ಬ್ರೇಕಿಂಗ್ ನ್ಯೂಸ್
20-04-22 02:22 pm Source: Vijayakarnataka ಸಿನಿಮಾ
ಲವಲವಿಕೆ ಸುದ್ದಿಲೋಕ
ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಾದ ‘ಆರ್ಆರ್ಆರ್’ (RRR) ಮತ್ತು ‘ಕೆಜಿಎಫ್ ಚಾಪ್ಟರ್- 2’ (KGF Chapter 2) ಯಶಸ್ಸು, ಬಹುಭಾಷೆಯಲ್ಲಿ ತಯಾರಾಗುತ್ತಿರುವ ಕೆಲ ಸಿನಿಮಾಗಳ ಜವಾಬ್ದಾರಿ ಹೆಚ್ಚಿಸಿದೆ. ಇದಕ್ಕೆ ಪೂರಕವಾಗಿ ಹಲವು ತಂಡಗಳು ಸಿದ್ಧತೆ ಮಾಡಿಕೊಳ್ಳಲಾರಂಭಿಸಿವೆ. ನಿರ್ದೇಶಕ ಆರ್. ಚಂದ್ರು ಸಹ ತಮ್ಮ‘ಕಬ್ಜ’ (Kabza Movie) ಸಿನಿಮಾವನ್ನು ಏಳು ಭಾಷೆಯಲ್ಲಿ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಇದರ ಮೇಕಿಂಗ್ನಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
‘ಕಬ್ಜ’ ಸಿನಿಮಾವನ್ನು ದಸರಾ ಹಬ್ಬದ ಸಮಯದಲ್ಲಿ ಬಿಡುಗಡೆ ಮಾಡಲು ಚಂದ್ರು ಪ್ಲಾನ್ ಮಾಡಿಕೊಂಡಿದ್ದಾರೆ. ಇದರ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಲಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ.
‘ಆರ್ಆರ್ಆರ್ ಮತ್ತು ಕೆಜಿಎಫ್ ಚಾಪ್ಟರ್- 2 ಸಿನಿಮಾಗಳ ಯಶಸ್ಸು ನಮ್ಮಂತಹ ಫಿಲಂ ಮೇಕರ್ಸ್ಗೆ ಕೊಂಚ ಒತ್ತಡ ಮತ್ತು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿದೆ. ನಾನು ಬಜೆಟ್ ವಿಚಾರದಲ್ಲಿ ಮತ್ತು ಸಿನಿಮಾದ ಕ್ಯಾನ್ವಾಸ್ ವಿಚಾರದಲ್ಲಿ ಯಾವುದೇ ರೀತಿಯಲ್ಲಿಯೂ ಕಾಂಪ್ರಮೈಸ್ ಮಾಡಿಕೊಳ್ಳುವುದಿಲ್ಲ. ಸ್ಕ್ರಿಪ್ಟ್ ವಿಚಾರದಲ್ಲಿ ಮತ್ತೆ ಮತ್ತೆ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ಹೊಸ ಫೈಟ್ಗಳನ್ನು ಮತ್ತು ಸೀನ್ಗಳನ್ನು ಸಿನಿಮಾದಲ್ಲಿ ಪರಿಚಯಿಸುತ್ತಿದ್ದೇನೆ’ ಎನ್ನುತ್ತಾರೆ ಚಂದ್ರು.


‘ಈ ಚಿತ್ರದಲ್ಲಿಉಪೇಂದ್ರ ನಾಯಕರಾಗಿ ನಟಿಸುತ್ತಿದ್ದಾರೆ. ಅವರ ಜತೆ ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿದ್ದಾರೆ. ಇವರೆಲ್ಲರ ಜತೆಗೆ ಬಾಲಿವುಡ್ ನಟರಾದ ಡ್ಯಾನಿಶ್ ಅಖ್ತರ್ ಸೈಫಿ, ನವಾಬ್ ಶಾ, ಕಬೀರ್ ಸಿಂಗ್ ದುಹಾನ್, ದಕ್ಷಿಣ ಭಾರತದ ಖ್ಯಾತ ನಟ ಮುರಳಿಕೃಷ್ಣ ಹೀಗೆ ಹಲವರು ನಟಿಸುತ್ತಿದ್ದಾರೆ’ ಎನ್ನುವುದು ನಿರ್ದೇಶಕ ಚಂದ್ರು ಮಾತು.
![]()
‘ಈ ಚಿತ್ರದಲ್ಲಿ ಶ್ರೀಯಾ ಸರಣ್ ನಟಿಸುತ್ತಿದ್ದು, ಅವರ ಕಾಸ್ಟ್ಯೂಮ್ ಚಿತ್ರದ ಪ್ರಮುಖ ಹೈಲೈಟ್. 3.5 ಲಕ್ಷ ಮೌಲ್ಯದ ಸೀರೆ ಮತ್ತು 1 ಕೋಟಿ ರೂಪಾಯಿಯ ಡೈಮಂಡ್ ಆಭರಣಗಳನ್ನು ಸಿನಿಮಾದಲ್ಲಿ ಅವರಿಗೆ ಬಳಸಿದ್ದೇವೆ. ಈ ಚಿತ್ರವನ್ನು ಎಂಟಿಬಿ ನಾಗರಾಜ್ ಅರ್ಪಿಸುತ್ತಿದ್ದು, ನಾನು ನಿರ್ಮಾಣದ ಹೊಣೆ ಹೊತ್ತಿದ್ದೇನೆ’ ಎನ್ನುತ್ತಾರೆ ನಿರ್ದೇಶಕ ಆರ್.ಚಂದ್ರು.
'ನಾನು ಕಬ್ಜ ಸಿನಿಮಾ ವಿಚಾರದಲ್ಲಿ ಯಾವುದೇ ರೀತಿಯ ಕಾಂಪ್ರಮೈಸ್ ಆಗುತ್ತಿಲ್ಲ. ಇದಕ್ಕಾಗಿ ದೊಡ್ಡ ಮಟ್ಟದಲ್ಲಿ ತಯಾರಿ ನಡೆಸಿದ್ದೇನೆ' ಎಂದು ನಿರ್ದೇಶಕ ಆರ್.ಚಂದ್ರು ಹೇಳಿದ್ದಾರೆ.
ಪರಭಾಷೆ ನಟರು
ಟಾಲಿವುಡ್ನ ಎಲ್ಲಾ ಸ್ಟಾರ್ಗಳ ಸಿನಿಮಾಗಳಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುವ ಮುರಳಿ ಶರ್ಮ ಮತ್ತು ಅಲ್ಲಿನ ಖ್ಯಾತ ಸಂಭಾಷಣೆಕಾರ, ನಟ ಪೋಸಾನಿ ಕೃಷ್ಣ ಮುರಳಿ ಅವರೂ ಕೂಡ ‘ಕಬ್ಜ’ ಚಿತ್ರದಲ್ಲಿ ಪ್ರಧಾನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
Pan India Movie Kabza To Release In 7 Languages Says Director R Chandru.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am