ಬ್ರೇಕಿಂಗ್ ನ್ಯೂಸ್
05-04-22 02:04 pm Source: Vijayakarnataka ಸಿನಿಮಾ
'ದಳಪತಿ' ವಿಜಯ್ ಮತ್ತು ಪೂಜಾ ಹೆಗ್ಡೆ ಅಭಿನಯದ 'ಬೀಸ್ಟ್' ಸಿನಿಮಾ ಏಪ್ರಿಲ್ 13ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ಒಂದು ವರ್ಷದ ನಂತರ ವಿಜಯ್ ಸಿನಿಮಾವೊಂದು ತೆರೆಗೆ ಬರುತ್ತಿರುವುದರಿಂದ ಫ್ಯಾನ್ಸ್ ಕುತೂಹಲದಿಂದ ಕಾಯುತ್ತಿದ್ದಾರೆ. ಈಚೆಗಷ್ಟೇ ರಿಲೀಸ್ ಆಗಿರುವ ಸಿನಿಮಾದ ಟ್ರೇಲರ್ ಎಲ್ಲರ ಗಮನಸೆಳೆಯುತ್ತಿದೆ. ತಮಿಳು ಜೊತೆಗೆ ಹಿಂದಿ, ತೆಲುಗು, ಕನ್ನಡದಲ್ಲೂ ಈ ಸಿನಿಮಾ ರಿಲೀಸ್ ಆಗಲಿದೆ. ಈ ಮಧ್ಯೆ ಒಂದು ಬ್ಯಾಡ್ ನ್ಯೂಸ್ ವಿಜಯ್ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ. ಅದೇನೆಂದರೆ, ಈ ಬಹುನಿರೀಕ್ಷಿತ 'ಬೀಸ್ಟ್' ಸಿನಿಮಾವನ್ನು ಕುವೈತ್ನಲ್ಲಿ ನೋಡುವಂತಿಲ್ಲ. ಅಲ್ಲಿ ಪ್ರದರ್ಶನ ಮಾಡದಂತೆ ಸಿನಿಮಾವನ್ನು ಬ್ಯಾನ್ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ! ಇದು ಸಿನಿಮಾ ತಂಡಕ್ಕೆ ದೊಡ್ಡ ಶಾಕ್ ನೀಡಿದೆ. ಅಷ್ಟಕ್ಕೂ ಇಂಥದ್ದೊಂದು ಖಡಕ್ ನಿರ್ಧಾರಕ್ಕೆ ಕಾರಣವೇನು?
ಮುಸ್ಲಿಮರನ್ನು ಟೆರರಿಸ್ಟ್ ರೀತಿ ತೋರಿಸುವ ಹಾಗಿಲ್ಲ!

ಕುವೈತ್ ಸರ್ಕಾರ ಒಂದು ನಿಯಮ ರೂಪಿಸಿದೆ. ಅದೇನೆಂದರೆ, ಸಿನಿಮಾಗಳಲ್ಲಿ ಮುಸ್ಲಿಮರನ್ನು ಭಯೋತ್ಪಾದಕರಂತೆ ತೋರಿಸುವ ಹಾಗಿಲ್ಲ. ಹಾಗೇ ತೋರಿಸಿದರೆ, ಅಂಥ ಸಿನಿಮಾಗಳನ್ನು ಕುವೈತ್ನಲ್ಲಿ ಪ್ರದರ್ಶನ ಮಾಡುವುದಕ್ಕೆ ಅನುಮತಿ ನೀಡುವುದಿಲ್ಲ. ಇದೀಗ ಆ ನಿಯಮ 'ಬೀಸ್ಟ್'ಗೂ ಅನ್ವಯಿಸಲಿದೆ. ಅಷ್ಟಕ್ಕೂ ಸಿನಿಮಾದಲ್ಲಿ ಏನಿದೆ? ಚೆನ್ನೈನ ಪ್ರಸಿದ್ಧ ಮಾಲ್ ಮೇಲೆ ಟೆರರಿಸ್ಟ್ಗಳು ದಾಳಿ ಮಾಡಿ, ಮಾಲ್ನಲ್ಲಿ ಇರುವವರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುತ್ತಾರೆ. ಸಿನಿಮಾದಲ್ಲಿ ಸಾಕಷ್ಟು ಭಯೋತ್ಪಾದಕರ ಜೊತೆಗೆ ಹೀರೋ ಹೋರಾಡುತ್ತಾನೆ. ಅಲ್ಲದೆ, ಹಾಗೆ ಸಿನಿಮಾದಲ್ಲಿ ಬರುವ ಟೆರರಿಸ್ಟ್ ಪಾತ್ರಗಳು ಮುಸ್ಲಿಮರನ್ನು ಹೋಲುತ್ತವೆ. ಆ ಕಾರಣಕ್ಕಾಗಿ ಕುವೈತ್ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಇದೇ ಮೊದಲ ಬಾರಿ ಏನಲ್ಲ!

ಈ ರೀತಿ ಭಾರತದ ಸಿನಿಮಾಗಳನ್ನು ಕುವೈತ್ ಸರ್ಕಾರ ಬ್ಯಾನ್ ಮಾಡಿರುವುದು ಇದೇ ಮೊದಲ ಬಾರಿ ಏನಲ್ಲ. ಈಚೆಗೆ ತೆರೆಕಂಡ ಮಲಯಾಳಂ ಕುರುಪ್ ಮತ್ತು ತಮಿಳಿನ ಎಫ್ಐಆರ್ ಸಿನಿಮಾಗಳನ್ನು ಕೂಡ ಕುವೈತ್ ಸರ್ಕಾರ ಬ್ಯಾನ್ ಮಾಡಿತ್ತು. ಅದಕ್ಕೂ ಕೂಡ ಇದೇ ಅಂಶವೇ ಕಾರಣವಾಗಿತ್ತು. ಈ ಸಿನಿಮಾಗಳಲ್ಲಿ ಮುಸ್ಲಿಮರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದು ಕುವೈತ್ ಸರ್ಕಾರದ ನೀತಿಗೆ ವಿರುದ್ಧವಾಗಿತ್ತು. ಇದೀಗ ವಿಜಯ್ ಅವರ 'ಬೀಸ್ಟ್' ರಿಲೀಸ್ಗೆ ತಡೆಯೊಡ್ಡಿರುವುದು ಅಲ್ಲಿರುವ ದಳಪತಿ ಫ್ಯಾನ್ಸ್ಗೆ ಬೇಸರ ಉಂಟು ಮಾಡಿದೆ. ಅವರೀಗ ಸಿನಿಮಾ ವೀಕ್ಷಿಸಲು ಬೇರೆಡೆಗೆ ಹೋಗಬೇಕಿದೆ.
Kuwait Government Bans Thalapathy Vijay Pooja Hegdes Beast Movie.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm