ಬ್ರೇಕಿಂಗ್ ನ್ಯೂಸ್
25-12-21 01:12 pm Mangalore Correspondent ಸಿನಿಮಾ
ಮಂಗಳೂರು, ಡಿ.25 : ಗುಳಿ ಕೆನ್ನೆಯ ಚೆಲುವೆ, ನಟಿ ರಚಿತಾ ರಾಮ್ ಮಂಗಳೂರಿನ ಪೊಲೀಸರಲ್ಲಿ ಮಿಂಚು ಹರಿಸಿದ್ದಾರೆ. ಪೊಲೀಸ್ ಕಮಿಷನರ್ ಶಶಿಕುಮಾರ್ ಕರೆಯಂತೆ, ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ ನಟಿ ರಚಿತಾ ಪೊಲೀಸರ ಜೊತೆಗೆ ಬೆರೆತು ಹರಟಿದ್ದಾರೆ.
ದೇವಸ್ಥಾನ ಭೇಟಿ ಸೇರಿದಂತೆ ಖಾಸಗಿ ಕಾರ್ಯಕ್ರಮಕ್ಕೆಂದು ರಚಿತಾ ಮಂಗಳೂರಿಗೆ ಆಗಮಿಸಿದ್ದರು. ಪಬ್ಬಾಸ್ ನಲ್ಲಿ ಐಸ್ ಕ್ರೀಮ್ ತಿಂದು ಹೋಗೋಣ ಎಂದು ಲಾಲ್ ಬಾಗ್ ಬಂದಿದ್ರಂತೆ. ಅಷ್ಟೊತ್ತಿಗೆ ಕಮಿಷನರ್ ಶಶಿಕುಮಾರ್ ಫೋನ್ ಮಾಡಿದ್ದು, ಕಚೇರಿಗೆ ಬರುವಂತೆ ಹೇಳಿದ್ದಾರೆ. ಅದರಂತೆ, ಕಚೇರಿಗೆ ಬಂದ ನಟಿಯನ್ನು ಪೊಲೀಸರು ಮುತ್ತಿಕೊಂಡಿದ್ದಾರೆ.


ಸಿನಿಮಾದಲ್ಲಿ ನೋಡಿದ್ದ ಪೊಲೀಸರು ನಟಿಯನ್ನು ಕಾಣುತ್ತಲೇ ಸೆಲ್ಫಿ ಕ್ಲಿಕ್ಕಿಸಿದ್ದೇ ಕ್ಲಿಕ್ಕಿಸಿದ್ದು. ನಟಿಯ ಅಕ್ಕ ಪಕ್ಕದಲ್ಲಿ ನಿಂತು ಥರಹೇವಾರಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡರು. ಮಹಿಳಾ ಪೊಲೀಸ್ ಪೇದೆಯರು, ಕಮಿಷನರ್ ಕಚೇರಿಯ ಉದ್ಯೋಗಸ್ಥ ಸಿಬಂದಿ, ಪೊಲೀಸ್ ಅಧಿಕಾರಿಗಳೆಲ್ಲ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದರು. ಇದೇ ವೇಳೆ, ಪೊಲೀಸರ ವತಿಯಿಂದ ಕಮಿಷನರ್ ಶಶಿಕುಮಾರ್ ರಚಿತಾ ರಾಮ್ ಅವರನ್ನು ಸನ್ಮಾನಿಸಿದರು. ಕರಾವಳಿಯ ಯಕ್ಷಗಾನದ ಕಿರೀಟವುಳ್ಳ ಸ್ಮರಣಿಕೆ, ಶಾಲು ಹೊದೆಸಿ ಸನ್ಮಾನಿಸಿದ್ದು ವಿಶೇಷವಾಗಿತ್ತು.



ಇದೇ ವೇಳೆ, ಮಾತನಾಡಿದ ನಟಿ ತಮ್ಮ ಚೆಲ್ಲು ಚೆಲ್ಲು ಮಾತುಗಳಿಂದಲೇ ಪೊಲೀಸರನ್ನು ಆಕರ್ಷಿಸಿದರು. ಏನೋ ಆಕಸ್ಮಿಕವಾಗಿ ಬಂದಿದ್ದೇನೆ. ಯಾವುದೇ ಮೇಕಪ್ ಮಾಡಿಕೊಂಡಿಲ್ಲ ಎಂದು ನಗುತ್ತಾ ಇಲ್ಲಿ ಬರೋದಿಕ್ಕೆ ಶಶಿ ಸರ್ ಕಾರಣ ಎಂದು ಹೇಳಿದರು. ನನಗೂ ಸಣ್ಣಂದಿನಲ್ಲಿ ಐಪಿಎಸ್ ಅಧಿಕಾರಿಯಾಗಬೇಕು ಎಂಬ ಆಸೆ ಇತ್ತು. ಆದರೆ ಈಡೇರಲಿಲ್ಲ. ಬದಲಿಗೆ ನಟಿಯಾಗಿದ್ದೇನೆ. ನಟಿಯಾಗಿ ಸಾಧಾರಣ ಎಲ್ಲ ರೀತಿಯ ಪಾತ್ರಗಳನ್ನು ಮಾಡಿದ್ದೇನೆ. ಪೊಲೀಸ್ ಅಧಿಕಾರಿಯಾಗುವ ಪಾತ್ರ ಇನ್ನೂ ಸಿಕ್ಕಿಲ್ಲ. ಅಂಥ ಉತ್ತಮ ಚಿತ್ರಕತೆ ಸಿಕ್ಕಿದರೆ ಮಾಡಬೇಕೆಂದಿದ್ದೇನೆ ಎಂದು ಹೇಳಿದರು.



ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಪೊಲೀಸರು ತಮ್ಮ ಜೀವ ಲೆಕ್ಕಿಸದೆ ಕೆಲಸ ಮಾಡಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ. ಎಲ್ಲರೂ ಖುಷಿಯಿಂದಿರಿ. ಖುಷಿಯಿಂದ ಜೀವನ ಎಂಜಾಯ್ ಮಾಡಿ. ಇವತ್ತು ಹೀಗಿದ್ದೇವೆ, ನಾಳೆ ಹೇಗಿರುತ್ತೇವೋ ಗೊತ್ತಿಲ್ಲ. ಅದಕ್ಕಾಗಿ ಪಾಸಿಟಿವ್ ಆಗಿ ಯೋಚಿಸುತ್ತಾ ಖುಷಿಯಿಂದಿರಬೇಕು ಎನ್ನುತ್ತಾ ಪುನೀತ್ ಹೆಸರೇಳದೆ, ಅಂದಿನ ಘಟನೆಯನ್ನು ಮೆಲುಕು ಹಾಕಿದರು. ಮುಂದಿನ ವಾರ ತನ್ನ ಹೊಸ ಫಿಲ್ಮ್ ಬರ್ತಿದೆ, ಎಲ್ಲರೂ ನೋಡಿ. ಸಪೋರ್ಟ್ ಮಾಡಿ ಎನ್ನುತ್ತಾ ಬೈ ಬೈ ಹೇಳಿದರು.
Actress Rachita Ram in Mangalore, facilitated by Police Commissioner Shahi Kumar and staffs. Police personals thronged for selfies. Also Rachita thanked the Mangalore police department for their overwhelm love and care.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm