರಿಯ ಹುಟ್ಟುಹಬ್ಬ ಹಲವು ರೀತಿಯಲ್ಲಿ ವಿಶೇಷತೆಯನ್ನು ಹೊಂದಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆಯಾಗಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಿಚ್ಚ ಅವರ ಬೈಯೋಗ್ರಫಿಯನ್ನು ನಾಳೆ ಬೆಳಗ್ಗೆ 11:30 ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಸುದೀಪ್ ಅವರ ಬದುಕಿನ ಸಮಗ್ರ ಚಿತ್ರಣ ಇರುವ ಈ ಪುಸ್ತಕವನ್ನು ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಡಾ. ಶರಣು ಹುಲ್ಲೂರು ಬರೆದಿದ್ದಾರೆ. 'ಕಿಚ್ಚ' ಸುದೀಪ್ ಬಣ್ಣದ ಲೋಕಕ್ಕೆ ಬಂದು 25 ವರ್ಷ ತುಂಬಿದ ಈ ಸಂದರ್ಭದಲ್ಲಿ ಅವರ ಬಯೋಗ್ರಫಿ ಬಿಡುಗಡೆ ಆಗುತ್ತಿರುವುದು ವಿಶೇಷ. ಈವರೆಗೂ ಎಲ್ಲಿಯೂ ಕಾಣದೇ ಇರುವಂತಹ ಸುದೀಪ್ ಅವರ ಅನೇಕ ಫೋಟೋಗಳು, ಮಾಹಿತಿಗಳು ಈ ಪುಸ್ತಕದಲ್ಲಿ ಇದೆಯೆಂದು ಹೇಳಿದ್ದಾರೆ .

ಸುದೀಪ್ ಕುರಿತು ಅವರ ಕುಟುಂಬದವರು ಮಾತನಾಡಿದ್ದಾರೆ. ಸುದೀಪ್ ಅವರ ಬಾಲ್ಯದಿಂದ ಈವರೆಗಿನ ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದ್ದು, ಸಿನಿಮಾರಂಗದ ಅನೇಕ ಘಟನೆಗಳಿಗೆ ಈ ಪುಸ್ತಕ ಸಾಕ್ಷಿಯಾಗಲಿದೆ. 'ನನ್ನ ಪಾಲಿಗೆ ಇದೊಂದು ಸಂಭ್ರಮದ ಕ್ಷಣ. ಕನ್ನಡದ ನಟನೊಬ್ಬ ಹಾಲಿವುಡ್ವರೆಗೂ ತಲುಪಿದ್ದು ವಿಶೇಷ ಸಂಗತಿ. 'ಕಿಚ್ಚ' ಸುದೀಪ್ ಅವರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಪುಸ್ತಕ ಇದಾಗಿದ್ದು, ಅಪರೂಪದ ಅನೇಕ ಫೋಟೋಗಳನ್ನು ಬಳಸಲಾಗಿದೆ. ಈವರೆಗೂ ಆ ಫೋಟೋಗಳನ್ನು ಯಾರೂ ನೋಡಿರಲು ಸಾಧ್ಯವಿಲ್ಲ. ಅಲ್ಲದೇ, ಸುದೀಪ್ ಅವರ ತಂದೆ, ತಾಯಿ, ಅಕ್ಕಂದಿರು, ಪತ್ನಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಅವರ ಪುತ್ರಿ, ಅಪ್ಪನಿಗಾಗಿ ಪತ್ರ ಬರೆದಿದ್ದಾರೆ. ಕಿಚ್ಚನ ಬದುಕಿನ ಅನೇಕ ಆಸಕ್ತಿಕರ ಸಂಗತಿಗಳನ್ನು ಒಳಗೊಂಡಿರುವ ಪುಸ್ತಕ ಇದಾಗಿದೆ. ಸುದೀಪ್ ಅವರ ಕುರಿತಾಗಿ ಬರುತ್ತಿರುವ ಮೊದಲ ಪುಸ್ತಕ ಇದಾಗಿದೆ ಎನ್ನುವುದು ನನಗೆ ಹೆಮ್ಮೆ' ಎನ್ನುತ್ತಾರೆ ಲೇಖಕ ಶರಣು ಹುಲ್ಲೂರು.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm