ಬ್ರೇಕಿಂಗ್ ನ್ಯೂಸ್
15-07-22 07:27 pm Source: Vijayakarnataka ಡಾಕ್ಟರ್ಸ್ ನೋಟ್
ಉಪ್ಪಿಗಿಂತ ಬೇರೆ ರುಚಿಯಿಲ್ಲ ಎನ್ನುತ್ತಾರೆ. ಆದರೆ ಉಪ್ಪಿನ ಸೇವನೆಯು ಅಧಿಕವಾದರೆ ಅಕಾಲಿಕ ಸಾವನ್ನಪ್ಪಬೇಕಾಗುತ್ತದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಕೆಲವರು ತಾವು ಸೇವಿಸುವ ಆಹಾರದಲ್ಲಿ ಪ್ರತಿನಿತ್ಯ ಉಪ್ಪು ಅಧಿಕ ಹಾಕುತ್ತಾರೆ. ನೀವೂ ಕೂಡಾ ಅಧಿಕ ಪ್ರಮಾಣದಲ್ಲಿ ಉಪ್ಪಿನ ಆಹಾರ ಸೇವಿಸುತ್ತಿದ್ದೀರೆಂದಾದರೆ ತಕ್ಷಣ ನಿಮ್ಮ ಅಭ್ಯಾಸವನ್ನು ಬದಲಾಯಿಸಬೇಕು.
ಅಧಿಕ ಉಪ್ಪಿನ ಸೇವನೆಯಿಂದ ಸಾವು

ಉಪ್ಪಿನ ಅಧಿಕ ಸೇವನೆಯು ಸಾವಿಗೆ ಕಾರಣವಾಗುತ್ತದೆ. ತಮ್ಮ ಆಹಾರದಲ್ಲಿ ಯಾವಾಗಲೂ ಅಧಿಕ ಉಪ್ಪನ್ನು ಸೇರಿಸುವ ಜನರು ಕಡಿಮೆ ಉಪ್ಪನ್ನು ಸೇವಿಸುವ ಜನರಿಗೆ ಹೋಲಿಸಿದರೆ ಅಕಾಲಿಕವಾಗಿ ಸಾಯುವ ಅಪಾಯವು ಶೇಕಡಾ 28 ರಷ್ಟು ಹೆಚ್ಚಾಗುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.
40 ರಿಂದ 69 ವರ್ಷ ವಯಸ್ಸಿನವರು
![]()
ಯುರೋಪಿಯನ್ ಹಾರ್ಟ್ ಜರ್ನಲ್ನಲ್ಲಿ ಪ್ರಕಟವಾದ ಹೊಸ ಅಧ್ಯಯನದ ಪ್ರಕಾರ, ಸಾಮಾನ್ಯ ಜನಸಂಖ್ಯೆಯಲ್ಲಿ 40 ರಿಂದ 69 ವರ್ಷ ವಯಸ್ಸಿನ ಪ್ರತಿ ನೂರರಲ್ಲಿ ಮೂರು ಜನರು ಅಕಾಲಿಕವಾಗಿ ಸಾಯುತ್ತಾರೆ. ಅದರಲ್ಲಿ ಒಬ್ಬರು ಆಹಾರಕ್ಕೆ ಅಧಿಕ ಉಪ್ಪು ಸೇರಿಸುವುದರಿಂದ ಅಕಾಲಿಕವಾಗಿ ಸಾಯುತ್ತಾರೆ ಎಂದು ಕಂಡುಹಿಡಿದಿದೆ.
ಆಯಸ್ಸು ಕಡಿಮೆಯಾಗುತ್ತದೆ

ಊಟಕ್ಕೆ ಹೆಚ್ಚುವರಿ ಉಪ್ಪನ್ನು ಸೇರಿಸುವುದರಿಂದ 50 ವರ್ಷ ವಯಸ್ಸಿನ ಪುರುಷರು ಮತ್ತು ಮಹಿಳೆಯರಿಗೆ ಕ್ರಮವಾಗಿ ಎರಡು ವರ್ಷಗಳ ಮತ್ತು 1.5 ವರ್ಷಗಳ ಜೀವಿತಾವಧಿ ಕಡಿಮೆಯಾಗುತ್ತವೆ ಎಂದು ಸಂಶೋಧನೆಗಳು ಬಹಿರಂಗಪಡಿಸಿವೆ. ಹಾಗಾಗಿ ಜನರು ತಮ್ಮ ಆಹಾರದಲ್ಲಿ ಹೆಚ್ಚು ಮಸಾಲೆ ಹಾಕುವುದನ್ನು ತಪ್ಪಿಸಲು ಶಿಫಾರಾಸ್ಸು ಮಾಡಲಾಗುವುದು.
ಸೇವಿಸಬೇಕಾದ ಉಪ್ಪಿನ ಪ್ರಮಾಣ ಎಷ್ಟು?

ಹೆಚ್ಚಿನ ಜನರು ದಿನಕ್ಕೆ ಸರಾಸರಿ 9 ರಿಂದ 12 ಗ್ರಾಂ ಉಪ್ಪನ್ನು ಸೇವಿಸುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಇದು ಶಿಫಾರಸು ಮಾಡಲಾದ ಗರಿಷ್ಠ ಸೇವನೆಯ ಎರಡು ಪಟ್ಟು ಹೆಚ್ಚು.
ರಕ್ತದೊತ್ತಡದ ಮಟ್ಟಗಳು ಮತ್ತು ಪಾರ್ಶ್ವವಾಯು, ಪರಿಧಮನಿಯ ಹೃದಯಾಘಾತ ಸೇರಿದಂತೆ ಹೃದಯರಕ್ತನಾಳದ ಕಾಯಿಲೆಯ ಅಪಾಯಗಳನ್ನು ಕಡಿಮೆ ಮಾಡಲು ವಯಸ್ಕರು ದಿನಕ್ಕೆ 5 ಗ್ರಾಂಗಿಂತ ಕಡಿಮೆ ಉಪ್ಪನ್ನು ಸೇವಿಸಬೇಕೆಂದು WHO ಶಿಫಾರಸು ಮಾಡುತ್ತದೆ.
ಸಾವಿನ ಸಂಖ್ಯೆ ಕಡಿಮೆ ಮಾಡಬಹುದು
![]()
ಜಾಗತಿಕ ಉಪ್ಪಿನ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಅಂದರೆ ವಿಶ್ವ ಆರೋಗ್ಯ ಸಂಸ್ಥೆ ಶಿಫಾರಾಸು ಮಾಡಿದಂತೆ ಐದು ಗ್ರಾಂಗೆ ಇಳಿಸಿದರೆ ಪ್ರತಿ ವರ್ಷ ಸುಮಾರು 2.5 ಮಿಲಿಯನ್ ಸಾವುಗಳನ್ನು ತಡೆಯಬಹುದು ಎನ್ನುತ್ತದೆ ಸಂಶೋಧನೆ.
Eating More Salty Food Daily Can Lead To Premature Death.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm