ಬ್ರೇಕಿಂಗ್ ನ್ಯೂಸ್
12-04-22 01:52 pm Source: Vijayakarnataka ಸಿನಿಮಾ
ತಾರಾಜೋಡಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮದುವೆ ಕುರಿತಾದ ಸುದ್ದಿಗಳು ಈಗ ಸೋಷಿಯಲ್ ಮೀಡಿಯಾದಲ್ಲಿ‘ರಲಿಯಾ’ ಎಂಬ ಹ್ಯಾಷ್ಟ್ಯಾಗ್ನಲ್ಲಿ ಟಾಪ್ ಟ್ರೆಂಡಿಂಗ್ನಲ್ಲಿದೆ. ರಣಬೀರ್ ಮತ್ತು ಆಲಿಯಾ ಹೆಸರಿನ ಮೊದಲಾಕ್ಷರವನ್ನು ಜೋಡಿಸಿರುವ ರಲಿಯಾ ಎಂಬ ಪದದಲ್ಲಿ ಅವರ ಮದುವೆ ವಿವರಗಳನ್ನು ಜನರು ಪೋಸ್ಟ್ ಮಾಡುತ್ತಿದ್ದಾರೆ.
ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮದುವೆಯು ನಟನ ತಂದೆ, ಹಿರಿಯ ನಟ ರಿಷಿ ಕಪೂರ್ ( Rishi Kapoor ) ಮತ್ತು ತಾಯಿ, ಹಿರಿಯ ನಟಿ ನೀತೂ ಸಿಂಗ್ ಮದುವೆಯಾಗಿದ್ದ ಮುಂಬಯಿಯ ಆರ್ಕೆ ಹೌಸ್ನಲ್ಲಿ ಮುಂದಿನ ವಾರ ನಡೆಯಲಿದೆ. ಕಪೂರ್ ಕುಟುಂಬದ ಪೂರ್ವಜರ ಮನೆಯಾಗಿರುವ ಈ ತಾಣ ಏಪ್ರಿಲ್ 14ರಂದು ‘ರಲಿಯಾ’ (ರಣಬೀರ್ ಕಪೂರ್, ಆಲಿಯಾ ಭಟ್ ) ಮದುವೆಗೆ ಸಾಕ್ಷಿಯಾಗಲಿದೆ. ಆದರೆ ಈಗ ಮದುವೆಯ ದಿನಾಂಕ ಬದಲಾವಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ಸೆಕ್ಯುರಿಟಿ ಕಾರಣಕ್ಕೆ ಮದುವೆ ದಿನಾಂಕ ಬದಲಾಯಿಸಲಾಗುತ್ತದೆ ಎಂದು ಹೇಳಲಾಗಿದೆ. ಆದರೆ ಆದಷ್ಟು ಬೇಗ ಡೇಟ್ ಘೋಷಣೆ ಮಾಡಲಿದ್ದಾರೆ ಎಂಬ ಮಾತು ಕೂಡ ಕೇಳಿಬರುತ್ತಿದೆ.ರಣಬೀರ್ ಕಪೂರ್ ತಾಯಿ ನೀತು ಕಪೂರ್ ಮಾತನಾಡಿ, "ಯಾವಾಗ ಮದುವೆ ಆಗತ್ತೆ ಅಂತ ಗೊತ್ತಿಲ್ಲ, ಆದಷ್ಟು ಬೇಗ ಮದುವೆ ಆಗಲಿ" ಎಂದಿದ್ದಾರೆ.
ಮದುವೆಯ ಸಿದ್ಧತೆಗಳು ಆರಂಭಗೊಂಡಿದ್ದು, ಮದುವೆ ದಿನ ಆಲಿಯಾ ಭಟ್ ( Alia Bhatt ), ಫ್ಯಾಷನ್ ಡಿಸೈನರ್ ಸವ್ಯಸಾಚಿ ಮುಖರ್ಜಿ ವಿನ್ಯಾಸಗೊಳಿಸಿದ ಡಿಸೈನರ್ ಲೆಹೆಂಗಾದಲ್ಲಿ ಮಿಂಚಲಿದ್ದಾರೆ. ಸಂಗೀತ್ ಮತ್ತು ಮೆಹೆಂದಿ ಕಾರ್ಯಕ್ರಮಗಳಿಗೆ ಅವರು ಮನೀಷ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ಡಿಸೈನರ್ ವೇರ್ಗಳಲ್ಲಿ ಕಂಗೊಳಿಸಲಿದ್ದಾರೆ.
ನಟ ರಣಬೀರ್ ಕಪೂರ್ ( Randir Kapoor ) ಬ್ಯಾಚುಲರ್ ಪಾರ್ಟಿಯ ಸಿದ್ಧತೆಯಲ್ಲಿದ್ದು, ಅದರಲ್ಲಿ ಅವರ ಆತ್ಮೀಯ ಗೆಳೆಯರಾದ ಅರ್ಜುನ್ ಕಪೂರ್, ಆದಿತ್ಯ ರಾಯ್ ಕಪೂರ್, ಅಯಾನ್ ಮುಖರ್ಜಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ.
‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿರುವ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಈ ಮೊದಲು ಈ ಸಿನಿಮಾ ಬಿಡುಗಡೆಯಾದ ಮೇಲೆ ಅಂದರೆ ಸೆಪ್ಟೆಂಬರ್ನಲ್ಲಿ ಮದುವೆಯಾಗುವುದಾಗಿ ಹೇಳಿಕೊಂಡಿದ್ದರು. ಆದರೆ ಆಲಿಯಾ ಭಟ್ ಅವರ ಅಜ್ಜ ಅಂದರೆ ತಾಯಿಯ ತಂದೆಯ ಆರೋಗ್ಯ ತೀರಾ ಹದಗೆಟ್ಟಿದ್ದು, ಅವರು ತಮ್ಮ ಮೊಮ್ಮಗಳ ಮದುವೆ ನೋಡುವ ಇಚ್ಛೆ ವ್ಯಕ್ತಪಡಿಸಿದ ಕಾರಣ ಮದುವೆ ಬೇಗ ನಡೆಯುತ್ತಿದೆಯಂತೆ. ಮದುವೆಯ ನಂತರ ರಣಬೀರ್ ಮತ್ತು ಆಲಿಯಾ ಸ್ವಿಟ್ಜರ್ಲೆಂಡ್ಗೆ ಹನಿಮೂನ್ ಹೋಗಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಆಲಿಯಾ ಭಟ್, ರಣವೀರ್ ಸಿಂಗ್ ಕೂಡ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸುತ್ತಿದ್ದಾರೆ.
Bollywood Actor Ranbir Kapoor Alia Bhatt Wedding Date Postponed.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm