ಬ್ರೇಕಿಂಗ್ ನ್ಯೂಸ್
26-08-21 11:30 am Filmbeat: Bharath Kumar K ಸಿನಿಮಾ
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಕೇಸ್ ಸಂಚಲನ ಸೃಷ್ಟಿಸಿದ್ದು ನಟಿ ರಾಗಿಣಿ, ಸಂಜನಾಗೆ ಸಂಕಷ್ಟ ತಂದೊಡ್ಡಿದೆ. ಆ ಕಡೆ ಬಾಲಿವುಡ್ನಲ್ಲೂ ಡ್ರಗ್ಸ್ ಕೇಸ್ ತಣ್ಣಗಾಗಿಲ್ಲ. ಇದೀಗ, ನಾಲ್ಕು ವರ್ಷದ ಹಿಂದಿನ ಡ್ರಗ್ಸ್ ಪ್ರಕರಣ ಟಾಲಿವುಡ್ನಲ್ಲಿ ಮತ್ತೆ ಜೀವ ಪಡೆದುಕೊಂಡಿದೆ.
ಡ್ರಗ್ಸ್ ಕೇಸ್ ಸಂಬಂಧಿಸಿದಂತೆ ತೆಲುಗಿನ ಸ್ಟಾರ್ ಕಲಾವಿದರಿಗೆ ಜಾರಿ ನಿರ್ದೇಶನಾಲಯ (ED-Enforcement Directorate) ಸಮನ್ಸ್ ಜಾರಿ ಮಾಡಿದೆ ಎಂಬ ವಿಚಾರ ಹೊರಬಿದ್ದಿದೆ.
ತೆಲುಗಿನ ಖ್ಯಾತನಾಮರಾದ ರಕುಲ್ ಪ್ರೀತ್ ಸಿಂಗ್, ರಾಣಾ ದಗ್ಗುಬಾಟಿ, ಪೂರಿ ಜಗನ್ನಾಥ್, ರವಿತೇಜ, ಚಾರ್ಮಿ ಕೌರ್, ಮುಮೈತ್ ಖಾನ್ ಸೇರಿದಂತೆ ಒಟ್ಟು 12 ಜನರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಬುಧವಾರ (ಆಗಸ್ಟ್ 25) ಸಮನ್ಸ್ ಜಾರಿ ಮಾಡಿದೆ.

ಪೂರಿ ಜಗನ್ನಾಥ್ಗೆ ಆಗಸ್ಟ್ 31 ರಂದು, ರಕುಲ್ ಪ್ರೀತ್ ಸಿಂಗ್ಗೆ ಸೆಪ್ಟೆಂಬರ್ 6, ರಾಣಾ ದಗ್ಗುಬಾಟಿಗೆ ಸೆಪ್ಟೆಂಬರ್ 8, ರವಿತೇಜಗೆ ಸೆಪ್ಟೆಂಬರ್ 9, ಮುಮೈತ್ ಖಾನ್ಗೆ ನವೆಂಬರ್ 15 ರಂದು ಹಾಗೂ ಚಾರ್ಮಿ ಕೌರ್ಗೆ ಹಾಜರಾಗಲು ಸೂಚಿಸಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ 2017ರಲ್ಲಿ ಹೈದರಾಬಾದ್ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡ (ಎಸ್ಐಟಿ) ಟಾಲಿವುಡ್ನ 12 ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಲಾಖೆಯೂ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿಕೊಂಡಿತ್ತು. ಇಂಡಿಯಾ ಟುಡೆ ವರದಿ ಪ್ರಕಾರ, ಈ ಪ್ರಕರಣದಲ್ಲಿ ಸೆಲೆಬ್ರಿಟಿಗಳನ್ನು ಸಾಕ್ಷಿಯಾಗಿ ಕರೆಸಿಕೊಳ್ಳಲು ಮುಂದಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಮಾಡಿದೆ.
ಡ್ರಗ್ಸ್ ಪ್ರಕರಣದಲ್ಲಿ ಎಸ್ಐಟಿ ತಂಡವೂ ಸೆಲೆಬ್ರಿಟಿಗಳು ಸೇರಿದಂತೆ 62 ಶಂಕಿತರ ಕೂದಲು ಮತ್ತು ಉಗುರಿನ ಮಾದರಿಗಳನ್ನು ಸಂಗ್ರಹಿಸಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಖ್ಯಾತ ವ್ಯಕ್ತಿಯ ವಿರುದ್ಧ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಸಿಲ್ಲ. ಡ್ರಗ್ ಕಳ್ಳಸಾಗಣೆ ಅಥವಾ ಸೇವನೆಯಲ್ಲಿ ಸೆಲೆಬ್ರಿಟಿಗಳು ಭಾಗವಾಗಿದ್ದರೆ ಎಂದು ಇಲ್ಲಿಯವರೆಗೆ ಎಸ್ಐಟಿ ಎಲ್ಲಿಯೂ ಹೇಳಿಲ್ಲ. ಹಾಗಾಗಿ, ಎಲ್ಲಾ ಸೆಲೆಬ್ರಿಟಿಗಳು ಡ್ರಗ್ಸ್ ಕೇಸ್ನಿಂದ ಕ್ಲೀನ್ ಚಿಟ್ ಸಿಕ್ಕಿದೆ ಎಂದು ನಂಬಲಾಗಿತ್ತು. ಮುಂಬೈನಿಂದ ಹೈದರಾಬಾದ್ಗೆ ಕೊಕೇನ್ ಪೂರೈಸಿದ ಆರೋಪದ ಮೇಲೆ 2017 ರ ಆಗಸ್ಟ್ನಲ್ಲಿ ದಕ್ಷಿಣ ಆಫ್ರಿಕಾದ ಪ್ರಜೆ ರಾಫೆಲ್ ಅಲೆಕ್ಸ್ ವಿಕ್ಟರ್ನನ್ನು ಎಸ್ಐಟಿ ಬಂಧಿಸಿದ್ದರು. ಅದಾದ ಮೇಲೆಯೇ ತೆಲುಗು ಚಿತ್ರರಂಗದ ನಂಟು ಇರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.
(Kannada Copy of Filmbeat Kannada)
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm