ಬ್ರೇಕಿಂಗ್ ನ್ಯೂಸ್
03-12-21 01:44 pm HK Desk news ಸಿನಿಮಾ
ಬೆಂಗಳೂರು, ಡಿ.3: ಕನ್ನಡ ಚಿತ್ರರಂಗ ಹಿರಿಯ ನಟ ಶಿವರಾಂ(84) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೋಮಾಕ್ಕೆ ತಲುಪಿದ್ದಾರೆಂದು ಹೇಳಲಾಗುತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇತ್ತೀಚೆಗೆ ಕುಟುಂಬಸ್ಥರ ಜೊತೆ ಕಾರಿನಲ್ಲಿ ಹೊರಗೆ ಹೋಗಿದ್ದಾಗ ಅಪಘಾತ ನಡೆದಿದ್ದು, ಈ ವೇಳೆ ಶಿವರಾಂ ಅವರಿಗೂ ಸ್ವಲ್ಪ ಪೆಟ್ಟಾಗಿತ್ತು. ಆನಂತರ, ಯಾವುದೇ ತೊಂದರೆ ಇಲ್ಲವೆಂದು ಮನೆಗೆ ಕರೆ ತರಲಾಗಿತ್ತು. ಮನೆಯಲ್ಲಿದ್ದ ಅವರು ದಿಢೀರ್ ಆಗಿ ಅಸ್ವಸ್ಥರಾಗಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳವಾರ ರಾತ್ರಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿಗೆ ಪೂಜೆ ನಡೆಸಲಾಗಿದ್ದು, ಈ ವೇಳೆ ಕುಟುಂಬಸ್ಥರ ಜೊತೆ ಪೂಜಾ ಕಾರ್ಯದಲ್ಲಿ ಶಿವರಾಂ ಕೂಡ ಭಾಗವಹಿಸಿದ್ದರು. ಪೂಜೆ ಮಾಡಲು ಹೋಗಿದ್ದಾಗ ಆಯತಪ್ಪಿ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟು ತಗಲಿದೆ ಎನ್ನಲಾಗುತ್ತಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ ವೇಳೆ ಶಿವರಾಂ ಅವರಿಗೆ ಮೆದುಳಿನಲ್ಲಿ ರಕ್ತಸ್ರಾವ ಆಗಿರುವುದು ಕಂಡುಬಂದಿತ್ತು. ಇದೀಗ ಶಿವರಾಂ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ಕೋಮಾ ಸ್ಥಿತಿಗೆ ಜಾರಿದ್ದಾರೆ ಅನ್ನುವ ಮಾಹಿತಿ ಲಭಿಸಿದೆ.
ತಂದೆಯ ಆರೋಗ್ಯದ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಪುತ್ರ ರವಿಶಂಕರ್, ತಲೆಗೆ ಪೆಟ್ಟು ತಗಲಿದ್ದರಿಂದ ತಲೆಯ ಭಾಗದ ಸ್ಕ್ಯಾನಿಂಗ್ ಮಾಡಲಾಗಿತ್ತು. ಅದರಲ್ಲಿ ಮೆದುಳಿನ ರಕ್ತಸ್ರಾವ ಆಗಿರುವುದು ಕಂಡುಬಂದಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದರು.
ಶಿವರಾಂ ಹಿಂದಿನಿಂದಲೂ ಕನ್ನಡ ಚಿತ್ರರಂಗದಲ್ಲಿದ್ದು ನೂರಾರು ಚಿತ್ರಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡು ಖ್ಯಾತಿ ಗಳಿಸಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಜೊತೆಗೆ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್ ಕಾಲದ ಚಿತ್ರನಟರ ಪೈಕಿ ಕೊನೆಯ ಕೊಂಡಿ ಅಂತಲೂ ಹೇಳಬಹುದು.
Veteran Kannada actor S Shivaram is in a critical condition after being hospitalised due to a head injury. The actor, who was admitted to a private hospital in Bengaluru on Tuesday, is being treated in the intensive care unit (ICU).
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm