ಬ್ರೇಕಿಂಗ್ ನ್ಯೂಸ್
02-07-21 10:55 am Filmbeat : Shruthi K ಸಿನಿಮಾ
ಸ್ಯಾಂಡಲ್ ವುಡ್ ನ ಹಿರಿಯ ನಟ ಜಗ್ಗೇಶ್ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಕಾರು ನಿನ್ನೆ (ಜುಲೈ 1) ಬೆಂಗಳೂರು-ಹೈದರಾಬಾದ್ ಹೆದ್ದಾರಿ ಅಗಲಗುರ್ಕಿ ಬಳಿ ಅಪಘಾತಕ್ಕೆ ಇಡಾಗಿತ್ತು. ಅದೃಷ್ಟವಶಾತ್ ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎನ್ನುವ ಮಾಹಿತಿ ತಿಳಿದುಬಂದಿದೆ. ಸದ್ಯ ಯತಿರಾಜ್ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ
ಪುತ್ರನ ಆರೋಗ್ಯದ ಬಗ್ಗೆ ಸ್ವತಃ ಜಗ್ಗೇಶ್ ಟ್ವೀಟ್ ಮಾಡಿದ್ದು ಮಗನಿಗೆ ಬಹಳ ಒಳ ಏಟು ಬಿದ್ದಿದೆ ಎಂದು ಹೇಳಿದ್ದಾರೆ. ನಿನ್ನೆ ಅಪಘಾತದ ಬಳಿಕ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಜಗ್ಗೇಶ್ ಅಪಘಾತದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬಳಿಕ ಟ್ವೀಟ್ ಡಿಲೀಟ್ ಮಾಡಿದ್ದರು. ಜಗ್ಗೇಶ್ ಟ್ವೀಟ್ ಡಿಲೀಟ್ ಮಾಡಿದ್ದು ಸಾಕಷ್ಟು ಗೊಂದಲಕ್ಕೆ ಕಾರಣವಾಗಿತ್ತು.
ಬಳಿಕ ಮತ್ತೆ ಟ್ವೀಟ್ ಮಾಡಿ ಜಗ್ಗೇಶ್ ಮಗನ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ಜೊತೆಗೆ ಟ್ವೀಟ್ ಡಿಲೀಟ್ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.

"ಜೀವನದಲ್ಲಿ ಸಂಸಾರದ ಸರ್ವಸದಸ್ಯರ ಭಾರಹೊತ್ತು, ತನಗಾಗಿ ಏನು ಬಯಸದೆ. ತನ್ನವರಿಗಾಗಿ ಬಂದದ್ದೆಲ್ಲಾ ಸಹಿಸಿ ನೋವುನುಂಗಿ ಹೆಜ್ಜೆ ಹಾಕುವ ಮೌನಯೋಗಿ ಅಪ್ಪ. ಇಂದು ಬಹಳ ನೆನಪಾದ ನನ್ನ ಅಪ್ಪ. ಅವನ ತ್ಯಾಗದ ಮುಂದೆ ಇಂದು ನಾನು ತೃಣ ಎನಿಸಿತು. ಮಗನಿಗೆ ಬಹಳ ಒಳ ಏಟು ಬಿದ್ದಿದೆ, ಪಕ್ಕೆಮೂಳೆ ಬಲತೊಡೆ ligamentಗೆ ಬಲವಾದ ಪೆಟ್ಟು. ಚಿಕಿತ್ಸೆ ನಡೆಯುತ್ತಿದೆ" ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಟ್ವೀಟ್ ನಲ್ಲಿ ಕೆಟ್ಟ ಭಯ ಆವರಿಸುತ್ತಿದೆ. ಮನೆಯವರು ನೋಡದಂತೆ ವಿನಂತಿ ಮಾಡಿದರು ಹಾಗಾಗಿ ಟ್ವೀಟ್ ಡಿಲೀಟ್ ಮಾಡಿರುವುದಾಗಿ ಹೇಳಿದ್ದಾರೆ. "ಮಗನ ಕಾರ್ accident ಚಿತ್ರ ನೋಡಿದರೆ ನನಗೆ ಹೃದಯದ ಬಡಿತ ಹೆಚ್ಚಾಗುತ್ತಿದೆ. ಕೆಟ್ಟ ಭಯ ಆವರಿಸುತ್ತದೆ. ಬೆಳಿಗ್ಗೆಯಿಂದ ಏನು ತಿನ್ನಲಾಗದೆ ಕೆಟ್ಟ ಕಲ್ಪನೆಗಳು ನನ್ನ ಕಾಡುತ್ತಿದೆ. ಮನೆಯವರು ಅದ ನೋಡದಂತೆ ವಿನಂತಿ ಮಾಡಿದರು. ಹಾಗಾಗಿ ಹಾಕಿದ ವಿಷಯ ಡಿಲೀಟ್ ಮಾಡಿದೆ" ಎಂದು ಹೇಳಿದ್ದಾರೆ.
(Kannada Copy of Filmbeat Kannada)
ಜೀವನದಲ್ಲಿ ಸಂಸಾರದ ಸರ್ವಸದಸ್ಯರ ಭಾರಹೊತ್ತು, ತನಗಾಗಿ ಏನುಬಯಸದೆ!ತನ್ನವರಿಗಾಗಿ ಬಂದದ್ದೆಲ್ಲಾ ಸಹಿಸಿ ನೋವುನುಂಗಿ ಹೆಜ್ಜೆಹಾಕುವ ಮೌನಯೋಗಿ #ಅಪ್ಪ
— ನವರಸನಾಯಕ ಜಗ್ಗೇಶ್ (@Jaggesh2) July 1, 2021
ಇಂದು ಬಹಳ ನೆನಪಾದ ನನ್ನ #ಅಪ್ಪ ಅವನ ತ್ಯಾಗದಮುಂದೆ ಇಂದು ನಾನು ತೃಣ ಎನ್ನಿಸಿತು!
ಮಗನಿಗೆ ಬಹಳ ಒಳಏಟು ಬಿದ್ದಿದೆ,ಪಕ್ಕೆಮೂಳೆ ಬಲತೊಡೆ ligamentಗೆ ಬಲವಾದ ಪೆಟ್ಟು!ಚಿಕಿತ್ಸೆ ನಡೆಯುತ್ತಿದೆ🙏
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm