ಬ್ರೇಕಿಂಗ್ ನ್ಯೂಸ್
25-10-22 09:00 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ಯಾವಾಗ ಆರೋಗ್ಯ ಹದಗೆಡುತ್ತದೆ ಎಂದು ಹೇಳುವುದು ಕಷ್ಟ. ಅದರಲ್ಲೂ ಈಗ ಬಿಸಿಲು ಮತ್ತು ಮಳೆ ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ. ಈ ಸಂದರ್ಭದಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಆರೋಗ್ಯ ತೊಂದರೆ ತಪ್ಪಿದ್ದಲ್ಲ. ಈ ಸಂದರ್ಭದಲ್ಲಿ ಶೀತ ನೆಗಡಿ ಉಂಟಾಗುತ್ತದೆ. ಇದರ ಜೊತೆ ಗಂಟಲು ನೋವು ಸಹ ಬರುತ್ತದೆ...
ಗಂಟಲು ನೋವಿಗೆ ಅರಿಶಿನ

ಶೀತ, ಕೆಮ್ಮು, ನೆಗಡಿ, ಗಂಟಲು ನೋವಿಗೆ ಅರಿಶಿನ

ಅರಿಶಿನವನ್ನು ನಾವು ನಮಗೆ ಶೀತ, ಕೆಮ್ಮು, ನೆಗಡಿ, ಗಂಟಲು ನೋವು ಬಂದಾಗ ಉಪಯೋಗಿಸುತ್ತೇವೆ. ಅಷ್ಟೇ ಅಲ್ಲದೆ ಗಾಯವನ್ನು ವಾಸಿ ಮಾಡಲು, ಮಧುಮೇಹ ಸಮಸ್ಯೆಯನ್ನು ನಿಯಂತ್ರಣ ಮಾಡಲು, ಮೈಕೈ ನೋವು, ಆರ್ಥ್ರೈಟಿಸ್, ರೋಗನಿರೋಧಕ ಶಕ್ತಿಯನ್ನು ಅಭಿವೃದ್ಧಿಪಡಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಇನ್ನಿತರ ತೊಂದರೆಗಳಿಗೆ ಪರಿಹಾರವಾಗಿ ಬಳಸಬಹುದಾಗಿದೆ ಎಂದು ಡಾ. ದೀಕ್ಷಾ ಭಾವ್ಸರ್ ಹೇಳಿದ್ದಾರೆ. ಗಂಟಲು ನೋವಿನ ಪರಿಹಾರಕ್ಕೆ ಅರಿಶಿನ ಎಂಬ ಗಿಡಮೂಲಿಕೆಯನ್ನು ಸುಲಭವಾಗಿ ಈ ರೀತಿ ಬಳಸಬಹುದು.
ಅರಿಶಿನದ ನೀರಿನಿಂದ ಬಾಯಿ ಮುಕ್ಕಳಿಸುವುದು
![]()
ಒಂದು ಲೋಟ ನೀರು ತೆಗೆದುಕೊಂಡು ಅದಕ್ಕೆ ಒಂದು ಟೇಬಲ್ ಚಮಚ ಅರಿಶಿನ ಪುಡಿಯನ್ನು ಸೇರಿಸಿ ಮೂರರಿಂದ ಐದು ನಿಮಿಷಗಳು ಚೆನ್ನಾಗಿ ಕುದಿಸಬೇಕು. ದಿನದಲ್ಲಿ ಮೂರು ಬಾರಿ ಈ ರೀತಿ ಮಾಡುವುದ ರಿಂದ ಗಂಟಲು ನೋವು ಕ್ರಮೇಣವಾಗಿ ಕಡಿಮೆಯಾಗುತ್ತದೆ.
ಅರಿಶಿನದ ಜೊತೆ ಕಾಳು ಮೆಣಸು

1 ಟೀಚಮಚ ಅರಿಶಿನ, ಒಂದು ಅಥವಾ ಎರಡು ಕುಟ್ಟಿ ಪುಡಿ ಮಾಡಿದ ಕಾಳು ಮೆಣಸು ಮತ್ತು ಒಂದು ಟೀ ಚಮಚ ಜೇನುತುಪ್ಪ ಎಲ್ಲವನ್ನು ಮಿಶ್ರಣ ಮಾಡಿ ಊಟಕ್ಕೆ ಒಂದು ಗಂಟೆ ಮುಂಚೆ ಅಥವಾ ನಂತರದಲ್ಲಿ ದಿನದಲ್ಲಿ ಎರಡರಿಂದ ಮೂರು ಬಾರಿ ಸೇವಿಸುವ ಅಭ್ಯಾಸವಿಟ್ಟುಕೊಳ್ಳಿ. ಇದು ಸಹ ಗಂಟಲು ನೋವಿಗೆ ಒಂದು ಒಳ್ಳೆಯ ಪರಿಹಾರ.
ಅರಿಶಿನ ಮಿಶ್ರಿತ ಹಾಲು

ರಾತ್ರಿ ಮಲಗುವ ಸಂದರ್ಭದಲ್ಲಿ ಈ ಪರಿಹಾರವನ್ನು ಮಾಡಿಕೊಳ್ಳಬಹುದು. ಪ್ರತಿದಿನ ಮಲಗುವಾಗ ನಿಮಗೆ ಒಂದು ವೇಳೆ ಹಸುವಿನ ಹಾಲು ಲಭ್ಯವಿದ್ದರೆ, ಅದನ್ನು ಒಂದು ಲೋಟ ತೆಗೆದುಕೊಂಡು ಅದಕ್ಕೆ ಒಂದು ಟೀ ಚಮಚ ಅರಿಸಿನ ಪುಡಿ ಸೇರಿಸಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಗಂಟಲು ನೋವು ಕಡಿಮೆಯಾಗುತ್ತದೆ ಎಂದು ವೈದ್ಯರಾದ ಡಾ. ದೀಕ್ಷಾ ಭಾವ್ಸರ್ ಹೇಳುತ್ತಾರೆ.
As Per The Health Experts Turmeric Has Broad Benefits For Your Throat Pain.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
ಮೊಬೈಲ್ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಜಗಳ ; ಕುಡಿ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am