ಬ್ರೇಕಿಂಗ್ ನ್ಯೂಸ್
20-09-21 04:36 pm Headline Karnataka News Network ಸಿನಿಮಾ
ಚಿತ್ರರಂಗ ಅಲ್ಲದೆ ಸಾಮಾಜಿಕ ಕಾರ್ಯಕ್ರಮಗಳ ಮೂಲಕವೂ ಗುರುತಿಸಿಕೊಂಡಿರುವ ನಟಿ ಪ್ರಣೀತಾ ಕೊವೀಡ್ ಎರಡನೆ ಅಲೆಯ ವೇಳೆಯಲ್ಲೂ ಜನರಿಗೆ ನೆರವಾಗಿದ್ದಾರೆ. ತಮ್ಮ ಫೌಂಡೇಶನ್ ವತಿಯಿಂದ ಲಸಿಕೆ ಅಭಿಯಾನ ನಡೆಸಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಹಲವರು ಈ ಅಭಿಯಾನದಲ್ಲಿ ಲಸಿಕೆ ಪಡೆದುಕೊಂಡಿದ್ದು, ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜನರು ಪ್ರಣೀತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಭಿಮಾನಿಗಳು ಪೋಟೋ ಶೇರ್ ಮಾಡಿಕೊಂಡು ಸಂಭ್ರಮಿಸುತ್ತಿದ್ದಾರೆ.

ರಾಷ್ಟ್ರೋತ್ಥಾನ ಪರಿಷತ್ ಜೊತೆ ಕೈಜೋಡಿಸಿದ ನಟಿ ಪ್ರಣಿತಾ, ತಮ್ಮ ಫೌಂಡೇಶನ್ ಸಹಯೋಗದೊಂದಿಗೆ ಜನರಿಗೆ ಉಚಿತವಾಗಿ ಲಸಿಕೆ ವಿತರಿಸಿದ್ದಾರೆ. ಜಯನಗರದಲ್ಲಿ ಪ್ರಣೀತಾ ಪೌಂಡೇಶನ್ ಹಾಗೂ ರಾಷ್ಟ್ರೋತ್ಥಾನ ಪರಿಷತ್ ಉಚಿತವಾಗಿ ಲಸಿಕೆ ವಿತರಣೆ ಹಮ್ಮಿಕೊಂಡಿದೆ.
ಈ ಹಿಂದೆ ವಿಷ್ಣುವರ್ಧನ್ ಓದಿದ ಶಾಲೆ ಶಾಶ್ವತವಾಗಿ ಮುಚ್ಚಿಹೋಗುವ ಸಂಗತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪ್ರಣೀತಾ ಶಾಲೆ ಉಳಿಸಲು ನೆರವಾಗಿದ್ದರು. ಇದು ಮಾತ್ರವೇ ಅಲ್ಲದೆ ಹಲವು ಜನಪರ ಕಾರ್ಯಕ್ರಮಗಳಲ್ಲಿ ಪ್ರಣಿತಾ ತಮ್ಮನ್ನು ತಾವು ತೊಡಿಗಿಸಿಕೊಂಡಿದ್ದಾರೆ.
ಈ ಹಿಂದೆ ಜೂನ್ ತಿಂಗಳಲ್ಲಿ ತಮ್ಮ ಫೌಂಡೇಶನ್ನಿಂದ ಸ್ವತಂತ್ರ್ಯವಾಗಿ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ಪ್ರಣಿತಾ ಹಮ್ಮಿಕೊಂಡಿದ್ದರು.
ಪ್ರಸ್ತುತ ಸಾಮಾಜಿಕ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ನಿರ್ಭಿಡೆಯಿಂದ ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ ಪ್ರಣಿತಾ ಸುಭಾಷ್, ಕೆಲವು ದಿನಗಳ ಹಿಂದಷ್ಟೆ 'ಹಿಂದೂ ಭಯೋತ್ಪಾದನೆ' ಎಂದವರ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದ ನಟಿ ಪ್ರಣಿತಾ, ''ಅಫ್ಘಾನಿಸ್ತಾನದಲ್ಲಿ ಆಗುತ್ತಿರುವ ಹಿಂಸಾಚಾರವನ್ನು ಉದಾಹರಣೆಯಾಗಿ ನೀಡುತ್ತಾ 'ಹಿಂದೂ ಭಯೋತ್ಪಾದನೆ' ವಾದವನ್ನು ಕೆಲವರು ಮುಂದಿಡುತ್ತಿದ್ದಾರೆ. 'ಹಿಂದು ಭಯೋತ್ಪಾದನೆ' ಎಂಬ ತಮ್ಮ ಕಲ್ಪನೆಯನ್ನು ಸಾರ್ವಜನಿಕಗೊಳಿಸುವ ಯತ್ನ ಮಾಡುತ್ತಿದ್ದಾರೆ. ಭಾರತ ದೇಶವು ಎಚ್ಚರಿಕೆಯಿಂದರಬೇಕು, ವೈರಿಗಳು ದೇಶದ ಗಡಿಗಳ ಹೊರಗೆ ಮಾತ್ರವೇ ಇಲ್ಲ ದೇಶದ ಒಳಗೂ ಇದ್ದಾರೆ'' ಎಂದಿದ್ದರು. ಪ್ರಣಿತಾರ ಈ ಟ್ವೀಟ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರಿಂದ, ಆರ್ಎಸ್ಎಸ್ ಬೆಂಬಲಿಗರಿಂದ ಭಾರಿ ಬೆಂಬಲ ವ್ಯಕ್ತವಾಗಿತ್ತು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm