ಬ್ರೇಕಿಂಗ್ ನ್ಯೂಸ್
29-04-21 06:04 pm Boldsky Kannada ಡಾಕ್ಟರ್ಸ್ ನೋಟ್
ಪ್ರಸ್ತುತ ಇರುವ ಕೊರೋನಾ ಸನ್ನಿವೇಶದಲ್ಲಿ ಪ್ರತಿಯೊಬ್ಬರೂ ರೋಗ ನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ಆದರೆ ಈ ರೋಗ ನಿರೋಧಕ ಶಕ್ತಿಯನ್ನು ಹೇಗೆ ಪಡೆಯುವುದು ಎಂಬುದೇ ಎಲ್ಲರಲ್ಲೂ ಇರುವ ದೊಡ್ಡ ಪ್ರಶ್ನೆಯಾಗಿದೆ. ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಅದರ ಜೊತೆಗೆ ನಿಮ್ಮ ಮನೆಯ ಅಡುಗೆ ಕೋಣೆಯಲ್ಲಿರುವ ಕೆಲವೊಂದು ಸಾಮಾಗ್ರಿಗಳಿಂದಲೂ ಅದು ಸಾಧ್ಯ. ಹಾಗಾದರೆ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವ ಅಡುಗೆ ಕೋಣೆಯಲ್ಲಿರುವ ವಸ್ತುಗಳಾವವು ಎಂಬುದನ್ನು ಈ ಲೇಖನದಲ್ಲಿ ವಿವರಿಸಿದ್ದೇವೆ.
ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವ ಅಡುಗೆ ಕೋಣೆಯಲ್ಲಿರುವ ವಸ್ತುಗಳಾವವು ಎಂಬುದನ್ನು ಈ ಕೆಳಗೆ ನೀಡಿದ್ದೇವೆ:
ಸರಿಯಾದ ಪಾತ್ರೆಗಳು:
ಉತ್ತಮ ಶಕ್ತಿ ಮತ್ತು ಎಚ್ಬಿ ಮಟ್ಟಕ್ಕಾಗಿ ಅಡುಗೆಮನೆಯಲ್ಲಿ ಕಬ್ಬಿಣದ ಕಡಾಯಿ, ತವಾ ಮತ್ತು ಸೌಟನ್ನು ಮಾತ್ರ ಬಳಸಬೇಕು. ಕಬ್ಬಿಣದ ಪಾತ್ರೆಗಳಲ್ಲಿ ಬೇಯಿಸಿದ ಆಹಾರವು ಪೌಷ್ಟಿಕಾಂಶಯುಕ್ತವಾಗಿರುತ್ತದೆ ಮತ್ತು ರೋಗಗಳನ್ನು ಪರಿಣಾಮಕಾರಿಯಾಗಿ ಹೋರಾಡಲು ಸಹಾಯ ಮಾಡುತ್ತದೆ.

ಒಣದ್ರಾಕ್ಷಿ ಜೊತೆ ಮೊಸರು:
ಮೊಸರನ್ನು ಊಟದ ಮಧ್ಯೆ ತಿನ್ನಲು ಸಲಹೆ ನೀಡಲಾಗುತ್ತದೆ. ಮೊಸರಿನ ಜೊತೆಗೆ ಒಣದ್ರಾಕ್ಷಿಗಳನ್ನು ಬಳಸುವುದರಿಂದ ಅವುಗಳು ಪ್ರೋಬಯಾಟಿಕ್ಗಳ ಪರಿಪೂರ್ಣ ಪ್ಯಾಕೇಜ್ ಆಗಿರುತ್ತದೆ. ಆದ್ದರಿಂದ ಒಣದ್ರಾಕ್ಷಿಯೊಂದಿಗೆ ಮೊಸರನ್ನು ಸೇರಿಸಿ, ಸೇವಿಸಿ.

ಕಬ್ಬಿನ ಹಾಲು:
ಬೇಸಿಗೆಯಲ್ಲಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮಧ್ಯಾಹ್ನದ ವೇಳೆ ಕಬ್ಬಿನ ರಸವನ್ನು ಕುಡಿಯಿರಿ. ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಸಹಾಯ ಮಾಡುತ್ತದೆ.

ತುಪ್ಪದ ಬಳಕೆ:
ಪ್ರತಿ ಊಟದಲ್ಲಿ ತುಪ್ಪವನ್ನು ತಿನ್ನುವುದು ಒಳ್ಳೆಯ ಅಭ್ಯಾಸವಾದರೂ, ಮಲಗುವ ಮುನ್ನ ರಾತ್ರಿ ನಿಮ್ಮ ಕಾಲಿನ ಪಾದದ ಅಡಿಯಲ್ಲಿ ತುಪ್ಪವನ್ನು ಹಚ್ಚುವುದು ಆರೋಗ್ಯಕರ ಅಭ್ಯಾಸವಾಗಿದೆ. ಏಕೆಂದರೆ ಇದು ವಿಶ್ರಾಂತಿಯ ನಿದ್ರೆಗೆ ಸಹಾಯ ಮಾಡುತ್ತದೆ ಮತ್ತು ಮರುದಿನ ಬೆಳಿಗ್ಗೆ ನೀವು ಫ್ರೆಶ್ ಆಗಿ ಏಳುವಂತೆ ಮಾಡುತ್ತದೆ.

ರಾಗಿಯ ಬಳಕೆ:
ಮಂದತೆಯನ್ನು ದೂರ ಮಾಡಲು ಪ್ರತಿದಿನ ಯಾವುದೇ ರೂಪದಲ್ಲಿ ರಾಗಿಯನ್ನು ಸೇವಿಸಬೇಕು. ರಾಗಿ ಜ್ಯೂಸ್, ರಾಗಿ ದೋಸೆ ಅಥವಾ ರಾಗಿ ಮುದ್ದೆ. ಮನೆಯಿಂದ ಕೆಲಸ ಮಾಡುವ ಜನರು ದಿನವಿಡೀ ಶಕ್ತಿಯುತವಾಗಿರಲು ಇದನ್ನು ಪ್ರತಿದಿನ ತಿನ್ನಬೇಕು. ಇದರಿಂದ ನಿಮ್ಮ ರೋಗ ನಿರೋಧಕ ಶಕ್ತಿ ವೃದ್ಧಿಯಾಗುವುದಲ್ಲದೇ ಚೈತನ್ಯದಿಂದ ಕೂಡಿರುತ್ತೀರಿ.

ಉಪ್ಪಿನ ಬಳಕೆ:
ನಾವೆಲ್ಲರೂ ನಮ್ಮ ದೈನಂದಿನ ಜೀವನದಲ್ಲಿ ಒಂದು ಬಗೆಯ ಉಪ್ಪನ್ನು ಬಳಸುತ್ತಿರುತ್ತೇವೆ. ಆದರೆ ಪ್ರತಿನಿತ್ಯ ವಿವಿಧ ಬಗೆಯ ಉಪ್ಪನ್ನು ಬಳಸಬೇಕು ಎಂದು ತಜ್ಞರು ಸೂಚಿಸುತ್ತಾರೆ. ಒಬ್ಬರು ನಿಯಮಿತವಾಗಿ ಕನಿಷ್ಠ 4 ಬಗೆಯ ಉಪ್ಪನ್ನು ಬಳಸಬೇಕು, ಇದರಿಂದ ದೇಹವು ಅದರ ಒಂದು ರೂಪಕ್ಕೆ ಒಗ್ಗಿಕೊಳ್ಳುವುದಿಲ್ಲ.

ದ್ವಿದಳ ಧಾನ್ಯಗಳ ಬಳಕೆ:
ದ್ವಿದಳ ಧಾನ್ಯಗಳಿಗೆ ಸಂಬಂಧಿಸಿದಂತೆ, ಅವು ದೈನಂದಿನ ಆಹಾರದ ಅವಿಭಾಜ್ಯ ಅಂಗವಾಗಿರಬೇಕು. ಅಡುಗೆ ಮಾಡುವ ಮೊದಲು ಅವುಗಳನ್ನು ನೆನೆಸಿ ಮೊಳಕೆ ಬರುವಂತೆ ಮಾಡಬೇಕು. ಅವುಗಳನ್ನು ರಾಗಿಗಳೊಂದಿಗೆ ಸರಿಯಾದ ಪ್ರಮಾಣದಲ್ಲಿ ಬೆರೆಸಬೇಕು. ಪ್ರತಿ ವಾರ 5 ವಿಧಗಳಲ್ಲಿ ಕನಿಷ್ಠ 5 ಬಗೆಯ ದ್ವಿದಳ ಧಾನ್ಯಗಳನ್ನು ಸೇವಿಸಬೇಕು.

ಗುಲ್ಕಂಡ್ ಬಳಕೆ:
ಬೇಸಿಗೆಯಲ್ಲಿ, ಶಾಖದಿಂದ ದೂರವಿರಲು, ಗುಲ್ಕಂಡ್ ಅನ್ನು ಸೇವಿಸಬೇಕು ಮತ್ತು ಅದನ್ನು ಹಾಲು, ನೀರು ಅಥವಾ ವೀಳ್ಯದೆಲೆಯೊಂದಿಗೆ ಸೇವಿಸಬೇಕು.
A Kannada Copy Of BOLDSKY
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm