ಬ್ರೇಕಿಂಗ್ ನ್ಯೂಸ್
            
                        25-10-22 09:00 pm Source: Vijayakarnataka ಡಾಕ್ಟರ್ಸ್ ನೋಟ್
            ಮನುಷ್ಯನಿಗೆ ಯಾವಾಗ ಆರೋಗ್ಯ ಹದಗೆಡುತ್ತದೆ ಎಂದು ಹೇಳುವುದು ಕಷ್ಟ. ಅದರಲ್ಲೂ ಈಗ ಬಿಸಿಲು ಮತ್ತು ಮಳೆ ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ. ಈ ಸಂದರ್ಭದಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಆರೋಗ್ಯ ತೊಂದರೆ ತಪ್ಪಿದ್ದಲ್ಲ. ಈ ಸಂದರ್ಭದಲ್ಲಿ ಶೀತ ನೆಗಡಿ ಉಂಟಾಗುತ್ತದೆ. ಇದರ ಜೊತೆ ಗಂಟಲು ನೋವು ಸಹ ಬರುತ್ತದೆ...
ಗಂಟಲು ನೋವಿಗೆ ಅರಿಶಿನ

ಶೀತ, ಕೆಮ್ಮು, ನೆಗಡಿ, ಗಂಟಲು ನೋವಿಗೆ ಅರಿಶಿನ

ಅರಿಶಿನವನ್ನು ನಾವು ನಮಗೆ ಶೀತ, ಕೆಮ್ಮು, ನೆಗಡಿ, ಗಂಟಲು ನೋವು ಬಂದಾಗ ಉಪಯೋಗಿಸುತ್ತೇವೆ. ಅಷ್ಟೇ ಅಲ್ಲದೆ ಗಾಯವನ್ನು ವಾಸಿ ಮಾಡಲು, ಮಧುಮೇಹ ಸಮಸ್ಯೆಯನ್ನು ನಿಯಂತ್ರಣ ಮಾಡಲು, ಮೈಕೈ ನೋವು, ಆರ್ಥ್ರೈಟಿಸ್, ರೋಗನಿರೋಧಕ ಶಕ್ತಿಯನ್ನು ಅಭಿವೃದ್ಧಿಪಡಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಇನ್ನಿತರ ತೊಂದರೆಗಳಿಗೆ ಪರಿಹಾರವಾಗಿ ಬಳಸಬಹುದಾಗಿದೆ ಎಂದು ಡಾ. ದೀಕ್ಷಾ ಭಾವ್ಸರ್ ಹೇಳಿದ್ದಾರೆ. ಗಂಟಲು ನೋವಿನ ಪರಿಹಾರಕ್ಕೆ ಅರಿಶಿನ ಎಂಬ ಗಿಡಮೂಲಿಕೆಯನ್ನು ಸುಲಭವಾಗಿ ಈ ರೀತಿ ಬಳಸಬಹುದು.
ಅರಿಶಿನದ ನೀರಿನಿಂದ ಬಾಯಿ ಮುಕ್ಕಳಿಸುವುದು
![]()
ಒಂದು ಲೋಟ ನೀರು ತೆಗೆದುಕೊಂಡು ಅದಕ್ಕೆ ಒಂದು ಟೇಬಲ್ ಚಮಚ ಅರಿಶಿನ ಪುಡಿಯನ್ನು ಸೇರಿಸಿ ಮೂರರಿಂದ ಐದು ನಿಮಿಷಗಳು ಚೆನ್ನಾಗಿ ಕುದಿಸಬೇಕು. ದಿನದಲ್ಲಿ ಮೂರು ಬಾರಿ ಈ ರೀತಿ ಮಾಡುವುದ ರಿಂದ ಗಂಟಲು ನೋವು ಕ್ರಮೇಣವಾಗಿ ಕಡಿಮೆಯಾಗುತ್ತದೆ.
ಅರಿಶಿನದ ಜೊತೆ ಕಾಳು ಮೆಣಸು

1 ಟೀಚಮಚ ಅರಿಶಿನ, ಒಂದು ಅಥವಾ ಎರಡು ಕುಟ್ಟಿ ಪುಡಿ ಮಾಡಿದ ಕಾಳು ಮೆಣಸು ಮತ್ತು ಒಂದು ಟೀ ಚಮಚ ಜೇನುತುಪ್ಪ ಎಲ್ಲವನ್ನು ಮಿಶ್ರಣ ಮಾಡಿ ಊಟಕ್ಕೆ ಒಂದು ಗಂಟೆ ಮುಂಚೆ ಅಥವಾ ನಂತರದಲ್ಲಿ ದಿನದಲ್ಲಿ ಎರಡರಿಂದ ಮೂರು ಬಾರಿ ಸೇವಿಸುವ ಅಭ್ಯಾಸವಿಟ್ಟುಕೊಳ್ಳಿ. ಇದು ಸಹ ಗಂಟಲು ನೋವಿಗೆ ಒಂದು ಒಳ್ಳೆಯ ಪರಿಹಾರ.
ಅರಿಶಿನ ಮಿಶ್ರಿತ ಹಾಲು

ರಾತ್ರಿ ಮಲಗುವ ಸಂದರ್ಭದಲ್ಲಿ ಈ ಪರಿಹಾರವನ್ನು ಮಾಡಿಕೊಳ್ಳಬಹುದು. ಪ್ರತಿದಿನ ಮಲಗುವಾಗ ನಿಮಗೆ ಒಂದು ವೇಳೆ ಹಸುವಿನ ಹಾಲು ಲಭ್ಯವಿದ್ದರೆ, ಅದನ್ನು ಒಂದು ಲೋಟ ತೆಗೆದುಕೊಂಡು ಅದಕ್ಕೆ ಒಂದು ಟೀ ಚಮಚ ಅರಿಸಿನ ಪುಡಿ ಸೇರಿಸಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಗಂಟಲು ನೋವು ಕಡಿಮೆಯಾಗುತ್ತದೆ ಎಂದು ವೈದ್ಯರಾದ ಡಾ. ದೀಕ್ಷಾ ಭಾವ್ಸರ್ ಹೇಳುತ್ತಾರೆ.
            
            
            As Per The Health Experts Turmeric Has Broad Benefits For Your Throat Pain.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm