ಬ್ರೇಕಿಂಗ್ ನ್ಯೂಸ್
01-10-21 04:57 pm Filmbeat ಸಿನಿಮಾ
ಸ್ಯಾಂಡಲ್ ವುಡ್ ನಟ ಸತೀಶ್ ನೀನಾಸಂ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸತೀಶ್ ತಾಯಿ ಚಿಕ್ಕತಾಯಮ್ಮ ಇಂದು (ಅಕ್ಟೋಬರ್ 1) ಬೆಳಗ್ಗೆ ಆರ್ ಆರ್ ನಗರ ನಿವಾಸದಲ್ಲಿ ಕೊನೆಯುಸಿರೆದರು ಎನ್ನುವ ಸುದ್ದಿ ತಿಳಿದುಬಂದಿದೆ. ಚಿಕ್ಕತಾಯಮ್ಮ ಅವರಿಗೆ 85 ವರ್ಷ ವಯಸ್ಸಾಗಿತ್ತು.
ಚಿಕ್ಕತಾಯಮ್ಮ ಪುತ್ರ ಸತೀಶ್ ನೀನಾಸಂ ಅವರ ಜೊತೆಯೇ ಬೆಂಗಳೂರಿನ ಆರ್ ಆರ್ ನಗರದಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ ಚಿಕ್ಕತಾಯಮ್ಮ ಅವರ ಅಂತ್ಯಕ್ರಿಯೆ ಅವರ ಸ್ವಂತ ಊರಾದ ಮದ್ದೂರಿನ ಯಲದಳ್ಳಿಯಲ್ಲಿ ನಡೆಯಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇವತ್ತೇ ಅವರ ಅಂತ್ಯಕ್ರಿಯೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಪಾರ್ಥಿವ ಶರೀರ ಬೆಂಗಳೂರಿನಿಂದ ಮದ್ದೂರಿಗೆ ತೆಗೆದುಕೊಂಡು ಹೋಗಲಾಗುತ್ತಿದೆ.

ಸತೀಶ್ ಅವರ ತಾಯಿ ಚಿಕ್ಕತಾಯಮ್ಮ ಅವರು ಕಳೆದ ಒಂದು ವರ್ಷದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸತೀಶ್ ಸಿನಿಮಾ ಕೆಲಸಗಳ ಜೊತೆಗೆ ತಾಯಿಯನ್ನು ಪ್ರೀತಿಯಿಂದ ಆರೈಕೆ ಮಾಡುತ್ತಿದ್ದರು. ಆದರೀಗ ಬಾರದಲೋಕದ ಕಡೆ ಪಯಣ ಬೆಳೆಸಿದ್ದಾರೆ. 85 ವರ್ಷದ ಚಿಕ್ಕತಾಯಮ್ಮ ಅವರಿಗೆ ಒಟ್ಟು 8 ಜನ ಮಕ್ಕಳಿದ್ದರು. ಅವರಲ್ಲಿ ನಾಲ್ಕು ಗಂಡು ಮಕ್ಕಳು ಮತ್ತು ನಾಲ್ಕು ಹೆಣ್ಣು ಮಕ್ಕಳು.
ಇತ್ತೀಚಿಗಷ್ಟೆ ಸತೀಶ್ ಗೆಳೆಯ ಸಂಚಾರಿ ವಿಜಯ್ ಅವರನ್ನು ಕಳೆದುಕೊಂಡು ತೀವ್ರ ದುಃಖದಲ್ಲಿದ್ದರು. ಗೆಳೆಯನ ಅಗಲಿಕೆಯ ನೋವು ಮಾಸುವ ಮುನ್ನವೇ ತಾಯಿಯನ್ನು ಕಳೆದುಕೊಂಡು ಮತ್ತಷ್ಟು ದುಃಖದಲ್ಲಿದ್ದಾರೆ. ಸತೀಶ್ ತಾಯಿಯ ನಿಧನಕ್ಕೆ ಅಭಿಮಾನಿಗಳು ಮತ್ತು ಸಿನಿ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.
ಇನ್ನು ಸತೀಶ್ ಸಿನಿಮಾ ವಿಚಾರಕ್ಕೆ ಬರುವುದಾದರೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗೋದ್ರ, ದಸರ, ಮೈ ನೇಮ್ ಈಸ್ ಸಿದ್ದೇಗೌಡ, ಪರಿಮಳ ಲಾಡ್ಜ್, ಪೆಟ್ರೋಮ್ಯಾಕ್ಸ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಸತೀಶ್ ನಟಿಸುತ್ತಿದ್ದು, ಬಿಡುಗಡೆಗೆ ಕಾಯುತ್ತಿದ್ದಾರೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm