ಬ್ರೇಕಿಂಗ್ ನ್ಯೂಸ್
23-09-21 01:39 pm Filmbeat: Manjunatha C ಸಿನಿಮಾ
ಜೂ.ಎನ್ಟಿಆರ್ ಕಾರುಗಳ ಬಗ್ಗೆ ವಿಶೇಷ ಆಸಕ್ತಿ ಇರುವ ನಟ. ಕೆಲವು ದಿನಗಳ ಹಿಂದಷ್ಟೆ ಐಶಾರಾಮಿ, ದುಬಾರಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಜೂ.ಎನ್ಟಿಆರ್ ಖರೀದಿಸಿದ್ದಾರೆ.
ಲ್ಯಾಂಬೊರ್ಗಿನಿ ಉರುಸ್ ಕಾರಿಗೆ 4 ಕೋಟಿಗೂ ಹೆಚ್ಚು ಹಣ ನೀಡಿರುವ ನಟ ಜೂ ಎನ್ಟಿಆರ್, ಆ ಉರುಸ್ ಕಾರಿನ ನಂಬರ್ಗೆ ಈಗ ಲಕ್ಷಾಂತರ ಹಣ ವ್ಯಯ ಮಾಡಿದ್ದಾರೆ.
ಜೂ.ಎನ್ಟಿಆರ್, ಉರುಸ್ ಕಾರಿನ ತಮ್ಮ ಅದೃಷ್ಟದ ಸಂಖ್ಯೆಯನ್ನು ಹಾಕಿಸಿಕೊಂಡಿದ್ದಾರೆ. ಅದುವೇ 9999 ಈ ಸಂಖ್ಯೆಗೆ ದೊಡ್ಡ ಮೊತ್ತದ ಹಣವನ್ನು ಆರ್ಟಿಓಗೆ ನೀಡಿದ್ದಾರೆ ಜೂ.ಎನ್ಟಿಆರ್.

ಬೇಡಿಕೆ ಇರುವ ಸಂಖ್ಯೆಗಳನ್ನು ಆರ್ಟಿಓ ಇಲಾಖೆ ಹರಾಜು ಹಾಕುತ್ತದೆ, ಸಂಖ್ಯೆ ಅವಶ್ಯಕತೆ ಇರುವವರು ಹರಾಜಿನಲ್ಲಿ ಕೂಗಿ ನಂಬರ್ ಪಡೆಯಬೇಕಾಗುತ್ತದೆ. 9999 ಬಹುಜನರ ಮೆಚ್ಚಿನ ನಂಬರ್ ಹಾಗಾಗಿ ಈ ಸಂಖ್ಯೆಗೆ ಬೇಡಿಕೆ ಹೆಚ್ಚು, ಹಾಗಾಗಿ ಹೆಚ್ಚು ಜನ ಈ ನಂಬರ್ಗೆ ಹರಾಜು ಕೂಗಿದ ಕಾರಣ ನಂಬರ್ನ ಬೆಲೆ ಏರಿದೆ. ಬೆಲೆ ಏರಿದರೂ ಬಿಡದ ಜೂ ಎನ್ಟಿಆರ್ ಬರೋಬ್ಬರಿ 17 ಲಕ್ಷ ನೀಡಿ ನಂಬರ್ ಅನ್ನು ಪಡೆದಿದ್ದಾರೆ. ಜೂ.ಎನ್ಟಿಆರ್ ಅವರ ಲ್ಯಾಂಬೊರ್ಗಿಸಿ ಉರುಸ್ ಕಾರಿನ ನಂಬರ್ ಈಗ ಟಿಎಸ್ 09 ಎಫ್ಎಸ್ 9999 ಆಗಿದೆ. 9 ಜೂ ಎನ್ಟಿಆರ್ಗೆ ಅದೃಷ್ಟದ ಸಂಖ್ಯೆಯಾಗಿದ್ದು, ನಂಬರ್ ಪ್ಲೇಟ್ನಲ್ಲಿ ಕೇವಲ 9 ಸಂಖ್ಯೆಗಳು ಮಾತ್ರವೇ ಇರುವಂತೆ ಮಾಡಿಕೊಂಡಿಕೊಂಡಿದ್ದಾರೆ ಜೂ ಎನ್ಟಿಆರ್.
ಜೂ ಎನ್ಟಿಆರ್ ಖರೀದಿಸಿರುವ ಕಾರಿನ ಎಕ್ಸ್ ಶೋರೂಂ ಬೆಲೆ 3.16 ಕೋಟಿ. ಕಾರಿನ ಆನ್ರೋಡ್ ಬೆಲೆ ಅಂದಾಜು 5 ಕೋಟಿ ಇದೆ. ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಇದಾಗಿದ್ದು, ಈ ಮಾದರಿಯ ಭಾರತದ ಮೊದಲ ಕಾರನ್ನು ಜೂ ಎನ್ಟಿಆರ್ ಖರೀದಿ ಮಾಡಿದ್ದರು. 'ದೇಶದ ಮೊದಲ ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಹೈದರಾಬಾದ್ನಲ್ಲಿ ತನ್ನ ಮನೆ ಕಂಡುಕೊಂಡಿದೆ' ಎಂದು ಸಾಮಾಜಿಕ ಜಾಲತಾಣದ ಫ್ಯಾನ್ಸ್ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದವು.
ಸ್ಯಾಂಡಲ್ವುಡ್ ನಟರಲ್ಲಿ ಮೂವರ ಬಳಿ ಲ್ಯಾಂಬರ್ಗಿನಿ ಉರುಸ್ ಕಾರಿದೆ, ಪುನೀತ್ ರಾಜ್ಕುಮಾರ್, ದರ್ಶನ್ ಹಾಗೂ ನಿಖಿಲ್ ಕುಮಾರಸ್ವಾಮಿ ಬಳಿಯೂ ಲ್ಯಾಂಬರ್ಗಿನಿ ಉರುಸ್ ಕಾರು ಇದೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm