ಬ್ರೇಕಿಂಗ್ ನ್ಯೂಸ್
01-09-21 03:24 pm Filmbeat Kannada ಸಿನಿಮಾ
ಬಾಲಿವುಡ್ ಖ್ಯಾತ ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಬಾನು ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮುಂಬೈನ ಹಿಂದುಜಾ ಆಸ್ಪತ್ರೆಗೆ ಸೈರಾ ಬಾನು ಅವರನ್ನು ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಸೈರಾ ಬಾನು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಕಳೆದ 3 ದಿನಗಳ ಹಿಂದೆಯೇ ಸೈರಾ ಬಾನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು (ಸೆಪ್ಟಂಬರ್ 1) ಐ ಸಿ ಯುಗೆ ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇತ್ತೀಚಿಗಷ್ಟೆ ಸೈರಾ ಬಾನು ಪ್ರೀತಿಯ ಪತಿ ದಿಲೀಪ್ ಕುಮಾರ್ ಅವರನ್ನು ಕಳೆದುಕೊಂಡಿದ್ದರು. ಪತಿಯ ಅಗಲಿಕೆಯ ನೋವಿನಲ್ಲಿದ್ದ ಸೈರಾ ಈಗ ದಿಢೀರ್ ಆಸ್ಪತ್ರೆಗೆ ದಾಖಲಾಗಿರುವುದು ಸ್ನೇಹಿತರಲ್ಲಿ ಆತಂಕ ಮನೆ ಮಾಡಿದೆ. ಸೈರಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಅವರ ಕುಟುಂಬದವರಾಗಲಿ ಅಥವಾ ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.

ನಟ ದಿಲೀಪ್ ಕುಮಾರ್ ವಯೋಸಹಜ ಕಾಯಿಲೆಯಿಂದ ಜುಲೈ 7ರಂದು ನಿಧನ ಹೊಂದಿದರು. 98 ವರ್ಷದ ನಟ ದಿಲೀಪ್ ಅನಾರೋಗ್ಯದ ಕಾರಣ ಆಗಾಗ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ 7ರಂದು ಕೊನೆಯುಸಿರೆಳೆದರು. ಸೈರಾ ಬಾನು ಮತ್ತು ದಿಲೀಪ್ ಇಬ್ಬರದ್ದು ಪ್ರೇಮ ವಿವಾಹ. ಇಬ್ಬರೂ ಮದುವೆಯಾಗಿ 54 ವರ್ಷಗಳು ಕಳೆದಿವೆ. ಇಬ್ಬರ ಪ್ರೇಮ ಕಥೆ ಬಾಲಿವುಡ್ ನಲ್ಲಿ ಮರೆಯಲಾಗದ ಪ್ರೇಮಕಥೆಯಾಗಿದೆ.
ಕೊನೆಯದಾಗಿ ಸೈರಾ ಬಾನು ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಪತಿ ಆರೋಗ್ಯದ ಬಗ್ಗೆ ಮಾತನಾಡಿದ್ದರು. ದಿಲೀಪ್ ಕುಮಾರ್ ಆರೋಗ್ಯ ತೀರ ಹದಗೆಟ್ಟಿದೆ ಎಂದು ಹೇಳಿದ್ದರು. "ಅವರ ಆರೋಗ್ಯ ತುಂಬಾ ಹದಗೆಟ್ಟಿದೆ. ತುಂಬಾ ದುರ್ಬಲ ಆಗಿದ್ದಾರೆ. ಮನೆಯೊಳಗೆ ಮಾತ್ರ ಓಡಾಡುತ್ತಾರೆ. ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ" ಎಂದು ಹೇಳಿದ್ದರು. ಜೊತೆಗೆ ಪತಿಯನ್ನು ಹಾಡಿ ಹೊಗಳಿದ್ದರು. ಇದೀಗ ಸ್ವತಃ ಸೈರಾ ಅವರೇ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈರಾ ಬೇಗ ಗುಣಮುಖರಾಗಲಿ ಎಂದು ಸ್ನೇಹಿತರು, ಚಿತ್ರರಂಗದ ಗಣ್ಯರು ಹಾರೈಸುತ್ತಿದ್ದಾರೆ.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm