ಬ್ರೇಕಿಂಗ್ ನ್ಯೂಸ್
01-09-20 03:43 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಕಿಚ್ಚ ಸುದೀಪ್ ಅವರ ಈ ಬಾರಿಯ ಹುಟ್ಟುಹಬ್ಬ ಹಲವು ರೀತಿಯಲ್ಲಿ ವಿಶೇಷತೆಯನ್ನು ಹೊಂದಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆಯಾಗಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಿಚ್ಚ ಅವರ ಬೈಯೋಗ್ರಫಿಯನ್ನು ನಾಳೆ ಬೆಳಗ್ಗೆ 11:30 ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಸುದೀಪ್ ಅವರ ಬದುಕಿನ ಸಮಗ್ರ ಚಿತ್ರಣ ಇರುವ ಈ ಪುಸ್ತಕವನ್ನು ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಡಾ. ಶರಣು ಹುಲ್ಲೂರು ಬರೆದಿದ್ದಾರೆ. 'ಕಿಚ್ಚ' ಸುದೀಪ್ ಬಣ್ಣದ ಲೋಕಕ್ಕೆ ಬಂದು 25 ವರ್ಷ ತುಂಬಿದ ಈ ಸಂದರ್ಭದಲ್ಲಿ ಅವರ ಬಯೋಗ್ರಫಿ ಬಿಡುಗಡೆ ಆಗುತ್ತಿರುವುದು ವಿಶೇಷ. ಈವರೆಗೂ ಎಲ್ಲಿಯೂ ಕಾಣದೇ ಇರುವಂತಹ ಸುದೀಪ್ ಅವರ ಅನೇಕ ಫೋಟೋಗಳು, ಮಾಹಿತಿಗಳು ಈ ಪುಸ್ತಕದಲ್ಲಿ ಇದೆಯೆಂದು ಹೇಳಿದ್ದಾರೆ .

ಸುದೀಪ್ ಕುರಿತು ಅವರ ಕುಟುಂಬದವರು ಮಾತನಾಡಿದ್ದಾರೆ. ಸುದೀಪ್ ಅವರ ಬಾಲ್ಯದಿಂದ ಈವರೆಗಿನ ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದ್ದು, ಸಿನಿಮಾರಂಗದ ಅನೇಕ ಘಟನೆಗಳಿಗೆ ಈ ಪುಸ್ತಕ ಸಾಕ್ಷಿಯಾಗಲಿದೆ. 'ನನ್ನ ಪಾಲಿಗೆ ಇದೊಂದು ಸಂಭ್ರಮದ ಕ್ಷಣ. ಕನ್ನಡದ ನಟನೊಬ್ಬ ಹಾಲಿವುಡ್ವರೆಗೂ ತಲುಪಿದ್ದು ವಿಶೇಷ ಸಂಗತಿ. 'ಕಿಚ್ಚ' ಸುದೀಪ್ ಅವರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಪುಸ್ತಕ ಇದಾಗಿದ್ದು, ಅಪರೂಪದ ಅನೇಕ ಫೋಟೋಗಳನ್ನು ಬಳಸಲಾಗಿದೆ. ಈವರೆಗೂ ಆ ಫೋಟೋಗಳನ್ನು ಯಾರೂ ನೋಡಿರಲು ಸಾಧ್ಯವಿಲ್ಲ. ಅಲ್ಲದೇ, ಸುದೀಪ್ ಅವರ ತಂದೆ, ತಾಯಿ, ಅಕ್ಕಂದಿರು, ಪತ್ನಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಅವರ ಪುತ್ರಿ, ಅಪ್ಪನಿಗಾಗಿ ಪತ್ರ ಬರೆದಿದ್ದಾರೆ. ಕಿಚ್ಚನ ಬದುಕಿನ ಅನೇಕ ಆಸಕ್ತಿಕರ ಸಂಗತಿಗಳನ್ನು ಒಳಗೊಂಡಿರುವ ಪುಸ್ತಕ ಇದಾಗಿದೆ. ಸುದೀಪ್ ಅವರ ಕುರಿತಾಗಿ ಬರುತ್ತಿರುವ ಮೊದಲ ಪುಸ್ತಕ ಇದಾಗಿದೆ ಎನ್ನುವುದು ನನಗೆ ಹೆಮ್ಮೆ' ಎನ್ನುತ್ತಾರೆ ಲೇಖಕ ಶರಣು ಹುಲ್ಲೂರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm