ಬ್ರೇಕಿಂಗ್ ನ್ಯೂಸ್
16-09-21 03:27 pm Filmbeat: Bharath Kumar K ಸಿನಿಮಾ
ಬಾಡಿ ಬಿಲ್ಡರ್ ಹಾಗೂ ಮಾಜಿ ಮಿಸ್ಟರ್ ಇಂಡಿಯಾ ವಿಜೇತ ಮನೋಜ್ ಪಾಟೀಲ್ ಮುಂಬೈನ ಓಶಿವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವರದಿಯಾಗಿದೆ.
ಈ ಕುರಿತು ಮುಂಬೈ ಪೊಲೀಸರುವ ಪಿಟಿಐಗೆ ಪ್ರತಿಕ್ರಿಯಿಸಿದ್ದು, ''ಮನೋಜ್ ಪಾಟೀಲ್ ಓಶಿವಾರದಲ್ಲಿರುವ ತಮ್ಮ ಮನೆಯಲ್ಲಿ ಗುರುವಾರ ಮಲಗುವ ಮುನ್ನ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದರು'' ಎಂದು ಮಾಹಿತಿ ನೀಡಿದ್ದಾರೆ.

ಮನೋಜ್ ಪಾಟೀಲ್ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಮೇಲೆ ಕುಟುಂಬಸ್ಥರು ಮುಂಬೈನ ಕೂಪರ್ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದರು ಎಂದು ಮನೋಜ್ ಮ್ಯಾನೇಜರ್ ಪಾರಿ ನಾಜ್ ತಿಳಿಸಿದ್ದಾರೆ. ಇತ್ತೀಚಿನ ಅಪ್ಡೇಟ್ ಪ್ರಕಾರ, ಬಾಡಿ ಬಿಲ್ಡರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಲು ಕಾರಣ ಏನು ಎಂದು ಹುಡುಕಿ ಹೊರಟಾಗ, ಬಾಲಿವುಡ್ ನಟ ಶಾಹೀಲ್ ಖಾನ್ ಹೆಸರು ಕೇಳಿ ಬಂದಿದೆ. ತನ್ನ ಆತ್ಮಹತ್ಯೆಗೆ ನಟ ಶಾಹೀಲ್ ಖಾನ್ ಕಾರಣ ಎಂದು ಡೆತ್ನೋಟ್ ಬರೆದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆ ಪತ್ರ ಪೊಲೀಸರ ಕೈ ಸೇರಿದೆಯಂತೆ. ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ 'ಶಾಹೀಲ್ ಖಾನ್ ಮಾನಸಿಕವಾಗಿ ಹಿಂಸಿಸುತ್ತಿದ್ದರು. ಹಾಗಾಗಿ, ಮನನೊಂದು ಸಾಯಲು ನಿರ್ಧರಿಸುವೆ' ಎಂದು ಮನೋಜ್ ಪಾಟೀಲ್ ಬರೆದಿದ್ದಾರೆ ಎಂದು ಮ್ಯಾನೇಜರ್ ಪಾರಿ ನಾಜ್ ಹೇಳಿದ್ದಾರೆ. ನಟ ಶಾಹೀಲ್ ಖಾನ್, ಬಾಡಿ ಬಿಲ್ಡರ್ ಮನೋಜ್ ಪಾಟೀಲ್ ಅವರ ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ತೇಜೋವಧೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮನೋಜ್ ಪಾಟೀಲ್ ವೃತ್ತಿಜೀವನವನ್ನು ಅಂತ್ಯಗೊಳಿಸುವುದಾಗಿ ನಟ ಶಾಹೀಲ್ ಖಾನ್ ಬೆದರಿಕೆ ಹಾಕಿದ್ದರಂತೆ. ಹಾಗೂ ಮನೋಜ್ ಅವರ ಪ್ರೋಟಿನ್ ಶಾಪ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಮಾನಹಾನಿ ಸಹ ಮಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಇ-ಟೈಮ್ಸ್ಗೆ ಶಾಹೀಲ್ ಖಾನ್ ಪ್ರತಿಕ್ರಿಯಿಸಿದ್ದು, ''ಇದೆಲ್ಲ ಕೇವಲ ಪ್ರಚಾರಕ್ಕಷ್ಟೆ. ಮನೋಜ್ ಜೊತೆ ನನಗೆ ಯಾವುದೇ ಸಂಬಂಧವಿಲ್ಲ'' ಎಂದು ತಿಳಿಸಿದ್ದಾರೆ.
ಮನೋಜ್ ಪಾಟೀಲ್ ಫಿಟ್ನೆಸ್ ಮಾಡೆಲ್ ಆಗಿದ್ದು, 2016 ರಲ್ಲಿ ಮಿಸ್ಟರ್ ಇಂಡಿಯಾ ಚಾಂಪಿಯನ್ಶಿಪ್ ಗೆದ್ದಿದ್ದರು.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm