ಬ್ರೇಕಿಂಗ್ ನ್ಯೂಸ್
01-08-20 11:38 am Headline Karnataka News Network ಸಿನಿಮಾ
ಈ ಬಾರಿಯ ಐಪಿಎಲ್ಗೆ ಸ್ಟೇಡಿಯಂನಲ್ಲಿ ವೀಕ್ಷಕರಿಗೆ ಅವಕಾಶ ನೀಡುವುದಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವುದೇ ರೀತಿಯ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.
ಮುಂದಿನ ತಿಂಗಳು ಸೆಪ್ಟೆಂಬರ್ 19ರಿಂದ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಳ್ಳಲಿದೆ. ಇದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಕಲ ತಯಾರಿಯಲ್ಲಿ ತೊಡಗಿಕೊಂಡಿದೆ.
ನಾಳೆ ಆಗಸ್ಟ್ 2 ರಂದು ಬಿಸಿಸಿಐ ವೇಳಾಪಟ್ಟಿಯ ಅಂತಿಮ ರೂಪ, ಮತ್ತಿತರ ವ್ಯವಸ್ಥೆ ಕುರಿತು ಆಡಳಿತಾತ್ಮಕ ಸಭೆ ನಡೆಸಲಿದೆ. ಈ ಸಭೆಯಲ್ಲಿ ಐಪಿಎಲ್ನ ಎಲ್ಲಾ ಫ್ರಾಂಚೈಸಿಗಳು ಟೂರ್ನಮೆಂಟ್ನ ವಿಧಾನದ ಕುರಿತಾಗಿ ಸ್ಪಷ್ಟ ಚಿತ್ರಣವನ್ನು ದೊರೆಯಲಿದೆ ಎಂದು ತಿಳಿದು ಬಂದಿದೆ.
ಇನ್ನೂ ಈ ಬಾರಿಯ ಐಪಿಎಲ್ಗೆ ಸ್ಟೇಡಿಯಂನಲ್ಲಿ ವೀಕ್ಷಕರಿಗೆ ಅವಕಾಶ ನೀಡುವುದಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವುದೇ ರೀತಿಯ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.
ಆದರೆ ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ, ಯುಎಇ ಸರ್ಕಾರ ಟೂರ್ನಮೆಂಟ್ ವೀಕ್ಷಿಸಲು ಶೇ.30ರಿಂದ 50ರಷ್ಟು ಅಭಿಮಾನಿಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕೊರೋನಾ ವೈರಸ್ ಕಾರಣದಿಂದ ಈಗ ಕ್ರಿಕೆಟ್ ಹಾಗೂ ಇನ್ನಿತರ ಪಂದ್ಯಗಳೆಲ್ಲ ಖಾಲಿ ಸ್ಟೇಡಿಯಂನಲ್ಲಿ ನಡೆಯುತ್ತಿವೆ. ಆದರೆ, ಐಪಿಎಲ್ ವೇಳೆ ಶೇ. 30ರಿಂದ ಶೇ. 50ರಷ್ಟು ಪ್ರೇಕ್ಷಕರಿಗೆ ಕ್ರೀಡಾಂಗಣ ಪ್ರವೇಶಕ್ಕೆ ಅವಕಾಶ ನೀಡಲು ಪ್ರಯತ್ನಿಸುವುದಾಗಿ ಯುಎಇ ಕ್ರಿಕೆಟ್ ಮಂಡಳಿ ಕಾರ್ಯದರ್ಶಿ ಮುಬಾಶಿರ್ ಉಸ್ಮಾನಿ ಹೇಳಿದ್ದಾರೆ.
ಈ ಪ್ರತಿಷ್ಠಿತ ಕ್ರೀಡಾಕೂಟವನ್ನು ನಮ್ಮ ಜನರು ಅನುಭವಿಸಬೇಕೆಂದು ನಾವು ಖಂಡಿತವಾಗಿ ಬಯಸುತ್ತೇವೆ. ಆದರೆ ಇದು ಸಂಪೂರ್ಣವಾಗಿ ಸರ್ಕಾರದ ನಿರ್ಧಾರವಾಗಿದೆ. ಹೆಚ್ಚಿನ ಪಂದ್ಯಗಳಿಗೆ 30-50ಶೇಕಡಾದಷ್ಟು ಹಾಜರಾತೊಯಿರುತ್ತದೆ. ಇದಕ್ಕೆ ನಮ್ಮ ಸರ್ಕಾರದ ಅನುಮೋದನೆ ಪಡೆಯುವ ಭರವಸೆ ಇದೆ ಎಂಬುದು ಮುಬಾಶ್ಶಿರ್ ಉಸ್ಮಾನಿ ಮಾತು.
ಬಿಸಿಸಿಐ ಹಾಗೂ ಭಾರತ ಸರಕಾರದಿಂದ ಕೂಟಕ್ಕೆ ಅಂಕಿತ ಬಿದ್ದೊಡನೆ ನಾವು ನಮ್ಮ ಸರಕಾರವನ್ನು ಸಂಪರ್ಕಿಸಲಿದ್ದೇವೆ. ಈ ಸಂದರ್ಭದಲ್ಲಿ ನಮ್ಮ ಹಾಗೂ ಬಿಸಿಸಿಐ ಮಾರ್ಗಸೂಚಿಯನ್ನು ಮುಂದಿರಿಸಲಿದ್ದೇವೆ ಎಂದು ಉಸ್ಮಾನಿ ಹೇಳಿದ್ದಾರೆ.
ನಾಳೆ ನಡೆಯಲಿರುವ ಸಭೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಬಿಸಿಸಿಐನ ಹಿರಿಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು, ವಿವಿಧ ಪಾಲುದಾರರೊಂದಿಗೆ ಮಾತನಾಡುವ ನಿರೀಕ್ಷೆಯಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm