ಬ್ರೇಕಿಂಗ್ ನ್ಯೂಸ್
07-07-21 10:56 am Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಬುಧವಾರ (ಜುಲೈ 7) ಬೆಳಗ್ಗೆ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಇಂದ ಬಳಲುತ್ತಿದ್ದ ನಟ ದಿಲೀಪ್ ಕುಮಾರ್ ಜೂನ್ 29ರಂದು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಟ ಕೊನೆಯುಸಿರೆಳೆದರು.
ಇತ್ತೀಚಿಗೆ ದಿಲೀಪ್ ಕುಮಾರ್ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದರು. ''ದಿಲೀಪ್ ಕುಮಾರ್ ಆರೋಗ್ಯವಾಗಿದ್ದಾರೆ. ವೈದ್ಯರ ಸಲಹೆಯಂತೆ ಸ್ವಲ್ಪ ದಿನ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಆರೈಕೆ ಮಾಡಲು ವೈದ್ಯರಿಗೂ ಸಹಾಯವಾಗಲಿದೆ. ಒಂದೆರಡು ದಿನದ ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ'' ಎಂದಿದ್ದರು.

ಆದರೀಗ ದಿಲೀಪ್ ಕುಮಾರ್ ಇನ್ನಿಲ್ಲ ಎನ್ನುವ ಸುದ್ದಿ ಶಾಕ್ ನೀಡಿದೆ. ಹಿರಿಯ ನಟನ ನಿಧನಕ್ಕೆ ಬಾಲಿವುಡ್ ಅನೇಕ ಮಂದಿ ಕಂಬನಿ ಮಿಡಿದಿದ್ದಾರೆ. ಜೂನ್ ತಿಂಗಳಲ್ಲಿ ದಿಲೀಪ್ ಕುಮಾರ್ 2ನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಭೀತಿಯ ಹಿನ್ನಲೆ ಪತ್ನಿ ಸಾಹೀರಾ ಬಾನು ಜೊತೆ ಕ್ವಾರಂಟೈನ್ ನಲ್ಲಿದ್ದ ದಿಲೀಪ್ ಕುಮಾರ್ ಅವರನ್ನು ವಯೋಸಹಜ ಕಾಯಿಲೆಗಳು ಆಗಾಗ ಕಾಡುತ್ತಿದ್ದು, ಹಾಗಾಗಿ ಪದೇ ಪದೇ ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತಿತ್ತು.
'ಮುಘಲ್-ಎ-ಅಜಮ್', 'ರಾಮ್ ಔರ್ ಶ್ಯಾಮ್', 'ಕೋಹಿನೂರ್' ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿರುವ ದಿಲೀಪ್ ಕುಮಾರ್ 1998 ರಿಂದ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ದಿಲೀಪ್ ಕುಮಾರ್ ನಿಜವಾದ ಹೆಸರು ಮೊಹಮ್ಮದ್ ಯೂಸಫ್ ಖಾನ್.
(Kannada Copy of Filmbeat Kannada)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm