ಬ್ರೇಕಿಂಗ್ ನ್ಯೂಸ್
01-07-21 10:55 am Filmbeat ಸಿನಿಮಾ
ಬಾಲಿವುಡ್ ಖ್ಯಾತ ನಟಿ ಮಂದಿರ ಬೇಡಿ ಪತಿ ಹಾಗೂ ಚಲನಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ರಾಜ್ ಕೌಶಲ್ ಹಠಾತ್ ನಿಧನ ಇಡೀ ಬಾಲಿವುಡ್ ಗೆ ಶಾಕ್ ನೀಡಿದೆ. 49 ವರ್ಷದ ರಾಜ್ ಕೌಶಲ್ ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾದರು.
ರಾಜ್ ಕೌಶಲ್ ನಿಧನದ ಶಾಕ್ ನಲ್ಲೇ ಬಾಲಿವುಡ್ ನ ಅನೇಕ ಮಂದಿ ಟ್ವಿಟರ್ ಮೂಲಕ ಸಂತಾಪ ಸೂಚಿಸಿದರು. ಇನ್ನು ಕೆಲವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಪತಿಯನ್ನು ಕಳೆದುಕೊಂಡು ಬಿಕ್ಕಿ ಬಿಕ್ಕಿ ಅಳುತ್ತಿದ್ದ ನಟಿ, ರಾಜ್ ಕೌಶಲ್ ಪತ್ನಿ ಮಂದಿರಾ ಬೇಡಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಪತಿಯ ಶವದ ಮುಂದೆ ಕಣ್ಣೀರಿಡುತ್ತಿದ್ದ ಮಂದಿರಾ ಬೇಡಿಯನ್ನು ನಟ ರೋಹಿತ್ ರಾಯ್ ಸಮಾಧಾನ ಪಡಿಸಿದರು. ರಾಜ್ ಕೌಶಲ್ ಅಂತ್ಯಕ್ರಿಯೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅತ್ಯಂತ ಸ್ಟ್ರಾಂಗ್ ಮತ್ತು ಬೋಲ್ಡ್ ನಟಿ ಮಂದಿರ ಬೇಡಿ ಸಂಪ್ರದಾಯ ಮೀರಿ ಪತಿಯ ಅಂತ್ಯಸಂಸ್ಕಾರ ಮಾಡಿದ್ದಾರೆ.
ಹಿಂದೂ ಸಂಪ್ರದಾಯದ ಪ್ರಕಾರ ಪುರುಷರು ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಮಾಡುತ್ತಾರೆ. ಶವದ ಮಂದೆ ಹೊತ್ತು ಸಾಗುವ ಮಡಿಕೆಯನ್ನು ಮಹಿಳೆಯರು ಸ್ಪರ್ಶಿಸುವುದಿಲ್ಲ. ಆದರೆ ಮಂದಿರಾ ಬೇಡಿ ಸಂಪ್ರದಾಯ ಮೀರಿ ತಾವೆ ಮಡಿಕೆ ಹೊತ್ತು ಸಾಗುವ ಮೂಲಕ ಪತಿಯ ಅಂತಿಮ ವಿಧಿವಿಧಾನಗಳನ್ನು ಮಾಡಿದ್ದಾರೆ. ಅಂತ್ಯಕ್ರಿಯೆ ವೇಳೆ ಬಾಲಿವುಡ್ ಗಣ್ಯರಾದ ಅನೀಶ್ ಚೌಧರಿ, ರೋಹಿತಿ ರಾಯ್, ಅಪೂರ್ವ ಅಗ್ನಿಹೋತ್ರ, ಹುಮಾ ಖುರೇಷಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಎಲ್ಲರೂ ಮಂದಿರ ಬೇಡಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

1999ರಲ್ಲಿ ಮಂದಿರಾ ಬೇಡಿ, ರಾಜ್ ಕೌಶಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮಂದಿರ 2011ರಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದರು. ನಂತರ ಎರಡನೇ ಮಗುವನ್ನು ದತ್ತು ಪಡೆದರು.
ರಾಜ್ ಕೌಶಲ್ 90 ಮತ್ತು 2000 ದಶಕದಲ್ಲಿ ಹೆಚ್ಚು ಸಕ್ರಿಯರಾಗಿದ್ದರು. 'ಶಾದಿ ಕಾ ಲಡ್ಡೂ' (2004) ಮತ್ತು 'ಪ್ಯಾರ್ ಮೇ ಕಭಿ ಕಭಿ' (1999) ಚಿತ್ರಗಳನ್ನು ನಿರ್ದೇಶಿಸಿ ನಿರ್ಮಿಸಿದ್ದರು. ಕೌಶಲ್ ಕೊನೆಯ ನಿರ್ದೇಶನದ ಸಿನಿಮಾ 2006 ರಲ್ಲಿ ಬಿಡುಗಡೆಯಾದ 'ಆಂಥೋನಿ ಕೌನ್ ಹೈ'. ಈ ಚಿತ್ರದಲ್ಲಿ ಅರ್ಷದ್ ವಾರ್ಸಿ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.
(Kannada Copy of Filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm