ಬ್ರೇಕಿಂಗ್ ನ್ಯೂಸ್
30-06-21 01:54 pm Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ನಸೀರುದ್ದೀನ್ ಶಾ ಅನಾರೋಗ್ಯದಿಂದ ದಿಢೀರ್ ಆಸ್ಪತ್ರೆ ದಾಖಲಾಗಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹಿರಿಯ ನಟನಿಗೆ ನ್ಯುಮೋನಿಯಾ ಇದೆ ತಿಳಿದುಬಂದಿದೆ. ನಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
"ಎರಡು ದಿನಗಳ ಹಿಂದೆಯೇ ನಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಆಂಗ್ಲ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. "ನಸೀರುದ್ದೀನ್ ಶಾ ಅವರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಸೀರುದ್ದೀನ್ ಶಾ ಜೊತೆ ಪತ್ನಿ ರತ್ನ ಪಾಠಕ್ ಮತ್ತು ಅವರ ಮಕ್ಕಳು ಇದ್ದಾರೆ" ಎಂದು ಮ್ಯಾನೇಜರ್ ಹೇಳಿದ್ದಾರೆ.
ಕಳೆದ ವರ್ಷ ನಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಬಳಿಕ ಅವರ ಪುತ್ರ ವಿವಾನ್ ಶಾ ಸುದ್ದಿ ತಳ್ಳಿ ಹಾಕಿದ್ದರು. "ಬಾಬಾ ಚೆನ್ನಾಗಿಟೇ ಇದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಎಲ್ಲಾ ವದಂತಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ" ಎಂದು ಪ್ರತಿಕ್ರಿಯೆ ನೀಡುವ ಮೂಲಕ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದರು.
ಭಾರತೀಯ ಸಿನಿಮಾರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ನಸೀರುದ್ದೀನ್ ಶಾ ಕೂಡ ಒಬ್ಬರು. ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ನೀಡಿ ಗೌರವಿಸಿದೆ. ನಸೀರುದ್ದೀನ್ ಶಾ ಕೊನೆಯದಾಗಿ ಕಳೆದ ವರ್ಷ ಬಿಡುಗಡೆಯಾದ ಬಂದಿಶ್ ಬ್ಯಾಂಡಿಟ್ಸ್ ಮತ್ತು ಮೀ ರಕ್ಸಮ್ ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಿದ್ದರು.
ನಸೀರುದ್ದೀನ್ ಶಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲೂ ನಟಿಸಿದ್ದಾರೆ. ವಿಶೇಷ ಎಂದರೆ ಕನ್ನಡದ ಒಂದು ಸಿನಿಮಾದಲ್ಲೂ ನಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಮನೆ' ಸಿನಿಮಾದಲ್ಲಿ ನಟಿಸಿದ್ದಾರೆ.
(Kannada Copy of Filmbeat Kannada)
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm