ಬ್ರೇಕಿಂಗ್ ನ್ಯೂಸ್
25-10-22 09:00 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ಯಾವಾಗ ಆರೋಗ್ಯ ಹದಗೆಡುತ್ತದೆ ಎಂದು ಹೇಳುವುದು ಕಷ್ಟ. ಅದರಲ್ಲೂ ಈಗ ಬಿಸಿಲು ಮತ್ತು ಮಳೆ ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ. ಈ ಸಂದರ್ಭದಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಆರೋಗ್ಯ ತೊಂದರೆ ತಪ್ಪಿದ್ದಲ್ಲ. ಈ ಸಂದರ್ಭದಲ್ಲಿ ಶೀತ ನೆಗಡಿ ಉಂಟಾಗುತ್ತದೆ. ಇದರ ಜೊತೆ ಗಂಟಲು ನೋವು ಸಹ ಬರುತ್ತದೆ...
ಗಂಟಲು ನೋವಿಗೆ ಅರಿಶಿನ

ಶೀತ, ಕೆಮ್ಮು, ನೆಗಡಿ, ಗಂಟಲು ನೋವಿಗೆ ಅರಿಶಿನ

ಅರಿಶಿನವನ್ನು ನಾವು ನಮಗೆ ಶೀತ, ಕೆಮ್ಮು, ನೆಗಡಿ, ಗಂಟಲು ನೋವು ಬಂದಾಗ ಉಪಯೋಗಿಸುತ್ತೇವೆ. ಅಷ್ಟೇ ಅಲ್ಲದೆ ಗಾಯವನ್ನು ವಾಸಿ ಮಾಡಲು, ಮಧುಮೇಹ ಸಮಸ್ಯೆಯನ್ನು ನಿಯಂತ್ರಣ ಮಾಡಲು, ಮೈಕೈ ನೋವು, ಆರ್ಥ್ರೈಟಿಸ್, ರೋಗನಿರೋಧಕ ಶಕ್ತಿಯನ್ನು ಅಭಿವೃದ್ಧಿಪಡಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಇನ್ನಿತರ ತೊಂದರೆಗಳಿಗೆ ಪರಿಹಾರವಾಗಿ ಬಳಸಬಹುದಾಗಿದೆ ಎಂದು ಡಾ. ದೀಕ್ಷಾ ಭಾವ್ಸರ್ ಹೇಳಿದ್ದಾರೆ. ಗಂಟಲು ನೋವಿನ ಪರಿಹಾರಕ್ಕೆ ಅರಿಶಿನ ಎಂಬ ಗಿಡಮೂಲಿಕೆಯನ್ನು ಸುಲಭವಾಗಿ ಈ ರೀತಿ ಬಳಸಬಹುದು.
ಅರಿಶಿನದ ನೀರಿನಿಂದ ಬಾಯಿ ಮುಕ್ಕಳಿಸುವುದು
![]()
ಒಂದು ಲೋಟ ನೀರು ತೆಗೆದುಕೊಂಡು ಅದಕ್ಕೆ ಒಂದು ಟೇಬಲ್ ಚಮಚ ಅರಿಶಿನ ಪುಡಿಯನ್ನು ಸೇರಿಸಿ ಮೂರರಿಂದ ಐದು ನಿಮಿಷಗಳು ಚೆನ್ನಾಗಿ ಕುದಿಸಬೇಕು. ದಿನದಲ್ಲಿ ಮೂರು ಬಾರಿ ಈ ರೀತಿ ಮಾಡುವುದ ರಿಂದ ಗಂಟಲು ನೋವು ಕ್ರಮೇಣವಾಗಿ ಕಡಿಮೆಯಾಗುತ್ತದೆ.
ಅರಿಶಿನದ ಜೊತೆ ಕಾಳು ಮೆಣಸು

1 ಟೀಚಮಚ ಅರಿಶಿನ, ಒಂದು ಅಥವಾ ಎರಡು ಕುಟ್ಟಿ ಪುಡಿ ಮಾಡಿದ ಕಾಳು ಮೆಣಸು ಮತ್ತು ಒಂದು ಟೀ ಚಮಚ ಜೇನುತುಪ್ಪ ಎಲ್ಲವನ್ನು ಮಿಶ್ರಣ ಮಾಡಿ ಊಟಕ್ಕೆ ಒಂದು ಗಂಟೆ ಮುಂಚೆ ಅಥವಾ ನಂತರದಲ್ಲಿ ದಿನದಲ್ಲಿ ಎರಡರಿಂದ ಮೂರು ಬಾರಿ ಸೇವಿಸುವ ಅಭ್ಯಾಸವಿಟ್ಟುಕೊಳ್ಳಿ. ಇದು ಸಹ ಗಂಟಲು ನೋವಿಗೆ ಒಂದು ಒಳ್ಳೆಯ ಪರಿಹಾರ.
ಅರಿಶಿನ ಮಿಶ್ರಿತ ಹಾಲು

ರಾತ್ರಿ ಮಲಗುವ ಸಂದರ್ಭದಲ್ಲಿ ಈ ಪರಿಹಾರವನ್ನು ಮಾಡಿಕೊಳ್ಳಬಹುದು. ಪ್ರತಿದಿನ ಮಲಗುವಾಗ ನಿಮಗೆ ಒಂದು ವೇಳೆ ಹಸುವಿನ ಹಾಲು ಲಭ್ಯವಿದ್ದರೆ, ಅದನ್ನು ಒಂದು ಲೋಟ ತೆಗೆದುಕೊಂಡು ಅದಕ್ಕೆ ಒಂದು ಟೀ ಚಮಚ ಅರಿಸಿನ ಪುಡಿ ಸೇರಿಸಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಗಂಟಲು ನೋವು ಕಡಿಮೆಯಾಗುತ್ತದೆ ಎಂದು ವೈದ್ಯರಾದ ಡಾ. ದೀಕ್ಷಾ ಭಾವ್ಸರ್ ಹೇಳುತ್ತಾರೆ.
As Per The Health Experts Turmeric Has Broad Benefits For Your Throat Pain.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm