ಬ್ರೇಕಿಂಗ್ ನ್ಯೂಸ್
17-09-22 09:09 pm Source: Vijayakarnataka ಡಾಕ್ಟರ್ಸ್ ನೋಟ್
ಮೊಳಕೆ ಭರಿಸಿದ ಕಾಳುಗಳು ಆರೋಗ್ಯಕ್ಕೆ ವರದಾನವಿದ್ದಂತೆ. ಅವುಗಳ ಸಲಾಡ್ ಮಾಡಿ ಸವಿದರಂತೂ ಮತ್ತೆ ಮತ್ತೆ ತಿನ್ನಬೇಕೆನ್ನುವ ಭಾವ.ಕಡಲೆ ಕಾಳು, ಹೆಸರು ಕಾಳುಗಳನ್ನು 8 ರಿಂದ 9 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಟ್ಟರೆ ಸಾಕು ಬಿಳಿ ಬಣ್ಣದ ಮೊಳಕೆಯೊಡೆಯಲು ಆರಂಭಿಸುತ್ತದೆ. ಇದು ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರಿಗೂ ಉತ್ತಮ ಆಹಾರವಾಗಲಿದೆ. ಅಲ್ಲದೆ ಪೋಷಕಾಂಶಯುಕ್ತ ಆಹಾರವೂ ಆಗಲಿದೆ.
ಕಡಲೆ ಕಾಳು ಮತ್ತು ಹೆಸರುಕಾಳನ್ನು ಮೊಳಕೆ ಭರಿಸಿ ಅದರ ಸಲಾಡ್ ತಯಾರಿಸಿ ಸೇವನೆ ಮಾಡಿದರೆ ಎಷ್ಟು ಒಳ್ಳೆಯದು ಎನ್ನುವುದು ಗೊತ್ತಾ? ಇಲ್ಲಿದೆ ನೋಡಿ ಆರೋಗ್ಯಕ್ಕೆ ಈ ಎರಡೂ ಮೊಳಕೆ ಭರಿಸಿದ ಕಾಳುಗಳ ಭರಪೂರ ಉಪಯೋಗಗಳು.
ಕಣ್ಣಿನ ಆರೋಗ್ಯ

ವಿಟಮಿನ್ ಎ ದೃಷ್ಟಿ ಆರೋಗ್ಯದ ಸುಧಾರಣೆಗೆ ಸಂಬಂಧಿಸಿದೆ. ವಿಟಮಿನ್ ಎ ಇರುವ ಕಾರಣ, ಮೊಳಕೆ ಭರಿಸಿದ ಕಾಳುಗಳು ಕಣ್ಣಿನ ದೃಷ್ಟಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಎ ಇರುವುದರಿಂದ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಹೀಗಾಗಿ ಮೊಳಕೆ ಭರಿಸಿದ ಕಾಳುಗಳನ್ನು ದಿನಾ ಬಳಸುವುದು ಒಳ್ಳೆಯದು.
ಕೂದಲಿನ ಆರೋಗ್ಯಕ್ಕೆ

ಮೊಳಕೆಭರಿಸಿದ ಕಾಳುಗಳಲ್ಲಿ ವಿಟಮಿನ್ ಎ ಇರುವಿಕೆಯು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಅಲ್ಲದೆ ನೆತ್ತಿಯ ಮೇಲೆ ದಪ್ಪ ಮತ್ತು ಉದ್ದವಾದ ಕೂದಲು ಬೆಳೆಯುವಂತೆ ಮಾಡುತ್ತದೆ. ವಿಟಮಿನ್ ಎ ಕೊರತೆಯು ಕೂದಲು ತೆಳುವಾಗುವುದು, ಒಣ ನೆತ್ತಿ ಮತ್ತು ಅತಿಯಾದ ಕೂದಲು ಉದುರುವಿಕೆಗೆ ಕಾರಣವಾಗಬಹುದು. ಹೀಗಾಗಿ ಮೊಳಕೆ ಭರಿಸಿದ ಕಾಳುಗಳನ್ನು ಸೇವನೆ ಮಾಡುತ್ತಿರಿ.
ಡ್ಯಾಂಡ್ರಫ್ ನಿವಾರಿಸುತ್ತದೆ
![]()
ಕಾಳುಗಳ ಮೊಳಕೆಯಲ್ಲಿರುವ ಸೆಲೆನಿಯಮ್ ಅಂಶ ಕೂದಲಿನ ನೆತ್ತಿಯ ಉಂಟಾಗುವ ತಲೆಹೊಟ್ಟು ಮತ್ತು ಇತರ ಸಮಸ್ಯೆಗಳನ್ನು ಉಂಟುಮಾಡುವ ಶಿಲೀಂಧ್ರಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಈ ಮೂಲಕ ಇದು ತಲೆಹೊಟ್ಟು ನಿವಾರಿಸುತ್ತದೆ ಮತ್ತು ನೆತ್ತಿಯು ನೈಸರ್ಗಿಕ ಎಣ್ಣೆಯನ್ನು ಉತ್ಪಾದಿಸಲು ಅನುವು ಮಾಡಿಕೊಡುತ್ತದೆ, ಇದು ಆರೋಗ್ಯಕರ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಒಣ ಕೂದಲನ್ನು ನಿವಾರಿಸಿ ಮೃದು ಕೂದಲು ಬೆಳೆಯುವಂತೆ ಮಾಡುತ್ತದೆ.
ಹೃದಯದ ಆರೋಗ್ಯಕ್ಕೆ

ಮೊಳಕೆಭರಿಸಿದ ಕಾಳುಗಳು ಒಮೆಗಾ -3 ಕೊಬ್ಬಿನಾಮ್ಲಗಳನ್ನು ಹೊಂದಿದ್ದು ಅದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ರಕ್ತನಾಳಗಳು ಮತ್ತು ಅಪಧಮನಿಗಳಲ್ಲಿ ಹಾನಿಕಾರಕ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ.
ಒಮೆಗಾ -3 ಕೊಬ್ಬಿನಾಮ್ಲಗಳು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು ಅದು ಹೃದಯರಕ್ತನಾಳದ ವ್ಯವಸ್ಥೆಯ ಮೇಲಿನ ಅತಿಯಾದ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪೊಟ್ಯಾಸಿಯಮ್ ಅಂಶ ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಯಾವುದೇ ಹೃದಯರಕ್ತನಾಳದ ಸಮಸ್ಯೆಯ ಅಪಾಯವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ. ಹೀಗಾಗಿ ದಿನನಿತ್ಯ ಒಂದು ಹೊತ್ತಾದರೂ ಮೊಳಕೆ ಭರಿಸಿದ ಕಾಳುಗಳ ಸಲಾಡ್ ಸೇವನೆ ಮಾಡಿ.
ಮಧುಮೇಹ ಇರುವವರಿಗೆ

ಸಕ್ಕರೆ ಕಾಯಿಲೆಗೆ ಇರುವವರಿಗೆ ಈ ಸಲಾಡ್ ಹೇಳಿ ಮಾಡಿಸಿದ ಆಹಾರವಾಗಿದೆ. ಪೋಷಕಾಂಶದ ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಿ ಮಧುಮೇಹವನ್ನು ಕಂಟ್ರೋಲ್ನಲ್ಲಿಡುತ್ತದೆ.
ಹೀಗಾಗಿ ಪ್ರತಿನಿತ್ಯ ನಿಮ್ಮ ಡಯೆಟ್ನಲ್ಲಿ ಕಡಲೆಕಾಳು ಮತ್ತು ಮೊಳಕೆಭರಿಸಿದ ಕಾಳುಗಳನ್ನು ಸೇರಿಸಿಕೊಳ್ಳಿ. ಇದರಿಂದ ದೇಹವೂ ಆರೋಗ್ಯವಾಗಿರುತ್ತದೆ.
Know The Health Benefits Of Soaked Chickpeas And Mung Dal.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm