ಬ್ರೇಕಿಂಗ್ ನ್ಯೂಸ್
21-09-21 10:47 am Filmbeat: Bharath Kumar K ಸಿನಿಮಾ
ಮುಂಬೈ, ಸೆ.21: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧನವಾಗಿದ್ದ ಉದ್ಯಮಿ ರಾಜ್ ಕುಂದ್ರಾಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 50 ಸಾವಿರ ರೂಪಾಯಿ ಶ್ಯೂರಿಟಿ ಪಡೆದು ಸೋಮವಾರ ಶಿಲ್ಪಾ ಶೆಟ್ಟಿ ಪತಿಗೆ ಜಾಮೀನು ನೀಡಿದ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ.
ಉದ್ಯಮಿ ರಾಜ್ ಕುಂದ್ರಾ ಜೊತೆ ಸ್ನೇಹಿತ ರಾಯನ್ ತೋರ್ಪೆಗೂ ಜಾಮೀನು ಸಿಕ್ಕಿದೆ ಎಂದು ವರದಿಯಾಗಿದೆ. ಜುಲೈ 16 ರಂದು ರಾಜ್ ಕುಂದ್ರಾ ಮತ್ತು ಇತರರನ್ನು ಮುಂಬೈ ಕ್ರೈಂ ವಿಭಾಗದ ಪೊಲೀಸರು ಅರೆಸ್ಟ್ ಮಾಡಿದ್ದರು. ಈ ಕೇಸ್ ಸಂಬಂಧ ಕಳೆದ ವಾರವಷ್ಟೇ ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ (ಚಾರ್ಜ್ಶೀಟ್) ಸಲ್ಲಿಕೆ ಮಾಡಿದ್ದರು.

ಸೆಪ್ಟೆಂಬರ್ 16 ರಂದು ಮುಂಬೈ ಪೊಲೀಸರು 1467 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರಲ್ಲಿ 43 ಮಂದಿ ಸಾಕ್ಷಿಧಾರರ ಹೇಳಿಕೆಗಳು ದಾಖಲಾಗಿವೆ. ಐದು ವ್ಯಕ್ತಿಗಳು 164 ಸಿಆರ್ಪಿಸಿ ಪ್ರಕಾರ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ. ಇದು ಎರಡನೇ ದೋಷಾರೋಪ ಪಟ್ಟಿ. ಇದಕ್ಕೂ ಮುಂಚೆ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ 3000ಕ್ಕೂ ಅಧಿಕ ಪುಟಗಳನ್ನು ಹೊಂದಿತ್ತು.
ಆ ಸಂದರ್ಭದಲ್ಲಿ ನಟಿ ಗೆಹನಾ ವಸಿಷ್ಠ ಸೇರಿದಂತೆ ಹಲವರನ್ನು ಆಗ ಬಂಧಿಸಲಾಗಿತ್ತು. ಆ ಬಂಧನಗಳ ಬಳಿಕವೇ ರಾಜ್ ಕುಂದ್ರಾ ಹೆಸರು ಹೊರಗೆ ಬಂದು ಜುಲೈ 19 ರಂದು ರಾಜ್ ಕುಂದ್ರಾ ಅನ್ನು ಮುಂಬೈ ಪೊಲೀಸರು ಬಂಧಿಸಿದರು. ರಾಜ್ ಕುಂದ್ರಾ ಅವರಿಂದ ಕೆಲವು ಲ್ಯಾಪ್ಟಾಪ್, ಮೊಬೈಲ್, ಹಾರ್ಡ್ಡಿಸ್ಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ರಾಜ್ ಕುಂದ್ರಾ ವಿರುದ್ಧದ ಆರೋಪ?
ಭಾರತದಲ್ಲಿ ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಮಾರಾಟ ಅಪರಾಧವಾಗಿದ್ದು, ರಾಜ್ ಕುಂದ್ರಾರ ವಿಯಾನ್ ಸಂಸ್ಥೆ ಹಾಗೂ ಕೆಂಡ್ರಿನ್ ಕಂಪೆನಿಗಳು ಭಾರತದಲ್ಲಿಯೇ ನಟಿಯರಿಂದ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶದಲ್ಲಿರುವ ರಾಜ್ ಕುಂದ್ರಾದ ಸೋದರ ಸಂಬಂಧಿ ಪ್ರದೀಪ್ ಭಕ್ಷಿಯ ಸಂಸ್ಥೆಯ ಮೂಲಕ ಹಾಟ್ಶಾಟ್ಸ್ ಅಪ್ಲಿಕೇಶನ್ಗೆ ಅಪ್ಲೋಡ್ ಮಾಡಿಸುತ್ತಿದ್ದರು. ಹಾಟ್ಶಾಟ್ಸ್ ಆಪ್ ಮೂಲಕ ಪ್ರತಿದಿನ ಲಕ್ಷಾಂತರ ರುಪಾಯಿ ಹಣವನ್ನು ರಾಜ್ ಕುಂದ್ರಾ ಗಳಿಸುತ್ತಿದ್ದರು ಎಂದು ಮುಂಬೈ ಪೊಲೀಸರು ಆರೋಪ ಮಾಡಿದ್ದಾರೆ. ರಾಜ್ ಕುಂದ್ರಾಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳನ್ನು ಸಹ ಪೊಲೀಸರು ಸೀಜ್ ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm