ಬ್ರೇಕಿಂಗ್ ನ್ಯೂಸ್
30-09-21 02:13 pm Filmbeat: Bharath Kumar K ಸಿನಿಮಾ
ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ನಲ್ಲಿ ಬಾಯ್ಫ್ರೆಂಡ್ ಜೊತೆ ನಟಿ ಸೌಜನ್ಯ ವಾಸವಾಗಿದ್ದರು. ಕಳೆದ ಹಲವು ದಿನಗಳಿಂದಲೂ ಇಬ್ಬರು ಒಟ್ಟಿಗೆ ಇದ್ದರು. ಆದರೆ ಇಂದು ಬೆಳಗ್ಗೆ ಬಾಯ್ಫ್ರೆಂಡ್ ತಿಂಡಿ ತರಲು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪೊಲೀಸರಿಗೆ ನಟಿ ಸೌಜನ್ಯ ಅವರದ್ದು ಎನ್ನಲಾದ ಡೆತ್ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಾಲ್ಕು ಪುಟಗಳ ಈ ಡೆತ್ನೋಟ್ನಲ್ಲಿ 'ನನ್ನ ಸಾವಿಗೆ ನಾನೇ ಕಾರಣ' ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.
ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.
ಡೆತ್ನೋಟ್ನಲ್ಲಿ ಏನಿದೆ? ''ನನ್ನ ಗೆಲುವಿಗೆ ಸಹಾಯ ಮಾಡಿ ಎಲ್ಲರಿಗೂ ಧನ್ಯವಾದಗಳು. ಜೀವನದಲ್ಲಿ ತುಂಬಾನೆ ಜವಬ್ದಾರಿ ಇತ್ತು. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ. ನಾನು ಮಾತು ಕೊಟ್ಟ ಯಾವುದೇ ಕೆಲಸ ಮಾಡಲು ಸಾಧ್ಯವಾಗಿಲ್ಲ. ಐ ಲವ್ ಯು ಪಪ್ಪ, ಅಮ್ಮ ನಾನು ಮನೆಗೆ ಬರುತ್ತೇನೆ ಎಂದು ಹೇಳಿದ್ದೆ. ಆದರೆ ಈ ಸ್ಥಿತಿಯಲ್ಲಿ ಮನೆಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ನನಗೆ ಮುಂದೆ ಒಳ್ಳೆಯ ಭವಿಷ್ಯ ಇತ್ತು ಅನ್ನೋದು ಗೊತ್ತಿದೆ, ಆದರೂ ಪರವಾಗಿಲ್ಲ. ನನ್ನ ಸಾವಿನ ಬಗ್ಗೆ ಹಾಗೂ ಬರೆದಿರುವ ಪತ್ರವನ್ನ ಯಾವುದೇ ಮಾಧ್ಯಮಗಳಿಗೂ ಕೊಡಬೇಡಿ'' ಎಂದು ನಟಿ ಸೌಜನ್ಯ ಮನವಿ ಮಾಡಿದ್ದಾರೆ.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm