ಬ್ರೇಕಿಂಗ್ ನ್ಯೂಸ್
07-05-21 11:21 am Shreeraksha, BoldSky Kannada ಡಾಕ್ಟರ್ಸ್ ನೋಟ್
ತಾಯಿಯ ಎದೆಹಾಲು ಅಮೃತಕ್ಕೆ ಸಮಾನ. ತಾಯಿಯಾದವಳು ತನ್ನ ರಕ್ತವನ್ನೇ ಬಸಿದು ಹಾಲಾಗಿ ಮಾರ್ಪಡಿಸಿ ತನ್ನ ಮಗುವಿಗೆ ನೀಡುತ್ತಾಳೆ. ಇಂತಹ ತಾಯಿ ರೂಪದ ದೇವರಿಗೆ ಕೊರೋನಾ ಉಂಟಾದರೆ, ಆ ಎಳೆ ಕಂದಮ್ಮದ ಗತಿಯೇನು? ಹಾಲುಣಿಸುವ ತಾಯಿಗೆ ಕೊರೋನಾ ಪಾಸಿಟಿವ್ ಆದರೆ ಆಕೆ ತನ್ನ ಮಗುವಿಗೆ ಹಾಲು ನೀಡಬಹುದೇ? ಇಂತಹ ಪ್ರಶ್ನೆ ಹಲವಾರು ತಾಯಂದಿರನ್ನು ಕಾಡುತ್ತಿರಬಹುದು. ಈ ಕುರಿತು ಡಬ್ಲ್ಯೂಎಚ್ಒ ಎನು ಹೇಳುತ್ತೆ ಗೊತ್ತಾ?
ದೇಶದಲ್ಲಿ ಪ್ರತಿ 4 ಜನರಲ್ಲಿ ಒಬ್ಬರು ವೈರಸ್ಗೆ ತುತ್ತಾಗುತ್ತಿರುವುದರಿಂದ ಬಹಳಷ್ಟು ತಾಯಂದಿರು ಕೊರೋನಾ ಪಾಸಿಟಿವ್ ಪಡೆಯುತ್ತಿದ್ದಾರೆ. ಪರಿಸ್ಥಿತಿ ಇಷ್ಟು ಗಂಭೀರವಾಗಿರುವಾಗ, 14 ದಿನಗಳ ಕ್ಯಾರಂಟೈನ್ ಸಮಯದಲ್ಲಿ ತನ್ನ ಮಗುವಿಗೆ ಹಾಲುಣಿಸುವುದು ಸುರಕ್ಷಿತವೇ?
ತಾಯಿಯು ತನ್ನ ಸೋಂಕನ್ನು ಎದೆ ಹಾಲಿನ ಮೂಲಕ ಮಗುವಿಗೆ ವರ್ಗಾಯಿಸಬಹುದು ಎಂಬುದು ನಿಜವಾಗಿದ್ದರೂ ಸಹ, ವಿಶ್ವ ಆರೋಗ್ಯ ಸಂಸ್ಥೆ ಈ ಕುರಿತು ವಿಭಿನ್ನ ಅಭಿಪ್ರಾಯವನ್ನು ನೀಡುತ್ತದೆ. ಮೊದಲನೆಯದಾಗಿ, ಎದೆ ಹಾಲು SARS-CoV-2 ವೈರಸ್ಗಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಆದ್ದರಿಂದ, ನಿಮ್ಮ ಮಗುವಿಗೆ ಆರಾಮವಾಗಿ ಹಾಲುಣಿಸಿ.
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಎದೆಹಾಲಿನಿಂದ ಸಿಗುವ ಪ್ರಯೋಜನಗಳು ಕೊರೋನಾದ ಅಪಾಯವನ್ನು ಕಡಿಮೆ ಮಾಡುತ್ತವೆ. ತಾಯಿಗೆ ಕೊರೋನಾ ಪಾಸಿಟಿವ್ ಆಗಿದ್ದರೂ ತಮ್ಮ ಮಗುವಿಗೆ ಹಾಲುಣಿಸಬಹುದು. ಏಕೆಂದರೆ ಎದೆ ಹಾಲು ಶಕ್ತಿಯುತವಾಗಿದ್ದು, ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ.
ಹೀಗಾಗಿ, ಕೊರೋನಾದಿಂದ ಬಳಲುತ್ತಿರುವ ತಾಯಂದಿರು ತಮ್ಮ ಮಗುವಿಗೆ ಇತರ ಮಹಿಳೆಯಂತೆ ಹಾಲುಣಿಸಬೇಕು.

ಪೌಷ್ಠಿಕಾಂಶದ ಮೂಲ:
ತಾಯಿ ತನ್ನ ಮಗುವಿಗೆ ನೀಡುವ ಅತ್ಯಂತ ಪೌಷ್ಠಿಕ ಆಹಾರವೆಂದರೆ ಎದೆಹಾಲು. ನೀರಿನ ಜೊತೆಗೆ, ಇದು ಕೊಬ್ಬುಗಳು, ಕಾರ್ಬ್ಸ್, ಖನಿಜಗಳು, ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ಸೋಡಿಯಂ ಮತ್ತು ವಿಟಮಿನ್ ಎ, ಸಿ ಮತ್ತು ಡಿ ಗಳನ್ನು ಹೊಂದಿದೆ. ನವಜಾತ ಶಿಶುಗಳಿಗೆ ತಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಎದೆ ಹಾಲು ಅತ್ಯುತ್ತಮ ಮತ್ತು ಏಕೈಕ ಪೋಷಣೆಯ ಮೂಲವಾಗಿದೆ.

ಮಾರಣಾಂತಿಕ ವೈರಲ್ ಸೋಂಕಿನಿಂದ ರಕ್ಷಿಣೆ:
ತಾಯಿಯ ಹಾಲು ಮಗುವಿಗೆ ಮುಖ್ಯವಾಗಿದೆ ಏಕೆಂದರೆ ಇದು ಎಲ್ಲಾ ಪೋಷಕಾಂಶಗಳನ್ನು ಉತ್ತಮ ಪ್ರಮಾಣದಲ್ಲಿ ಹೊಂದಿದ್ದು, ಅದು ಮಗುವಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಿಂದ ನಿಮ್ಮ ಮಗುವಿಗೆ ಯಾವುದೇ ಸೋಂಕು ಅಪಾಯವನ್ನುಂಟುಮಾಡುವುದಿಲ್ಲ. ತಾಯಿಯೊಬ್ಬಳು ತಮ್ಮ ಮಗುವಿಗೆ ಕನಿಷ್ಠ ಆರು ತಿಂಗಳವರೆಗೆ ಹಾಲುಣಿಸಬೇಕು ಎಂದು ವೈದ್ಯರು ಮತ್ತು ತಜ್ಞರು ಶಿಫಾರಸು ಮಾಡುತ್ತಾರೆ.

ರೋಗ ನಿರೋಧಕ ಶಕ್ತಿಯ ವೃದ್ಧಿ:
ನಿಮ್ಮ ಮಗುವಿನ ರೋಗನಿರೋಧಕ ಶಕ್ತಿಯ ವಿಚಾರಕ್ಕೆ ಬಂದಾಗ ಎದೆಹಾಲು ಅಮೃತದಂತೆ. ಇಮ್ಯುನೊಲಾಜಿಯಲ್ಲಿ ಫ್ರಾಂಟಿಯರ್ಸ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಎದೆ ಹಾಲಿನ ಸಹಜ ಪ್ರತಿರಕ್ಷಣಾ ವ್ಯವಸ್ಥೆಯು ಸೋಂಕುಗಳ ವಿರುದ್ಧದ ಹೋರಾಡುವಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಹಾಲು ಕುಡಿದ ಕೆಲವೇ ನಿಮಿಷಗಳಲ್ಲಿ ಸಕ್ರಿಯಗೊಳ್ಳುತ್ತದೆ.
(Kannada Copy of Boldsky Kannada)
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm