ಬ್ರೇಕಿಂಗ್ ನ್ಯೂಸ್
08-09-21 12:50 pm Filmbeat: Manjunatha C ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಟ್ವೀಟ್ರ್ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅಕ್ಷಯ್ ಕುಮಾರ್, ''ಆಕೆ ನನ್ನ ಬೇರಾಗಿದ್ದಳು. ನಾನು ಇಂದು ತಡೆದುಕೊಳ್ಳಲಾಗದಷ್ಟು ದುಃಖದಲ್ಲಿದ್ದೇನೆ. ನನ್ನ ತಾಯಿ ಶ್ರೀಮತಿ ಅರುಭಾ ಭಾಟಿಯಾ ಇಂದು ಮುಂಜಾನೆ ಶಾಂತವಾಗಿ ಈ ಲೋಕವನ್ನು ಬಿಟ್ಟು ಹೋಗಿದ್ದಾಳೆ. ಆಕೆ ಬೇರೆ ಲೋಕದಲ್ಲಿ ನನ್ನ ತಂದೆಯನ್ನು ಸೇರಿಕೊಂಡಿದ್ದಾಳೆ. ಕಠಿಣ ಸಮಯದಲ್ಲಿ ನನ್ನ ಕುಟುಂಬದ ಪರವಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ, ಓಂ ಶಾಂತಿ'' ಎಂದಿದ್ದಾರೆ.

ಮಂಗಳವಾರ ಟ್ವೀಟ್ ಮಾಡಿದ್ದ ಅಕ್ಷಯ್ ಕುಮಾರ್, ''ನನ್ನ ತಾಯಿಯ ಆರೋಗ್ಯದ ಬಗ್ಗೆ ನಿಮ್ಮ ಕಾಳಜಿ ನೋಡಿ ಮನಸ್ಸು ತುಂಬಿ ಬಂದಿದೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಇದು ಬಹಳ ಕಠಿಣ ಸಮಯ. ನಿಮ್ಮ ಪ್ರತಿಯೊಬ್ಬರ ಪ್ರಾರ್ಥನೆ ನಮಗೆ ಸಹಕಾರಿ ಆಗಲಿದೆ'' ಎಂದಿದ್ದರು. ಆದರೆ ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ, ಅಕ್ಷಯ್ ತಾಯಿ ಇಂದು ಬೆಳಿಗ್ಗೆ ಅಸುನೀಗಿದ್ದಾರೆ.
ಸೆಪ್ಟೆಂಬರ್ 5 ರಂದೇ ಅಕ್ಷಯ್ ಕುಮಾರ್ ತಾಯಿಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಮುಂಬೈನ ಹೀರಾನಂದಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿಯ ಆರೋಗ್ಯ ಕ್ಷೀಣಿಸಿದ ವಿಷಯ ತಿಳಿದ ಕೂಡಲೇ ಬ್ರಿಟನ್ನಲ್ಲಿನ ಚಿತ್ರೀಕರಣ ಅರ್ಧಕ್ಕೆ ಕೈಬಿಟ್ಟು ಸೆಪ್ಟೆಂಬರ್ 6ರಂದು ಭಾರತಕ್ಕೆ ವಾಪಸ್ಸಾಗಿದ್ದರು ಅಕ್ಷಯ್. ಬ್ರಿಟನ್ನಲ್ಲಿ 'ಸಿಂಡ್ರೆಲಾ' ಸಿನಿಮಾದ ಶೂಟಿಂಗ್ನಲ್ಲಿ ಅಕ್ಷಯ್ ಕುಮಾರ್ ತೊಡಿಗಿಸಿಕೊಂಡಿದ್ದರು. ಅಕ್ಷಯ್ ಕುಮಾರ್ ತಂದೆ ಹರಿ ಓಮ್ ಭಾಟಿಯಾ ಸೈನ್ಯಾಧಿಕಾರಿ ಆಗಿದ್ದರು, ತಾಯಿ ಅರುಣಾ ಭಾಟಿಯಾ ಗೃಹಿಣಿ ಆಗಿದ್ದರು. ನಂತರ ನಿರ್ಮಾಪಕಿಯಾಗಿಯೂ ಬದಲಾದರು. ಹರಿ ಓಂ ಪ್ರೊಡಕ್ಷನ್ ಹೌಸ್ನ ಪಾಲುದಾರೆ ಆಗಿದ್ದ ಅವರು, ಪ್ರೊಡಕ್ಷನ್ ಹೌಸ್ ಮೂಲಕ 'ಸಿಂಗ್ ಈಸ್ ಕಿಂಗ್', 'ಓಹ್ ಮೈ ಗಾಡ್', 'ಹಾಲಿಡೇ', 'ಏರ್ಲಿಫ್ಟ್', 'ರುಸ್ತುಂ', 'ನಾಮ್ ಶಬಾನಾ', 'ಟಾಯ್ಲೆಟ್', 'ಚುಂಬಕ್' ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
She was my core. And today I feel an unbearable pain at the very core of my existence. My maa Smt Aruna Bhatia peacefully left this world today morning and got reunited with my dad in the other world. I respect your prayers as I and my family go through this period. Om Shanti 🙏🏻
— Akshay Kumar (@akshaykumar) September 8, 2021
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm