ಬ್ರೇಕಿಂಗ್ ನ್ಯೂಸ್
16-07-21 01:11 pm Filmbeat : Shruthi K ಸಿನಿಮಾ
ರಾಷ್ಟ್ರಪ್ರಶಸ್ತಿ ಪುರಸ್ಕೃತ ಖ್ಯಾತ ನಟಿ ಸುರೇಖಾ ಸಿಕ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 75 ವರ್ಷದ ನಟಿ ಸುರೇಖಾ ಇಂದು (ಜುಲೈ 16) ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ವರದಿಗಳ ಪ್ರಕಾರ ಸುರೇಖಾ 2018ರಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. 2020ರಲ್ಲಿ ಸುರೇಖಾಗೆ ಬ್ರೈನ್ ಸ್ಟ್ರೋಕ್ ಆಗಿದ್ದು, ತೀವ್ರ ಅಸ್ವಸ್ಥರಾಗಿದ್ದರು ಎನ್ನಲಾಗುತ್ತಿದೆ.
3 ಬಾರಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿರುವ ನಟಿ ಸುರೇಖಾ ಸಿಕ್ರಿ ಅನಾರೋಗ್ಯದ ಬಗ್ಗೆ ಕುಟುಂಬದವರು ಬಹಿರಂಗ ಪಡಿಸಿರಲಿಲ್ಲ. ಇದೀಗ ನಿಧನದ ಬಳಿಕ ಮಾಹಿತಿ ಹಂಚಿಕೊಂಡಿರುವ ಸುರೇಖಾ ಮ್ಯಾನೇಜರ್, "ಮೂರು ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಸುರೇಖಾ ಸಿಕ್ರಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೋದಿದರು. ಬ್ರೈನ್ ಸ್ಟ್ರೋಕ್ ನಿಂದ ಬಳಲುತ್ತಿದ್ದರು" ಎಂದು ಹೇಳಿದ್ದಾರೆ.


ನಟಿ ಸುರೇಖಾ ಸಿಕ್ರಿ 1978ರಲ್ಲಿ 'ಕಿಸ್ಸಾ ಕುರ್ಸಿ ಕಾ' ಚಿತ್ರದಿಂದ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ಸುರೇಖಾ 1988ರಲ್ಲಿ ಬಂದ 'ತಮಾಸ್', 1995ರಲ್ಲಿ ಬಿಡುಗಡೆಯಾದ 'ಮಮ್ಮೊ' ಮತ್ತು 2018ರಲ್ಲಿ ಬಂದ 'ಬದೈ ಹೋ' ಸಿನಿಮಾಗಾಗಿ ಸುರೇಖಾ ಅತ್ಯುತ್ತಮ ಪೋಷಕ ನಟಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಸುರೇಖಾ ಖ್ಯಾತಿಗಳಿಸಿದ್ದರು.
'ಬಾಲಿಕಾ ವಧು' ಧಾರಾವಾಹಿ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು. ಇನ್ನು 'ಬದೈ ಹೋ' ಸಿನಿಮಾದ ಪಾತ್ರ ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. 2018ರಲ್ಲಿ ನಟಿ ಸುರೇಖಾ ಬ್ರೈನ್ ಸ್ಕ್ರೋಕ್ ನಿಂದ ಬಾತ್ ರೂಮ್ ನಲ್ಲಿ ಬಿದ್ದು ತೆಲೆಗೆ ತೀವ್ರವಾದ ಏಟು ಬಿದ್ದಿತ್ತು.
ಚೇತರಿಸಿಕೊಳ್ಳುತ್ತಿದ್ದ ಸುರೇಖಾ ಸಂದರ್ಶನದಲ್ಲಿ ಮಾತನಾಡಿ, "ನನಗೆ ಹತ್ತು ತಿಂಗಳ ಹಿಂದೆ ಬ್ರೈನ್ ಸ್ಟ್ರೋಕ್ ಆಗಿತ್ತು. ಅಂದಿನಿಂದ ಇವತ್ತಿನ ವರೆಗೂ ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಅನಾರೋಗ್ಯದಿಂದ ನನಗೆ ಕೆಲಸ ಮಾಡಲು ನನಗೆ ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಸರಿಯಾಗುತ್ತೇನೆ ಎಂದು ವೈದ್ಯರು ಹೇಳಿದ್ದಾರೆ" ಎಂದಿದ್ದರು.
(Kannada Copy of Filmbeat Kannada)
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm