ಬ್ರೇಕಿಂಗ್ ನ್ಯೂಸ್
19-02-22 11:26 am Bengaluru Correspondent ಸಿನಿಮಾ
ಬೆಂಗಳೂರು, ಫೆ.19 : ಹಿರಿಯನಟ, ಕಲಾತಪಸ್ವಿ ರಾಜೇಶ್(87) ಇನ್ನು ನೆನಪು ಮಾತ್ರ. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶ್ರೀನಿ ನಟನೆಯ ಓಲ್ಡ್ ಮಾಂಕ್ ಅವ್ರ ಕಟ್ಟ ಕಡೆಯ ಸಿನಿಮಾ ಆಗಿತ್ತು. ಇವ್ರ ಮೂಲ ಹೆಸರು ಮುನಿ ಚೌಡಪ್ಪ. ವಿದ್ಯಾಸಾಗರ್ ಹೆಸರಿನಿಂದ ರಂಗಭೂಮಿಯಲ್ಲಿ ಕಲಾವಿದರಾಗಿ ಗುರ್ತಿಸಿಕೊಂಡಿದ್ದರು. ಬಳಿಕ ಶಕ್ತಿ ನಾಟಕ ಮಂಡಳಿ ಕಟ್ಟಿ ರಂಗಕರ್ಮಿಯಾಗಿ ಹೆಸರು ಮಾಡಿದ್ದರು.

ನಿರುದ್ಯೋಗಿ ಬಾಳು, ಬಡವನ ಬಾಳು, ವಿಷ ಸರ್ಪ, ನಂದಾ ದೀಪ, ಕಿತ್ತೂರು ರಾಣಿ ಚೆನ್ನಮ್ಮ ನಾಟಕಗಳಲ್ಲಿ ಅಭಿನಯಿಸಿ ಜನಪ್ರಿಯತೆ ಗಳಿಸಿದ್ದರು. 60ರ ದಶಕದಲ್ಲಿ ವೀರ ಸಂಕಲ್ಪ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ. 1968ರ ನಮ್ಮ ಊರು ಚಿತ್ರದಲ್ಲಿ ರಾಜೇಶ್ ಅಂತ ಹೆಸರು ಬದಲಿಸಿಕೊಂಡಿದ್ದರು.


ಕಪ್ಪು ಬಿಳುಪು, ಎರಡು ಮುಖ, ಪುಣ್ಯ ಪುರುಷ, ದೇವರ ಗುಡಿ, ಕಾವೇರಿ, ಕ್ರಾಂತಿ ವೀರ ಸೇರಿದಂತೆ 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಜೊತೆಗೆ ಸಹನಟರಾಗಿ ಭಾರೀ ಖ್ಯಾತಿ ಗಳಿಸಿದ್ದರು. ಅವ್ರ ಕಲಾ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೌರವ ನೀಡಲಾಗಿತ್ತು.

ಮಗಳು ನಿವೇದಿತಾಗೆ ನಟ ಅರ್ಜುನ್ ಸರ್ಜಾ ಜೊತೆ ಕಲ್ಯಾಣ ಆಗಿತ್ತು. ರಥಸಪ್ತಮಿ ಚಿತ್ರದಲ್ಲಿ ಮಗಳು ನಿವೇದಿತಾ ನಟಿಸಿದ್ದರು. ಅಳಿಯ, ಮಗಳು, ಮೊಮ್ಮಗಳು ಸೇರಿದಂತೆ ಇವರ ಇಡೀ ಕುಟುಂಬ ಸಿನಿಮಾ ರಂಗದಲ್ಲಿರುವುದು ವಿಶೇಷ.
Popular veteran Kannada actor Rajesh, also fondly known as Kala Thapaswi, passes away at 89 due to age-related issues. Since February 9, the actor was hospitalised and was undergoing treatment in Bengaluru due to age-related ailments. However, despite several efforts, he breathed last at midnight at 2:30 AM.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm