ಬ್ರೇಕಿಂಗ್ ನ್ಯೂಸ್
01-08-20 09:12 am Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಬಿಹಾರದಲ್ಲಿ ದಾಖಲಿಸಿರುವ ಎಫ್ಐಆರ್ನಲ್ಲಿ ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚೆಗೆ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ತಂದೆ, ನಟಿ ರಿಯಾ ಚಕ್ರವರ್ತಿ ಸೇರಿದಂತೆ ಆರು ಮಂದಿ ವಿರುದ್ಧ ಪಾಟ್ನಾದಲ್ಲಿ ಎಫ್ಐಆರ್ ದಾಖಲಿಸಿದ್ದರು. ಇದೀಗ ಈ ತನಿಖೆಯನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಬುಧವಾರ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಅಲ್ಲದೇ ಸುಶಾಂತ್ ಸಿಂಗ್ ಸಾವಿನಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಇದರಿಂದ ನನಗೂ ಅನೇಕ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳು ಬಂದಿವೆ. ಜೊತೆಗೆ ಜೂನ್ 8 ರವರೆಗೆ ಸುಶಾಂತ್ ಜೊತೆ ಲಿವ್-ಇನ್ ರಿಲೇಷನ್ಶಿಪ್ನಲ್ಲಿದ್ದೆ ಎಂಬ ಮಾಹಿತಿಯನ್ನ ಕೂಡ ಸುಪ್ರೀಂ ಕೋರ್ಟಿಗೆ ನೀಡಿದ್ದಾರೆ.
ರಿಯಾ ಸಲ್ಲಿಸಿರೋ ಅರ್ಜಿಯಲ್ಲಿ ಏನಿದೆ?
ಪ್ರಸ್ತುತ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಕಿಶೋರ್ ಸಿಂಗ್ ಸಲ್ಲಿಸಿರುವ ಎಫ್ಐಆರ್ನಲ್ಲಿ ತಪ್ಪಾಗಿ ಹೇಳಿಕೆ ನೀಡಿದ್ದು, ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಅಲ್ಲದೇ ಪಟ್ನಾದಲ್ಲಿ ಅವರಿಗೆ ಬಹಳ ಪ್ರಭಾವ ಇದೆ. ಇದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ನ್ಯಾಯ ಸಮ್ಮತ ತನಿಖೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಬಿಹಾರದಲ್ಲಿ ದಾಖಲಿಸಿರುವ ಎಫ್ಐಆರ್ನ ತನಿಖೆಯನ್ನು ಮುಂಬೈಗೆ ವರ್ಗಾಯಿಸಬೇಕು ಎಂದು ರಿಯಾ ತಮ್ಮ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸುಶಾಂತ್ ಕೆಲವು ಸಮಯದಿಂದ ಖಿನ್ನತೆಗೆ ಒಳಗಾಗಿದ್ದರು. ಆದರೆ ಜೂನ್ 14ರಂದು ಅವರು ಬಾಂದ್ರಾದ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಸುಶಾಂತ್ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲದೇ ರಿಯಾ ಸಲ್ಲಿಸಿರುವ ಅರ್ಜಿಯಲ್ಲಿ, ನಾನು ಜೂನ್ 8, 2020 ರವರೆಗೆ ಸುಶಾಂತ್ ಸಿಂಗ್ ಜೊತೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದೆ ಎಂಬ ಮಾಹಿತಿಯನ್ನ ಕೋರ್ಟಿಗೆ ನೀಡಿದ್ದಾರೆ. ಅದಾದ ಬಳಿಕ ನಾನು ತಾತ್ಕಾಲಿಕವಾಗಿ ಮುಂಬೈನಲ್ಲಿರುವ ನನ್ನ ಸ್ವಂತ ನಿವಾಸಕ್ಕೆ ಸ್ಥಳಾಂತರಗೊಂಡೆ. ನಟನ ಸಾವಿನಿಂದಾಗಿ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಜೊತೆಗೆ ನಟನ ಸಾವಿನ ನಂತರ ಅನೇಕ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿದ್ದಾರೆ.
ತಮಗೆ ಬರುತ್ತಿದ್ದ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಕರೆಗಳ ವಿರುದ್ಧ ಕ್ರೂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾಂದ್ರಾ ಪೊಲೀಸರು ಹಲವು ಬಾರಿ ಸಮನ್ಸ್ ನೀಡಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಮುಂಬೈ ಪೊಲೀಸರ ತನಿಖೆ ಇನ್ನೂ ನಡೆಯುತ್ತಿದೆ. ಈ ಮಧ್ಯೆ ಸುಶಾಂತ್ ಸಿಂಗ್ ತಂದೆ ನನ್ನ ಮೇಲೆ ಬಿಹಾರದಲ್ಲಿ ಪ್ರಭಾವದಿಂದ ಸುಳ್ಳು ಆರೋಪ ಮಾಡಿದ್ದಾರೆ. ಇದರಿಂದ ಬಿಹಾರದ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಈ ಎಫ್ಐಆರ್ನ ತನಿಖೆಯನ್ನು ಮುಂಬೈಗೆ ವರ್ಗಾಯಿಸಬೇಕು ಎಂದು ರಿಯಾ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.
01-09-25 05:03 pm
HK News Desk
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
R. Ashoka: ಸೆ.01 ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎ...
31-08-25 07:17 pm
Siddaramaiah, Banumustak: ನಾಡಹಬ್ಬ ದಸರಾ ಎಲ್ಲರಿ...
31-08-25 05:35 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 05:05 pm
Mangalore Correspondent
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
Udupi, Diksha Sets New World Record, Bharatan...
31-08-25 12:49 pm
01-09-25 03:07 pm
Udupi Correspondent
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm