ಬ್ರೇಕಿಂಗ್ ನ್ಯೂಸ್
21-04-23 08:43 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ಹೆಚ್ಚಿನವರು ನಿರ್ಜಲೀಕರಣದ ಸಮಸ್ಯೆಯನ್ನು ಅನುಭವಿಸುತ್ತಾರೆ. ಈ ಸೆಕೆಯಿಂದಾಗಿ ಮಲಬದ್ಧತೆ, ಹೊಟ್ಟೆಯಲ್ಲಿ ಉರಿ, ಎದೆಯಲ್ಲಿ ಉರಿ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈ ಸಮಸ್ಯೆಗಳಿಂದ ದೂರವಿರಲು ಬೇಸಿಗೆಯಲ್ಲಿ ನಮ್ಮ ದೇಹವನ್ನು ಆರೋಗ್ಯದಿಂದಿಡುವಂತಹ ಬೇಲದ ಹಣ್ಣಿನ ಜ್ಯೂಸ್ನ್ನು ಕುಡಿಯಬೇಕು ಎನ್ನುತ್ತಾರೆ ಆಯುರ್ವೇದ ವೈದ್ಯರು.
ಅತ್ಯುತ್ತಮ ಬೇಸಿಗೆ ಪಾನೀಯ

ಬೇಲದ ಹಣ್ಣಿನ ಜ್ಯೂಸ್ನ್ನು ಬೇಸಿಗೆಯಲ್ಲಿ ಅತ್ಯುತ್ತಮ ಪಾನೀಯ ಎಂದು ಕರೆಯುತ್ತಾರೆ. ಇದರ ರಸವು ತಂಪು, ಉಲ್ಲಾಸ, ಪೋಷಣೆ, ವಿರೇಚಕ ಇತ್ಯಾದಿ ಗುಣಗಳನ್ನು ಹೊಂದಿದೆ. ಇದು ಬಿಸಿಲಿನ ವಾತಾವರಣಕ್ಕೆ ಟಾನಿಕ್ ನಂತೆ ಕೆಲಸ ಮಾಡುತ್ತದೆ ಎನ್ನುತ್ತಾರೆ ಡಾ. ಅಬ್ರಾರ್ .
ಬೇಲದ ಹಣ್ಣಿನಲ್ಲಿರುವ ಪೋಷಕಾಂಶಗಳು

ಬೇಲದ ಹಣ್ಣು ತುಂಬಾ ಪೌಷ್ಟಿಕವಾಗಿದೆ. ಇದರಲ್ಲಿ ಉತ್ತಮ ಪ್ರಮಾಣದ ಪ್ರೊಟೀನ್, ನೀರು, ಫೈಬರ್, ಕ್ಯಾಲ್ಸಿಯಂ, ಪೊಟಾಶಿಯಂ, ವಿಟಮಿನ್ ಬಿ1, ವಿಟಮಿನ್ ಬಿ2, ವಿಟಮಿನ್ ಸಿ ಲಭ್ಯವಿದೆ. ಇದರ ತಿರುಳು ಹೊಟ್ಟೆ ಮತ್ತು ಜೀರ್ಣಕ್ರಿಯೆಗೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ.
ಹೊಟ್ಟೆಯನ್ನು ತಂಪಾಗಿಸುತ್ತದೆ
![]()
ಬೇಲದ ಹಣ್ಣಿನ ಪಾನಕದ ಸೇವನೆಯು ಹೊಟ್ಟೆಯ ಶಾಖವನ್ನು ಹೋಗಲಾಡಿಸಲು ರಾಮಬಾಣವಾಗಿದೆ. ಇದು ಹೊಟ್ಟೆಗೆ ತಂಪು ನೀಡುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞ ಡಾ.ಅಬ್ರಾರ್ ಮುಲ್ತಾನಿ. ಈ ಬೇಲದ ಹಣ್ಣಿನಿಂದ ಬೇರೆ ಯಾವೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿಯೋಣ.
ಕರುಳನ್ನು ಸಡಿಲಗೊಳಿಸುತ್ತದೆ
![]()
ಜೀರ್ಣಕ್ರಿಯೆಯು ದುರ್ಬಲಗೊಂಡಾಗ, ಕರುಳಿನ ಸಂಕೋಚನವು ಕಡಿಮೆಯಾಗುತ್ತದೆ. ಇದು ಮಲಬದ್ಧತೆಯನ್ನು ಸೃಷ್ಟಿಸುತ್ತದೆ. ಬೇಸಿಗೆಯಲ್ಲಿ ನಿರ್ಜಲೀಕರಣವು ಈ ಸಮಸ್ಯೆಯನ್ನು ಗಂಭೀರಗೊಳಿಸುತ್ತದೆ. ಆದರೆ ಈ ರಸವು ನೀರನ್ನು ಪುನಃ ತುಂಬಿಸುವ ಮೂಲಕ ಕರುಳನ್ನು ಸಡಿಲಗೊಳಿಸುತ್ತದೆ ಮತ್ತು ಸಂಕೋಚನವನ್ನು ಸಾಮಾನ್ಯಗೊಳಿಸಲು ಸಹಾಯ ಮಾಡುತ್ತದೆ.
ಮೂಳೆಯ ಬಲವನ್ನು ಹೆಚ್ಚಿಸುತ್ತದೆ
![]()
ಹೊಟ್ಟೆಯ ಹೊರತಾಗಿ, ಬೇಲ್ ಹಣ್ಣಿನ ರಸವು ಮೂಳೆಗಳಿಗೆ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಕ್ಯಾಲ್ಸಿಯಂ ಮಟ್ಟವು ದೈಹಿಕ ರಚನೆಯನ್ನು ಬಲವಾಗಿಡಲು ಸಹಾಯ ಮಾಡುತ್ತದೆ. ಈ ಪಾನೀಯವು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ.
ರಕ್ತ ಹೆಚ್ಚಾಗುತ್ತದೆ
![]()
ಬೇಲದ ರಸವು ವಿಟಮಿನ್ ಬಿ 2 ಅನ್ನು ಹೊಂದಿರುತ್ತದೆ, ಇದು ದೈಹಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಪೌಷ್ಟಿಕಾಂಶದ ಗುಣವು ಕೆಂಪು ರಕ್ತಕಣಗಳ ಉತ್ಪಾದನೆಗೆ ಸಹಕಾರಿಯಾಗಿದೆ. ಇದರಿಂದ ರಕ್ತದ ಕೊರತೆ ನಿವಾರಣೆಯಾಗುತ್ತದೆ.
bael fruit juice to get rid from constipation and stomach problem in summer.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm