ಬ್ರೇಕಿಂಗ್ ನ್ಯೂಸ್
16-07-21 01:11 pm Filmbeat : Shruthi K ಸಿನಿಮಾ
ರಾಷ್ಟ್ರಪ್ರಶಸ್ತಿ ಪುರಸ್ಕೃತ ಖ್ಯಾತ ನಟಿ ಸುರೇಖಾ ಸಿಕ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 75 ವರ್ಷದ ನಟಿ ಸುರೇಖಾ ಇಂದು (ಜುಲೈ 16) ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ವರದಿಗಳ ಪ್ರಕಾರ ಸುರೇಖಾ 2018ರಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. 2020ರಲ್ಲಿ ಸುರೇಖಾಗೆ ಬ್ರೈನ್ ಸ್ಟ್ರೋಕ್ ಆಗಿದ್ದು, ತೀವ್ರ ಅಸ್ವಸ್ಥರಾಗಿದ್ದರು ಎನ್ನಲಾಗುತ್ತಿದೆ.
3 ಬಾರಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿರುವ ನಟಿ ಸುರೇಖಾ ಸಿಕ್ರಿ ಅನಾರೋಗ್ಯದ ಬಗ್ಗೆ ಕುಟುಂಬದವರು ಬಹಿರಂಗ ಪಡಿಸಿರಲಿಲ್ಲ. ಇದೀಗ ನಿಧನದ ಬಳಿಕ ಮಾಹಿತಿ ಹಂಚಿಕೊಂಡಿರುವ ಸುರೇಖಾ ಮ್ಯಾನೇಜರ್, "ಮೂರು ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಸುರೇಖಾ ಸಿಕ್ರಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೋದಿದರು. ಬ್ರೈನ್ ಸ್ಟ್ರೋಕ್ ನಿಂದ ಬಳಲುತ್ತಿದ್ದರು" ಎಂದು ಹೇಳಿದ್ದಾರೆ.


ನಟಿ ಸುರೇಖಾ ಸಿಕ್ರಿ 1978ರಲ್ಲಿ 'ಕಿಸ್ಸಾ ಕುರ್ಸಿ ಕಾ' ಚಿತ್ರದಿಂದ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ಸುರೇಖಾ 1988ರಲ್ಲಿ ಬಂದ 'ತಮಾಸ್', 1995ರಲ್ಲಿ ಬಿಡುಗಡೆಯಾದ 'ಮಮ್ಮೊ' ಮತ್ತು 2018ರಲ್ಲಿ ಬಂದ 'ಬದೈ ಹೋ' ಸಿನಿಮಾಗಾಗಿ ಸುರೇಖಾ ಅತ್ಯುತ್ತಮ ಪೋಷಕ ನಟಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಸುರೇಖಾ ಖ್ಯಾತಿಗಳಿಸಿದ್ದರು.
'ಬಾಲಿಕಾ ವಧು' ಧಾರಾವಾಹಿ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು. ಇನ್ನು 'ಬದೈ ಹೋ' ಸಿನಿಮಾದ ಪಾತ್ರ ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. 2018ರಲ್ಲಿ ನಟಿ ಸುರೇಖಾ ಬ್ರೈನ್ ಸ್ಕ್ರೋಕ್ ನಿಂದ ಬಾತ್ ರೂಮ್ ನಲ್ಲಿ ಬಿದ್ದು ತೆಲೆಗೆ ತೀವ್ರವಾದ ಏಟು ಬಿದ್ದಿತ್ತು.
ಚೇತರಿಸಿಕೊಳ್ಳುತ್ತಿದ್ದ ಸುರೇಖಾ ಸಂದರ್ಶನದಲ್ಲಿ ಮಾತನಾಡಿ, "ನನಗೆ ಹತ್ತು ತಿಂಗಳ ಹಿಂದೆ ಬ್ರೈನ್ ಸ್ಟ್ರೋಕ್ ಆಗಿತ್ತು. ಅಂದಿನಿಂದ ಇವತ್ತಿನ ವರೆಗೂ ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಅನಾರೋಗ್ಯದಿಂದ ನನಗೆ ಕೆಲಸ ಮಾಡಲು ನನಗೆ ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಸರಿಯಾಗುತ್ತೇನೆ ಎಂದು ವೈದ್ಯರು ಹೇಳಿದ್ದಾರೆ" ಎಂದಿದ್ದರು.
(Kannada Copy of Filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm