ಬ್ರೇಕಿಂಗ್ ನ್ಯೂಸ್
17-09-20 03:00 pm Headline Karnataka News Network ಸಿನಿಮಾ
ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm