ಬ್ರೇಕಿಂಗ್ ನ್ಯೂಸ್
30-06-21 01:54 pm Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ನಸೀರುದ್ದೀನ್ ಶಾ ಅನಾರೋಗ್ಯದಿಂದ ದಿಢೀರ್ ಆಸ್ಪತ್ರೆ ದಾಖಲಾಗಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹಿರಿಯ ನಟನಿಗೆ ನ್ಯುಮೋನಿಯಾ ಇದೆ ತಿಳಿದುಬಂದಿದೆ. ನಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
"ಎರಡು ದಿನಗಳ ಹಿಂದೆಯೇ ನಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಆಂಗ್ಲ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. "ನಸೀರುದ್ದೀನ್ ಶಾ ಅವರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಸೀರುದ್ದೀನ್ ಶಾ ಜೊತೆ ಪತ್ನಿ ರತ್ನ ಪಾಠಕ್ ಮತ್ತು ಅವರ ಮಕ್ಕಳು ಇದ್ದಾರೆ" ಎಂದು ಮ್ಯಾನೇಜರ್ ಹೇಳಿದ್ದಾರೆ.
ಕಳೆದ ವರ್ಷ ನಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಬಳಿಕ ಅವರ ಪುತ್ರ ವಿವಾನ್ ಶಾ ಸುದ್ದಿ ತಳ್ಳಿ ಹಾಕಿದ್ದರು. "ಬಾಬಾ ಚೆನ್ನಾಗಿಟೇ ಇದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಎಲ್ಲಾ ವದಂತಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ" ಎಂದು ಪ್ರತಿಕ್ರಿಯೆ ನೀಡುವ ಮೂಲಕ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದರು.

ಭಾರತೀಯ ಸಿನಿಮಾರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ನಸೀರುದ್ದೀನ್ ಶಾ ಕೂಡ ಒಬ್ಬರು. ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ನೀಡಿ ಗೌರವಿಸಿದೆ. ನಸೀರುದ್ದೀನ್ ಶಾ ಕೊನೆಯದಾಗಿ ಕಳೆದ ವರ್ಷ ಬಿಡುಗಡೆಯಾದ ಬಂದಿಶ್ ಬ್ಯಾಂಡಿಟ್ಸ್ ಮತ್ತು ಮೀ ರಕ್ಸಮ್ ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಿದ್ದರು.
ನಸೀರುದ್ದೀನ್ ಶಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲೂ ನಟಿಸಿದ್ದಾರೆ. ವಿಶೇಷ ಎಂದರೆ ಕನ್ನಡದ ಒಂದು ಸಿನಿಮಾದಲ್ಲೂ ನಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಮನೆ' ಸಿನಿಮಾದಲ್ಲಿ ನಟಿಸಿದ್ದಾರೆ.
(Kannada Copy of Filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm