ಬ್ರೇಕಿಂಗ್ ನ್ಯೂಸ್
02-07-21 10:55 am Filmbeat : Shruthi K ಸಿನಿಮಾ
ಸ್ಯಾಂಡಲ್ ವುಡ್ ನ ಹಿರಿಯ ನಟ ಜಗ್ಗೇಶ್ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಕಾರು ನಿನ್ನೆ (ಜುಲೈ 1) ಬೆಂಗಳೂರು-ಹೈದರಾಬಾದ್ ಹೆದ್ದಾರಿ ಅಗಲಗುರ್ಕಿ ಬಳಿ ಅಪಘಾತಕ್ಕೆ ಇಡಾಗಿತ್ತು. ಅದೃಷ್ಟವಶಾತ್ ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎನ್ನುವ ಮಾಹಿತಿ ತಿಳಿದುಬಂದಿದೆ. ಸದ್ಯ ಯತಿರಾಜ್ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ
ಪುತ್ರನ ಆರೋಗ್ಯದ ಬಗ್ಗೆ ಸ್ವತಃ ಜಗ್ಗೇಶ್ ಟ್ವೀಟ್ ಮಾಡಿದ್ದು ಮಗನಿಗೆ ಬಹಳ ಒಳ ಏಟು ಬಿದ್ದಿದೆ ಎಂದು ಹೇಳಿದ್ದಾರೆ. ನಿನ್ನೆ ಅಪಘಾತದ ಬಳಿಕ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಜಗ್ಗೇಶ್ ಅಪಘಾತದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬಳಿಕ ಟ್ವೀಟ್ ಡಿಲೀಟ್ ಮಾಡಿದ್ದರು. ಜಗ್ಗೇಶ್ ಟ್ವೀಟ್ ಡಿಲೀಟ್ ಮಾಡಿದ್ದು ಸಾಕಷ್ಟು ಗೊಂದಲಕ್ಕೆ ಕಾರಣವಾಗಿತ್ತು.
ಬಳಿಕ ಮತ್ತೆ ಟ್ವೀಟ್ ಮಾಡಿ ಜಗ್ಗೇಶ್ ಮಗನ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ಜೊತೆಗೆ ಟ್ವೀಟ್ ಡಿಲೀಟ್ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.

"ಜೀವನದಲ್ಲಿ ಸಂಸಾರದ ಸರ್ವಸದಸ್ಯರ ಭಾರಹೊತ್ತು, ತನಗಾಗಿ ಏನು ಬಯಸದೆ. ತನ್ನವರಿಗಾಗಿ ಬಂದದ್ದೆಲ್ಲಾ ಸಹಿಸಿ ನೋವುನುಂಗಿ ಹೆಜ್ಜೆ ಹಾಕುವ ಮೌನಯೋಗಿ ಅಪ್ಪ. ಇಂದು ಬಹಳ ನೆನಪಾದ ನನ್ನ ಅಪ್ಪ. ಅವನ ತ್ಯಾಗದ ಮುಂದೆ ಇಂದು ನಾನು ತೃಣ ಎನಿಸಿತು. ಮಗನಿಗೆ ಬಹಳ ಒಳ ಏಟು ಬಿದ್ದಿದೆ, ಪಕ್ಕೆಮೂಳೆ ಬಲತೊಡೆ ligamentಗೆ ಬಲವಾದ ಪೆಟ್ಟು. ಚಿಕಿತ್ಸೆ ನಡೆಯುತ್ತಿದೆ" ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಟ್ವೀಟ್ ನಲ್ಲಿ ಕೆಟ್ಟ ಭಯ ಆವರಿಸುತ್ತಿದೆ. ಮನೆಯವರು ನೋಡದಂತೆ ವಿನಂತಿ ಮಾಡಿದರು ಹಾಗಾಗಿ ಟ್ವೀಟ್ ಡಿಲೀಟ್ ಮಾಡಿರುವುದಾಗಿ ಹೇಳಿದ್ದಾರೆ. "ಮಗನ ಕಾರ್ accident ಚಿತ್ರ ನೋಡಿದರೆ ನನಗೆ ಹೃದಯದ ಬಡಿತ ಹೆಚ್ಚಾಗುತ್ತಿದೆ. ಕೆಟ್ಟ ಭಯ ಆವರಿಸುತ್ತದೆ. ಬೆಳಿಗ್ಗೆಯಿಂದ ಏನು ತಿನ್ನಲಾಗದೆ ಕೆಟ್ಟ ಕಲ್ಪನೆಗಳು ನನ್ನ ಕಾಡುತ್ತಿದೆ. ಮನೆಯವರು ಅದ ನೋಡದಂತೆ ವಿನಂತಿ ಮಾಡಿದರು. ಹಾಗಾಗಿ ಹಾಕಿದ ವಿಷಯ ಡಿಲೀಟ್ ಮಾಡಿದೆ" ಎಂದು ಹೇಳಿದ್ದಾರೆ.
(Kannada Copy of Filmbeat Kannada)
ಜೀವನದಲ್ಲಿ ಸಂಸಾರದ ಸರ್ವಸದಸ್ಯರ ಭಾರಹೊತ್ತು, ತನಗಾಗಿ ಏನುಬಯಸದೆ!ತನ್ನವರಿಗಾಗಿ ಬಂದದ್ದೆಲ್ಲಾ ಸಹಿಸಿ ನೋವುನುಂಗಿ ಹೆಜ್ಜೆಹಾಕುವ ಮೌನಯೋಗಿ #ಅಪ್ಪ
— ನವರಸನಾಯಕ ಜಗ್ಗೇಶ್ (@Jaggesh2) July 1, 2021
ಇಂದು ಬಹಳ ನೆನಪಾದ ನನ್ನ #ಅಪ್ಪ ಅವನ ತ್ಯಾಗದಮುಂದೆ ಇಂದು ನಾನು ತೃಣ ಎನ್ನಿಸಿತು!
ಮಗನಿಗೆ ಬಹಳ ಒಳಏಟು ಬಿದ್ದಿದೆ,ಪಕ್ಕೆಮೂಳೆ ಬಲತೊಡೆ ligamentಗೆ ಬಲವಾದ ಪೆಟ್ಟು!ಚಿಕಿತ್ಸೆ ನಡೆಯುತ್ತಿದೆ🙏
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm