ಬ್ರೇಕಿಂಗ್ ನ್ಯೂಸ್
20-04-22 02:22 pm Source: Vijayakarnataka ಸಿನಿಮಾ
ಲವಲವಿಕೆ ಸುದ್ದಿಲೋಕ
ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಾದ ‘ಆರ್ಆರ್ಆರ್’ (RRR) ಮತ್ತು ‘ಕೆಜಿಎಫ್ ಚಾಪ್ಟರ್- 2’ (KGF Chapter 2) ಯಶಸ್ಸು, ಬಹುಭಾಷೆಯಲ್ಲಿ ತಯಾರಾಗುತ್ತಿರುವ ಕೆಲ ಸಿನಿಮಾಗಳ ಜವಾಬ್ದಾರಿ ಹೆಚ್ಚಿಸಿದೆ. ಇದಕ್ಕೆ ಪೂರಕವಾಗಿ ಹಲವು ತಂಡಗಳು ಸಿದ್ಧತೆ ಮಾಡಿಕೊಳ್ಳಲಾರಂಭಿಸಿವೆ. ನಿರ್ದೇಶಕ ಆರ್. ಚಂದ್ರು ಸಹ ತಮ್ಮ‘ಕಬ್ಜ’ (Kabza Movie) ಸಿನಿಮಾವನ್ನು ಏಳು ಭಾಷೆಯಲ್ಲಿ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಇದರ ಮೇಕಿಂಗ್ನಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
‘ಕಬ್ಜ’ ಸಿನಿಮಾವನ್ನು ದಸರಾ ಹಬ್ಬದ ಸಮಯದಲ್ಲಿ ಬಿಡುಗಡೆ ಮಾಡಲು ಚಂದ್ರು ಪ್ಲಾನ್ ಮಾಡಿಕೊಂಡಿದ್ದಾರೆ. ಇದರ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಲಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ.
‘ಆರ್ಆರ್ಆರ್ ಮತ್ತು ಕೆಜಿಎಫ್ ಚಾಪ್ಟರ್- 2 ಸಿನಿಮಾಗಳ ಯಶಸ್ಸು ನಮ್ಮಂತಹ ಫಿಲಂ ಮೇಕರ್ಸ್ಗೆ ಕೊಂಚ ಒತ್ತಡ ಮತ್ತು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿದೆ. ನಾನು ಬಜೆಟ್ ವಿಚಾರದಲ್ಲಿ ಮತ್ತು ಸಿನಿಮಾದ ಕ್ಯಾನ್ವಾಸ್ ವಿಚಾರದಲ್ಲಿ ಯಾವುದೇ ರೀತಿಯಲ್ಲಿಯೂ ಕಾಂಪ್ರಮೈಸ್ ಮಾಡಿಕೊಳ್ಳುವುದಿಲ್ಲ. ಸ್ಕ್ರಿಪ್ಟ್ ವಿಚಾರದಲ್ಲಿ ಮತ್ತೆ ಮತ್ತೆ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ಹೊಸ ಫೈಟ್ಗಳನ್ನು ಮತ್ತು ಸೀನ್ಗಳನ್ನು ಸಿನಿಮಾದಲ್ಲಿ ಪರಿಚಯಿಸುತ್ತಿದ್ದೇನೆ’ ಎನ್ನುತ್ತಾರೆ ಚಂದ್ರು.


‘ಈ ಚಿತ್ರದಲ್ಲಿಉಪೇಂದ್ರ ನಾಯಕರಾಗಿ ನಟಿಸುತ್ತಿದ್ದಾರೆ. ಅವರ ಜತೆ ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿದ್ದಾರೆ. ಇವರೆಲ್ಲರ ಜತೆಗೆ ಬಾಲಿವುಡ್ ನಟರಾದ ಡ್ಯಾನಿಶ್ ಅಖ್ತರ್ ಸೈಫಿ, ನವಾಬ್ ಶಾ, ಕಬೀರ್ ಸಿಂಗ್ ದುಹಾನ್, ದಕ್ಷಿಣ ಭಾರತದ ಖ್ಯಾತ ನಟ ಮುರಳಿಕೃಷ್ಣ ಹೀಗೆ ಹಲವರು ನಟಿಸುತ್ತಿದ್ದಾರೆ’ ಎನ್ನುವುದು ನಿರ್ದೇಶಕ ಚಂದ್ರು ಮಾತು.
![]()
‘ಈ ಚಿತ್ರದಲ್ಲಿ ಶ್ರೀಯಾ ಸರಣ್ ನಟಿಸುತ್ತಿದ್ದು, ಅವರ ಕಾಸ್ಟ್ಯೂಮ್ ಚಿತ್ರದ ಪ್ರಮುಖ ಹೈಲೈಟ್. 3.5 ಲಕ್ಷ ಮೌಲ್ಯದ ಸೀರೆ ಮತ್ತು 1 ಕೋಟಿ ರೂಪಾಯಿಯ ಡೈಮಂಡ್ ಆಭರಣಗಳನ್ನು ಸಿನಿಮಾದಲ್ಲಿ ಅವರಿಗೆ ಬಳಸಿದ್ದೇವೆ. ಈ ಚಿತ್ರವನ್ನು ಎಂಟಿಬಿ ನಾಗರಾಜ್ ಅರ್ಪಿಸುತ್ತಿದ್ದು, ನಾನು ನಿರ್ಮಾಣದ ಹೊಣೆ ಹೊತ್ತಿದ್ದೇನೆ’ ಎನ್ನುತ್ತಾರೆ ನಿರ್ದೇಶಕ ಆರ್.ಚಂದ್ರು.
'ನಾನು ಕಬ್ಜ ಸಿನಿಮಾ ವಿಚಾರದಲ್ಲಿ ಯಾವುದೇ ರೀತಿಯ ಕಾಂಪ್ರಮೈಸ್ ಆಗುತ್ತಿಲ್ಲ. ಇದಕ್ಕಾಗಿ ದೊಡ್ಡ ಮಟ್ಟದಲ್ಲಿ ತಯಾರಿ ನಡೆಸಿದ್ದೇನೆ' ಎಂದು ನಿರ್ದೇಶಕ ಆರ್.ಚಂದ್ರು ಹೇಳಿದ್ದಾರೆ.
ಪರಭಾಷೆ ನಟರು
ಟಾಲಿವುಡ್ನ ಎಲ್ಲಾ ಸ್ಟಾರ್ಗಳ ಸಿನಿಮಾಗಳಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುವ ಮುರಳಿ ಶರ್ಮ ಮತ್ತು ಅಲ್ಲಿನ ಖ್ಯಾತ ಸಂಭಾಷಣೆಕಾರ, ನಟ ಪೋಸಾನಿ ಕೃಷ್ಣ ಮುರಳಿ ಅವರೂ ಕೂಡ ‘ಕಬ್ಜ’ ಚಿತ್ರದಲ್ಲಿ ಪ್ರಧಾನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
Pan India Movie Kabza To Release In 7 Languages Says Director R Chandru.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm