ಬ್ರೇಕಿಂಗ್ ನ್ಯೂಸ್
14-09-20 12:54 pm Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 13: ಕಂಗನಾ ರಣಾವತ್ ಅವರಿಗೆ ದೇಶದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಮಹಾರಾಷ್ಟ್ರ ಸರಕಾರ ಕಂಗನಾ ಅವರ ಕಚೇರಿ ಹಾಗು ಮನೆ ಧ್ವಂಸ ಗೊಳಿಸಿದ ಬಳಿಕ ಭಾರಿ ಸುದ್ದಿಯಲ್ಲಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯ ಬಗ್ಗೆ ಕಂಗನಾ ಪ್ರಶ್ನಿಸುವ ಬಗೆ ಹಾಗು ತನಿಖೆಯ ದಿಕ್ಕು ತಪ್ಪಿಸಲು ಮಹಾರಾಷ್ಟ್ರ ಸರಕಾರ ಮಾಡಿರುವ ಕಸರತ್ತುಗಳ ವಿರುದ್ದ ತೊಡೆ ತಟ್ಟಿರುವ ಕಂಗನಾ ರಾಣಾವತ್ ಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ನಡುವಲ್ಲೇ ಜಸ್ಟ್ ಆಸ್ಕಿಂಗ್ ನ ಮೂಲಕ ವಿವಾದ ಸರಮಾಲೆಯನ್ನೇ ತೊಟ್ಟಿರುವ ನಟ ಪ್ರಕಾಶ್ ರಾಜ್ ಉರ್ಫ್ ರೈ, ಕಂಗನಾ ರಾಣಾವತ್ ಕಾಲು ಎಳೆಯೋಕೆ ಹೋಗಿ ಇದೀಗ ಸ್ವತಃ ಟ್ರೋಲ್ ಆಗಿದ್ದಾರೆ. ಸುಮ್ಮನೆ ಕೂರ್ಲಿಕ್ ಆಗದೇ ...... ಇರುವೆ ಬಿಟ್ಕೊಂಡ್ರಂತೆ. ಹೀಗಾಗಿದೆ ಪ್ರಕಾಶ್ ರೈ ಕತೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಬಳಿಕ ಬಾಲಿವುಡ್ ನಲ್ಲಿರುವ ನೆಪೋಟಿಸಂ ಬಗ್ಗೆ ಕಂಗನಾ ಧ್ವನಿ ಎತ್ತಿದ್ದರು. ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಈ ನಡುವೆ ಕಂಗನಾ ಅವರನ್ನು ಟೀಕಿಸುವ ಭರದಲ್ಲಿ ಟ್ವೀಟ್ ಮಾಡಿರುವ ಪ್ರಕಾಶ್ ರೈ, ಕಂಗನಾ ರಾಣಾವತ್ ಮಣಿಕರ್ಣಿಕಾ ಚಿತ್ರದಲ್ಲಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪಾತ್ರದಲ್ಲಿ ಅಭಿನಯಿಸಿದ್ದ ಮಾತ್ರಕ್ಕೆ ಇದೀಗ ನಿಜ ಜೀವನದಲ್ಲೂ ಲಕ್ಷ್ಮೀಬಾಯಿ ಅಂದು ಕೊಂಡಿದ್ದಾರಾ ? ಎಂದು ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದರು. ಅದರೊಂದಿಗೆ ದೀಪಿಕಾ ಪಡಕೋಣೆ, ಹೃಿತಿಕ್ ರೋಶನ್, ಶಾರುಕ್ ಖಾನ್, ಮೊದಲಾದವರು ನಟಿಸಿದ ಚಿತ್ರಗಳ ಪೋಸ್ಟರ್ ಗಳನ್ನು ಪೋಸ್ಟ್ ಮಾಡಿದ್ದಾರೆ. ಇದನ್ನು ಇಟ್ಟುಕೊಂಡೇ ನೆಟ್ಟಿಗರು ಪ್ರಕಾಶ್ ರೈ ಅವರನ್ನೇ ಟ್ರೋಲ್ ಮಾಡಿದ್ದಾರೆ.
ಜಸ್ಟ್ ಆಸ್ಕಿಂಗ್ ಹ್ಯಾಷ್ ಟ್ಯಾಗ್ ಮೂಲಕ ಪ್ರಕಾಶ್ ರೈ ಟ್ವೀಟ್ ಮಾಡಿರೋದಕ್ಕೆ ಸಾಕಷ್ಟು ಪರ ವಿರೋಧದ ಟೀಕೆಗಳು ಕೇಳಿಬರುತ್ತಿವೆ.
Join our WhatsApp group for latest news updates
#justasking pic.twitter.com/LlJynLM1xr
— Prakash Raj (@prakashraaj) September 12, 2020
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm