ಬ್ರೇಕಿಂಗ್ ನ್ಯೂಸ್
13-11-22 07:29 pm HK News Desk ಡಾಕ್ಟರ್ಸ್ ನೋಟ್
ಧಾರವಾಡ, ನ.13: ಮಕ್ಕಳ ಆರೋಗ್ಯದಲ್ಲಿ ಕಣ್ಣು ಅತಿಮುಖ್ಯ ಪಾತ್ರವನ್ನು ವಹಿಸುತ್ತದೆ. ಕಣ್ಣಿನ ದೃಷ್ಟಿಯ ಬೆಳವಣಿಗೆ ಮಗು ಗರ್ಭವಾಸ್ಥೆಯಲ್ಲಿರುವಾಗಲೇ ಶುರುವಾಗಿ ಮಗುವಿನ ಜನನದ ನಂತರ ಪ್ರೌಡಾವಸ್ಥೆಯವರೆಗೂ ಮುಂದುವರೆಯುತ್ತದೆ. ಕಣ್ಣಿನ ಸಮಸ್ಯೆಯನ್ನು ನಾವು ಎಷ್ಟು ಬೇಗ ಪತ್ತೆಹಚ್ಚುತ್ತೇವೆಯೋ ಅಷ್ಟು ಒಳ್ಳೆಯದು. ಮಕ್ಕಳ ಕಣ್ಣುಗಳನ್ನು ಪರೀಕ್ಷಿಸಿ ಸೂಕ್ತ ಚಿಕಿತ್ಸೆ ಕೊಡಿಸುವದರಿಂದ ಸಾಕಷ್ಟು ಕಣ್ಣಿನ ತೊಂದರೆಗಳನ್ನು ಪರಿಹರಿಸಬಹುದು ಹಾಗೂ ಶಾಶ್ವತ ಅಂಧತ್ವವನ್ನು ತಡೆಗಟ್ಟಬಹುದು ಎಂದು ಡಾ. ರೂಪಾ ಹಿರೇಮಠ ಚಿಕ್ಕ ಮಕ್ಕಳ ನೇತ್ರ ತಜ್ಞರು ಎಂ. ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ, ಧಾರವಾಡ, ಇಂದು ನಗರದ ಎಂ. ಎಂ. ಜೋಶಿ ಕಣ್ಣಿನ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆಯ ನಿಮಿತ್ತ ಜರುಗಿದ ಉಚಿತ ನೇತ್ರ ತಪಾಸಣೆಯಲ್ಲಿ ತಿಳಿಸಿದರು. ಮಕ್ಕಳ ಕಣ್ಣಿನ ಸಾಮಾನ್ಯ ತೊಂದರೆಗಳು, ಲಕ್ಷಣಗಳು ಹಾಗೂ ಕೆಲವು ಸೂಚನೆಗಳನ್ನು ಕೂಡ ಈ ಕೆಳಗಿನಂತೆ ನೀಡಿದ್ದಾರೆ.
ಸಾಮಾನ್ಯವಾಗಿ ಮಕ್ಕಳಲ್ಲಿ ಕಂಡು ಬರುವ ತೊಂದರೆಗಳಾದ ದ್ರಷ್ಟಿ ದೋಷ, ಮೆಳ್ಳುಗಣ್ಣು, ಅಲರ್ಜಿ ಯಿಂದಾಗುವ ತೊಂದರೆಗಳು, ಕಣ್ಣಿಗಾಗುವ ಗಾಯಗಳು, ಕಾಚಬಿಂದು ಹಾಗೂ ಅಕ್ಷಿಪಟಲದ ತೊಂದರೆಗಳಿಗೆ ದೊಡ್ಡವರ ಹಾಗೆ ಚಿಕ್ಕ ಮಕ್ಕಳು ತಮ್ಮ ತೊಂದರೆಯನ್ನು ಹೇಳಿಕೊಳ್ಳುವದಿಲ್ಲ ಆದ್ದರಿಂದ ಇವುಗಳನ್ನು ಸರಿಯಾದ ಸಮಯದಲ್ಲಿ ಪತ್ತೆಹಚ್ಚುವಲ್ಲಿ ಪಾಲಕರ ಹಾಗೂ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಕಾರಣ ಮಕ್ಕಳು ಪುಸ್ತಕವನ್ನು ಹತ್ತಿರ ಹಿಡಿದು ಓದುವದು, ಟಿ.ವಿ. ಯನ್ನು ಹತ್ತಿರದಿಂದ ನೋಡುವದು, ಕಣ್ಣುಗಳನ್ನು ಉಜ್ಜುವದು, ಕಣ್ಣುಗಳಲ್ಲಿ ನೀರು ಬರುವದು, ಕಣ್ಣು ಕೆಂಪಗಾಗುವದು, ಮೆಳ್ಳಗಣ್ಣು, ಕರಿಗುಡ್ಡೆಯ ಕಲೆಗಳು ಈ ತರಹದ ಸಾಮಾನ್ಯ ಲಕ್ಷಣಗಳು ಮಕ್ಕಳಲ್ಲಿ ಕಂಡು ಬಂದರೆ ವೈದ್ಯರ ಸಲಹೆ ಪಡೆಯುವುದು ಉತ್ತಮ.

ಮಕ್ಕಳ ಕಣ್ಣಿನ ಆರೋಗ್ಯಕ್ಕೆ ಕೆಲವು ಸಲಹೆಗಳು
ಮಕ್ಕಳು ಮೊಬೈಲ್ ಬಳಕೆಯನ್ನು ಕಡಿಮೆ ಅಥವಾ ಸಾಧ್ಯವಾದಷ್ಟು ಬಳಸದೆ ಇರುವದು ಉತ್ತಮ, ಸೂರ್ಯನ ಬೆಳಕಿನಲ್ಲಿ ಆಟವಾಡುವುದು, ಕಣ್ಣುಗಳನ್ನು ಉಜ್ಜದೇ ಇರುವದು, ಮೆಳ್ಳುಗಣ್ಣನ್ನು ನಿರ್ಲಕ್ಷಿಸದೆ ಸೂಕ್ತ ಚಿಕಿತ್ಸೆ ಪಡೆಯುವುದು, ಕಣ್ಣಿಗೆ ಯಾವುದೇ ತೊಂದರೆಯಾದಲ್ಲಿ ತಕ್ಷಣ ವೈದ್ಯರನ್ನು ಕಾಣುವದು, ಶಾಲೆಗೆ ಹೋಗುವ ಎಲ್ಲ ಮಕ್ಕಳಿಗೆ ವರ್ಷದಲ್ಲಿ ಒಂದು ಸಲ ಕಣ್ಣಿನ ತಪಾಸಣೆ ಮಾಡಿಸುದು ಉತ್ತಮ ಎಂದು ಅಭಿಪ್ರಾಯ ಪಟ್ಟರು.
ಧಾರವಾಡದ ವಿವಿಧ ಶಾಲಾ ವಿಧ್ಯಾರ್ಥಿಗಳು ಪಾಲಕರೊಂದಿಗೆ ಆಗಮಿಸಿ ನೇತ್ರ ತಪಾಸಣೆಯಲ್ಲಿ ಭಾಗವಹಿಸಿದರು.
M M Joshi Eye Hospital Hubbali conducts free eye checkup on childrens day
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm