ಬ್ರೇಕಿಂಗ್ ನ್ಯೂಸ್
18-10-21 12:46 pm Headline Karnataka News Network ಸಿನಿಮಾ
ಪಾಪಾ ಪಾಂಡು' ಸೇರಿ ಹಲವು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು (ಅಕ್ಟೋಬರ್ 18)ರ ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾವಾಹಿ ನಟ-ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.
'ಪಾಪಾ ಪಾಂಡು' ಧಾರಾವಾಹಿಯಲ್ಲಿ ಬಾಸ್ ಪಾತ್ರ ನಿರ್ವಹಿಸಿದ್ದ ಶಂಕರ್ ರಾವ್, ರಮೇಶ್ ಅರವಿಂದ್ ನಿರ್ದೇಶನದ 'ಬಿಸಿ-ಬಿಸಿ' ಸಿನಿಮಾದ ಪಕ್ಕದ ಮನೆಯ ಅಂಕಲ್ ಪಾತ್ರದಿಂದಲೂ ಸಾಕಷ್ಟು ಖ್ಯಾತಿ ಗಳಿಸಿದ್ದರು. 'ಪರ್ವ', 'ಸಿಲ್ಲಿ-ಲಲ್ಲಿ' ಧಾರಾವಾಹಿಗಳಲ್ಲಿಯೂ ಅವರು ನಟಿಸಿದ್ದಾರೆ. ತುಮಕೂರಿನಲ್ಲಿ ಹುಟ್ಟಿ ಬೆಳೆದ ಶಂಕರ್ ರಾವ್ ಎಳವೆಯಿಂದಲೇ ಸಿನಿಮಾ ಪ್ರೇಮಿ. ಶಾಲಾ ದಿನಗಳಲ್ಲಿ ನಟನೆಯ ಬಗ್ಗೆ ಅಭಿರುಚಿ ಬೆಳೆಸಿಕೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಸಣ್ಣ ವಯಸ್ಸಿಗೆ ತಂದೆ ಕಳೆದುಕೊಂಡ ಶಂಕರ್ ರಾವ್ ಮನೆಯ ಜವಾಬ್ದಾರಿ ನಿಭಾಯಿಸುವ ಜೊತೆಗೆ ನಟನೆಯ ಹವ್ಯಾಸವನ್ನೂ ಮುಂದುವರೆಸಿದರು.
1956ರಲ್ಲಿ ಬೆಂಗಳೂರಿಗೆ ಬಂದ ಶಂಕರ್ ರಾವ್, 'ಗೆಳೆಯರ ಬಳಗ' ತಂಡ ಕಟ್ಟಿಕೊಂಡು ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. 'ನಟರಂಗ' ತಂಡದಲ್ಲಿಯೂ ಸಕ್ರಿಯರಾಗಿದ್ದರು. ಇವರ ಅಭಿನಯ ಚತುರತೆ ಗಮನಿಸಿ ನಿರ್ಮಾಪಕರೊಬ್ಬರು 'ಯಾರ ಸಾಕ್ಷಿ' ಸಿನಿಮಾದಲ್ಲಿ ಅವಕಾಶ ನೀಡಿದರು. ಅಲ್ಲಿಂದ ಸಾಕಷ್ಟು ಸಿನಿಮಾಗಳಲ್ಲಿ ಶಂಕರ್ ರಾವ್ ನಟಿಸಿದರು.
Senior actor Shankar Rao, who has portrayed varied roles on the small and silver screens, has passed away in Bengaluru. He was 84. Sandalwood and the television industry have expressed grief over his death, with netizens taking to social media pages to express shock.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am